ಆ್ಯಪ್ನಗರ

ಸಾಲಬಾಧೆ: ರೈತ ಆತ್ಮಹತ್ಯೆ

ತಾಲೂಕಿನ ಆಲೂರುದುದ್ದನಹಳ್ಳಿ ಗ್ರಾಮದ ರೈತ ಮೂರ್ತಿ ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ವಿಕ ಸುದ್ದಿಲೋಕ 21 Mar 2017, 9:00 am

ದೇವನಹಳ್ಳಿ: ತಾಲೂಕಿನ ಆಲೂರುದುದ್ದನಹಳ್ಳಿ ಗ್ರಾಮದ ರೈತ ಮೂರ್ತಿ ಸಾಲಬಾಧೆಗೆ ಹೆದರಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

Vijaya Karnataka Web
ಸಾಲಬಾಧೆ: ರೈತ ಆತ್ಮಹತ್ಯೆ

ಪತ್ನಿ ನಾಗವೇಣಿ, ಲೇಖನ ಮತ್ತು ಭವಿತ್‌ ಗೌಡ ಇಬ್ಬರು ಮಕ್ಕಳಿದ್ದು, ಗ್ರಾಮದಲ್ಲಿ ಸುಮಾರು 2 ಎಕರೆಯಲ್ಲಿ ಮಳೆ ಆಧಾರಿತ ಕೃಷಿ ಮಾಡುತ್ತಿದ್ದ. ಬಿತ್ತನೆಗೆ ಮತ್ತು ಕೃಷಿ ಚಟುವಟಿಕೆಗಳಿಗೆ ದೊಡ್ಡಬಳ್ಳಾಪುರ ಶಾಖೆಯ ಎಸ್‌ಬಿಐ ಬ್ಯಾಂಕ್‌ನಲ್ಲಿ 2 ಲಕ್ಷ ರೂ. ಸಾಲ ಮಾಡಿದ್ದ. ಕಳೆದ ಎರಡು ತಿಂಗಳಿಂದ ಮೂರ್ನಾಲ್ಕು ಭಾರಿ ಬ್ಯಾಂಕ್‌ನಿಂದ ಸಾಲ ತೀರಿಸುವಂತೆ ನೊಟೀಸ್‌ ಜಾರಿ ಮಾಡಲಾಗಿತ್ತು. ಇದರಿಂದ ಮನನೊಂದ ಭಾನುವಾರ ಬೆಳಿಗ್ಗೆ ಮನೆಯಿಂದ ಹೊರಟು ತನ್ನ ಹೊಲದಲ್ಲೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೃತ ರೈತ ಬ್ಯಾಂಕ್‌ನಲ್ಲಿ ಮತ್ತು ಕೈಸಾಲವಾಗಿ ಸುಮಾರು 10 ಲಕ್ಷ ಸಾಲ ಮಾಡಿದ್ದ ಎಂದು ಮೃತ ಕುಟುಂಬಸ್ಥರು ತಿಳಿಸಿದ್ದಾರೆ. ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಪಿಳ್ಳಮುನಿಶಾಮಪ್ಪ ಸ್ಥಳಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ ಸರಕಾರದಿಂದ ಬರುವ ಎಲ್ಲಾ ಸವಲತ್ತು, ಧನಸಹಾಯವನ್ನು ಬರುವಂತೆ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಮೃತ ಕುಟುಂಬಕ್ಕೆ ಧನ ಸಹಾಯ

ತಾಲೂಕಿನಲ್ಲಿ ರೈತ ಸಾವನ್ನಪ್ಪಿರುವ ಘಟನೆ ತಿಳಿದ ಸಮಾಜ ಸೇವಕ ಜೆಡಿಎಸ್‌ ಮುಖಂಡ ನಿಸರ್ಗ ಎಸ್‌.ಎಲ್‌ ನಾರಾಯಣಸ್ವಾಮಿ ಕುಟುಂಬಕ್ಕೆ ಸಾಂತ್ವನ ತಿಳಿಸಿ. ಕುಟುಂಬಕ್ಕೆ 25,000 ಸಾವಿರ ಧನ ಸಹಾಯ ಮಾಡಿದರು. ರಾಜ್ಯದಲ್ಲಿ ಭೀಕರ ಬರಗಾಲ ಎದುರಾಗಿದ್ದು, ರೈತರು ಎದುರಿಸಿ ನಿಲ್ಲಬೇಕು. ಸರಕಾರದಿಂದ ಬರುವ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ರೈತರು ಯಾರೂ ಆತ್ಮಹತ್ಯೆಗೆ ಪ್ರಯತ್ನಿಸಬಾರದೆಂದು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ