ಆ್ಯಪ್ನಗರ

ಅನರ್ಹ ಶಾಸಕರ ಜತೆಗೆ ನಾವಿದ್ದೇವೆ, ವಿಚಾರಣೆ ಬೇಗ ಮುಗಿಯಲಿ: ಸಚಿವ ಅಶೋಕ್‌

ಕಾಂಗ್ರೆಸ್‌, ಜೆಡಿಎಸ್‌ ದೋಸ್ತಿ ಸರಕಾರ ಉರುಳಲು ಕಾರಣರಾದ 17 ಶಾಸಕರು ಈಗ ಅನರ್ಹರಾಗಿದ್ದಾರೆ. ಸುಪ್ರೀಂ ಕೋರ್ಟ್‌ ವಿಚಾರಣೆ ಮುಂದೂಡಿಕೆಯಾಗಿದ್ದರಿಂದ ಅತಂತ್ರರೂ ಆಗಿದ್ದಾರೆ.

Vijaya Karnataka Web 17 Sep 2019, 8:19 pm
ಬೆಂಗಳೂರು: ಕಾಂಗ್ರೆಸ್‌, ಜೆಡಿಎಸ್‌ ಸರಕಾರದ ಅವಧಿಯಲ್ಲಿ ರಾಜೀನಾಮೆ ನೀಡಿ ಈಗ ಅನರ್ಹರಾಗಿರುವ ಶಾಸಕರು ಈಗ ಅಡಕತ್ತರಿಯಲ್ಲಿ ಸಿಲುಕಿದ್ದಾರೆ. ಆದರೆ ಅವರಿಗೆ ಬಿಜೆಪಿ ನಾಯಕರು ಬೆಂಬಲ ಸೂಚಿಸುತ್ತಿದ್ದಾರೆ.
Vijaya Karnataka Web ಅಶೋಕ್‌
ಅಶೋಕ್‌


ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್‌. ಅಶೋಕ್‌, ಅನರ್ಹ ಶಾಸಕರ ಜತೆ ನಾವು ಇರುತ್ತೇವೆ. ಅವರ ಭಾವನೆಗಳಿಗೆ ನಮ್ಮ ಸಹಮತ ಇದೆ ಎಂದು ಭರವಸೆ ನೀಡಿದರು.

ವಿಧಾನಸಭಾ ಸ್ಪೀಕರ್ ಆದೇಶ ಪ್ರಶ್ನಿಸಿ ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆಯಾದ ಕುರಿತು ಮಾತನಾಡಿದ ಅಶೋಕ್‌, ಇದು ಸುಪ್ರೀಂ ಕೋರ್ಟ್‌ಗೆ ಸಂಬಂಧಪಟ್ಟ ವಿಚಾರ. ಮಾಧ್ಯಮಗಳಲ್ಲಿ ನೋಡಿ ತಿಳಿದುಕೊಂಡಿದ್ದೇನೆ ಹೆಚ್ಚಿನ ಮಾಹಿತಿ ಇಲ್ಲ ಎಂದರು.

ಆದಷ್ಟು ಬೇಗ ವಿಚಾರಣೆ ನಡೆದು ತೀರ್ಮಾನ ಆಗಲಿ. ನಾವು ಕೂಡಾ ಅನರ್ಹ ಶಾಸಕರ ಜೊತೆ ಇದ್ದೇವೆ. ಅವರ ಭಾವನೆಗಳಿಗೆ ನಮ್ಮ ಸಹಮತ ಇದೆ. ನಿನ್ನೆ ಕೂಡಾ ಶಾಸಕರು ನನ್ನ ಭೇಟಿ ಮಾಡಿ ಚರ್ಚೆ ನಡೆಸಿದರು ಎಂದು ಸಚಿವರು ತಿಳಿಸಿದರು.

ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇರೋದ್ರಿಂದಲೇ ನಾವೂ ಉಪಚುನಾವಣೆ ಸಿದ್ಧತೆಗಳನ್ನು ಮಾಡಿಕೊಂಡಿಲ್ಲ. ನ್ಯಾಯಾಲಯದ ತೀರ್ಪು ಬಂದ ನಂತರ ಚುನಾವಣಾ ಪ್ರಕ್ರಿಯೆಗಳು ಆರಂಭವಾಗುತ್ತವೆ. ಕೇಸ್ ಇರೋದ್ರಿಂದ ಚುನಾವಣೆ ನಡೆಯುತ್ತೋ ಇಲ್ಲವೋ ಎಂಬ ಸ್ಪಷ್ಟತೆಯೂ ಇಲ್ಲ ಎಂದು ಹೇಳಿದರು

ತೀರ್ಪು ಬಂದ ನಂತರ ಚುನಾವಣಾ ಸಿದ್ಧತೆ ಬಗ್ಗೆ ತೀರ್ಮಾನ ತೆಗೆದುಕೊಳ್ತೇವೆ ಎಂದು ಸಚಿವ ಆರ್‌. ಅಶೋಕ್‌ ಸ್ಪಷ್ಟಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ