ಆ್ಯಪ್ನಗರ

ಸೈಕಲ್​ ತುಳಿದು ಬಿಜೆಪಿ ಕಟ್ಟಿದವರು ಯಡಿಯೂರಪ್ಪ: ರಾಜನಾಥ್​​ ಸಿಂಗ್​ ಮೆಚ್ಚುಗೆ

ಯಡಿಯೂರಪ್ಪ ಅವರು ತಮ್ಮ ರಾಜಕೀಯದ ಪ್ರಾರಂಭದ ದಿನಗಳಲ್ಲಿ ಸೈಕಲ್​ ತುಳಿದು ಬಿಜೆಪಿ ಪಕ್ಷ ಕಟ್ಟಿದ್ದಾರೆ. ಅವರೊಬ್ಬ ಹುಟ್ಟು ಹೊರಾಟಗಾರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Vijaya Karnataka Web 27 Feb 2020, 7:07 pm
ಬೆಂಗಳೂರು: ಯಡಿಯೂರಪ್ಪ ಅವರು ತಮ್ಮ ರಾಜಕೀಯದ ಪ್ರಾರಂಭದ ದಿನಗಳಲ್ಲಿ ಸೈಕಲ್ ತುಳಿದು ಬಿಜೆಪಿ ಪಕ್ಷ ಕಟ್ಟಿದ್ದಾರೆ. ಅವರೊಬ್ಬ ಹುಟ್ಟು ಹೊರಾಟಗಾರ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Vijaya Karnataka Web rajanath singh at bsy


ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 78ನೇ ಹುಟ್ಟುಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಯಡಿಯೂರಪ್ಪ ಒಬ್ಬ ರೈತ ಕುಟುಂದಿಂದ ಬಂದವರು. ಅವರ ಕಠಿಣ ಪರಿಶ್ರಮದಿಂದ ಬೆಳೆದು ಈ ಮಟ್ಟಕ್ಕೆ ಬೆಳೆದು ಬಂದಿದ್ದಾರೆ ಎಂದು ಬಿಜೆಪಿಗೆ ಯಡಿಯೂರಪ್ಪ ಅವರ ಕೊಡುಗೆಯನ್ನು ಸ್ಮರಿಸಿದರು.

ಎಲ್ಲರೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಯಡಿಯೂರಪ್ಪ ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರಿಂದ ಅವರಿಗೆ ರೈತರ ಮೇಲಿರುವ ಪ್ರೀತಿ ಗೌರವ ಎಂತಹದು ಎಂದು ತಿಳಿಯುತ್ತದೆ ಎಂದು ರಾಜನಾಥ್ ಸಿಂಗ್ ಹೇಳಿದರು.

ರಾಜಕೀಯ ಬೇರೆ ಮನುಷ್ಯ ಸಂಬಂಧ ಬೇರೆ, ಬಿಎಸ್‌ವೈ ಅಭಿನಂದನಾ ಸಮಾವೇಶದಲ್ಲಿ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಹಲವಾರು ಗಣ್ಯರು ಪಾಲ್ಗೊಂಡು ಯಡಿಯೂರಪ್ಪ ಅವರಿಗೆ ಅಭಿನಂದಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಯಡಿಯೂರಪ್ಪ ಅವರಿಗೆ ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿದರು. ಬಳಿಕ ವೇದಿಕೆಯ ಮುಂದೆ ಅಕ್ಕಪಕ್ಕದಲ್ಲಿ ಕುಳಿತು ಕುಶಲೋಪರಿ ವಿಚಾರಿಸಿದ್ದು ಎಲ್ಲರ ಗಮನ ಸೆಳೆಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ