ಆ್ಯಪ್ನಗರ

ಚಿನ್ನ, ಬೆಳ್ಳಿಯ ಮೇಲೆ ಹೆಚ್ಚುವರಿ ತೆರಿಗೆಗೆ ವಿರೋಧ

ಕೇಂದ್ರ ಸರಕಾರ ಚಿನ್ನಾಭರಣಗಳ ಮೇಲೆ ವಿಧಿಸಿರುವ ಹೆಚ್ಚುವರಿ ತೆರಿಗೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿಪಟ್ಟಣದ ಚಿನ್ನ ಬೆಳ್ಳಿ ವ್ಯಾಪಾರಸ್ಥರ ಸಂಘದ ಸದಸ್ಯರು ಅಂಗಡಿಗಳನ್ನು ಮುಚ್ಚುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.

ವಿಕ ಸುದ್ದಿಲೋಕ 13 Mar 2016, 5:21 am
ವಿಜಯಪುರ: ಕೇಂದ್ರ ಸರಕಾರ ಚಿನ್ನಾಭರಣಗಳ ಮೇಲೆ ವಿಧಿಸಿರುವ ಹೆಚ್ಚುವರಿ ತೆರಿಗೆಯನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿಪಟ್ಟಣದ ಚಿನ್ನ ಬೆಳ್ಳಿ ವ್ಯಾಪಾರಸ್ಥರ ಸಂಘದ ಸದಸ್ಯರು ಅಂಗಡಿಗಳನ್ನು ಮುಚ್ಚುವ ಮೂಲಕ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
Vijaya Karnataka Web
ಚಿನ್ನ, ಬೆಳ್ಳಿಯ ಮೇಲೆ ಹೆಚ್ಚುವರಿ ತೆರಿಗೆಗೆ ವಿರೋಧ


ಪಟ್ಟಣದ ಹಳೇ ಕೆನರಾಬ್ಯಾಂಕ್ ರಸ್ತೆಯಲ್ಲಿರುವ ಚಿನ್ನ, ಬೆಳ್ಳಿ ಆಭರಣಗಳ ಅಂಗಡಿಗಳನ್ನು ಬಂದ್ ಮಾಡಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಹಾಕಿದರು.

ವಿಜಯಪುರ ಜ್ಯುವೆಲ್ಲರಿ ಅಸೋಸಿಯೇಷನ್ ಅಧ್ಯಕ್ಷ ರಾಜು ಮಾತನಾಡಿ, ಕೇಂದ್ರ ಸರಕಾರದ ನಿರ್ಧಾರದಿಂದ ಚಿನ್ನ, ಬೆಳ್ಳಿ ವ್ಯಾಪಾರಸ್ಥರು ಹಾಗೂ ಉದ್ಯಮದ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಈಗಾಗಲೇ ಆಮದು ಸುಂಕ ಮತ್ತು ವ್ಯಾಟ್‌ನಿಂದ ಸೊರಗಿರುವ ಉದ್ಯಮಕ್ಕೆ ಕೇಂದ್ರ ಸರಕಾರ ಜಾರಿ ಮಾಡಿರುವ ಸುಂಕದಿಂದ ಮತ್ತಷ್ಟು ಸಂಕಷ್ಟ ಎದುರಾಗಿದೆ. ಹೆಚ್ಚುವರಿ ತೆರಿಗೆಯಿಂದ ಗ್ರಾಹಕರು ಹಾಗೂ ವ್ಯಾಪಾರಸ್ಥರಿಗೆ ಹೊರೆಯಾಗಲಿದೆ. ಸರಕಾರ ಹೆಚ್ಚಿಸಿರುವ ತೆರಿಗೆ ಪ್ರಮಾಣವನ್ನು ಗ್ರಾಹಕರೇ ಭರಿಸಬೇಕಾಗಿದೆ. ಗ್ರಾಹಕರ ಮತ್ತು ವ್ಯಾಪಾರಿಗಳ ಹಿತದೃಷ್ಟಿಯಿಂದ ತೆರಿಗೆ ಮತ್ತು ಹೆಚ್ಚಿಸಿರುವ ಸುಂಕವನ್ನು ಕೇಂದ್ರ ಸರಕಾರ ಕಡಿತಗೊಳಿಸಬೇಕು ಎಂದು ಆಗ್ರಹಿಸಿದರು.

ಉಪಾಧ್ಯಕ್ಷ ಶಿವಕುಮಾರ್ ಮಾತನಾಡಿ, ಬ್ಯಾಂಕ್‌ಗಳಲ್ಲಿ 2 ಲಕ್ಷ ರೂ. ವಹಿವಾಟು ನಡೆಸಲು ಪ್ಯಾನ್‌ಕಾರ್ಡ್ ಕಡ್ಡಾಯಗೊಳಿಸಿರುವುದು ಹಾಗೂ ಶೇ 1 ರಷ್ಟು ಅಬಕಾರಿ ಸುಂಕವನ್ನು ಹೆಚ್ಚಳ ಮಾಡಿರುವ ಕ್ರಮ ಸರಿಯಲ್ಲ, ಸರಕಾರ ಬಜೆಟ್‌ನಲ್ಲಿ ಜಾರಿ ಮಾಡುವ ಮೊದಲು ವ್ಯಾಪಾರಸ್ಥರೊಂದಿಗೆ ಚರ್ಚೆ ನಡೆಸಬೇಕಿತ್ತು. ಈಗ ಏಕಾಏಕಿ ಈ ರೀತಿಯಾದ ವರ್ತನೆಯಿಂದ ಲಕ್ಷಾಂತರ ಚಿನ್ನಬೆಳ್ಳಿ ವ್ಯಾಪಾರಸ್ಥರ ಕುಟುಂಬಗಳು ಸಂಕಷ್ಟಕ್ಕೆ ಗುರಿಯಾಗಲಿವೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ