ಆ್ಯಪ್ನಗರ

ಸರಕಾರಿ ಕಾಲೇಜಿನಲ್ಲಿ 1 ಕೋಟಿ ವೆಚ್ಚದ ಸಭಾಭವನ

ಸಭಾ ಭವನ ಮಾಡುತ್ತಿರುವುದರಿಂದ ವೇದಿಕೆ ಕಾರ್ಯಕ್ರಮಗಳಿಗೆ ಅನುಕೂಲವಾಗುತ್ತದೆ. ಕಾಲೇಜಿನಲ್ಲಿ ಏನೇ ಸಭೆ, ಸಮಾರಂಭಗಳು ನಡೆಯಬೇಕಾದರೆ ಇದನ್ನು ಉಪಯೋಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು.

Vijaya Karnataka 2 Mar 2019, 5:00 am
ದೇವನಹಳ್ಳಿ :ಸಭಾ ಭವನ ಮಾಡುತ್ತಿರುವುದರಿಂದ ವೇದಿಕೆ ಕಾರ್ಯಕ್ರಮಗಳಿಗೆ ಅನುಕೂಲವಾಗುತ್ತದೆ. ಕಾಲೇಜಿನಲ್ಲಿ ಏನೇ ಸಭೆ, ಸಮಾರಂಭಗಳು ನಡೆಯಬೇಕಾದರೆ ಇದನ್ನು ಉಪಯೋಗಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು.
Vijaya Karnataka Web 1 crore cost conference hall at government college
ಸರಕಾರಿ ಕಾಲೇಜಿನಲ್ಲಿ 1 ಕೋಟಿ ವೆಚ್ಚದ ಸಭಾಭವನ


ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ನೂತನ ಸಭಾ ಭವನಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾಲೇಜು ಆವರಣದಲ್ಲಿ ಸಭಾ ಭವನಕ್ಕೆ ಬಯಪ ಅನುದಾನದಲ್ಲಿ 1 ಕೋಟಿ ರೂ ಗಳ ವೆಚ್ಚದಲ್ಲಿ 750 ಆಸನಗಳನ್ನು ಒಳಗೊಂಡ. ಸಭಾ ಭವನದ ಬೇಡಿಕೆಯ ಅವಶ್ಯಕತೆ ಇದ್ದರಿಂದ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅನುದಾನದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಓದಿನ ಕಡೆ ಆಸಕ್ತಿ ನೀಡುವುದರ ಮೂಲಕ ಕಾಲೇಜಿನ ಕೀರ್ತಿ ಹೆಚ್ಚಿಸಬೇಕು. ಸರಕಾರಿ ಕಾಲೇಜುಗಳಿಗೆ ಹೆಚ್ಚಿನ ವಿದ್ಯಾರ್ಥಿಗಳು ಬರುವಂತೆ ಆಡಳಿತ ಮಂಡಳಿ ಕಾರ್ಯನಿರ್ವಹಿಸಬೇಕು ಎಂದು ಸಲಹೆ ಮಾಡಿದರು.

ಕಾಲೇಜು ಪ್ರಾಂಶುಪಾಲ ಶಿವಶಂಕರಪ್ಪ ಮಾತನಾಡಿ, ಕಾಲೇಜಿನ ಅಭಿವೃದ್ಧಿ ಹಂತ ಹಂತವಾಗಿ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಹೊಂದುವ ಮೂಲಕ ತಾಲೂಕಿನಲ್ಲಿಯೇ ಸುಸ್ಸಜ್ಜಿತ ಕಾಲೇಜು ಎಂಬ ಹೆಗ್ಗಳಿಕೆಗೆ ಪಾತ್ರವಾಗಲು ಜನಪ್ರತಿನಿಧಿಗಳು ಸಹಕರಿಸುತ್ತಿದ್ದಾರೆ. ಇದೇ ರೀತಿ ವಿದ್ಯಾರ್ಥಿಗಳು ಸಹ ಶಿಸ್ತು, ಸಂಯಮದೊಂದಿಗೆ ಕಾಲೇಜಿಗೆ ದಿನನಿತ್ಯ ಹಾಜರಾಗುವಂತೆ ಆಗಬೇಕು ಎಂದರು.

ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ಮಂಜುನಾಥ್‌, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಮುನಿರಾಜು, ಮಾಜಿ ಅಧ್ಯಕ್ಷ ಮುನೇಗೌಡ, ತಾಪಂ ಸದಸ್ಯ ಮಹೇಶ್‌, ಮುಖಂಡರಾದ ಜಯರಾಮೇಗೌಡ, ಪುರಸಭಾ ಸದಸ್ಯರಾದ ಗೋಪಾಲ್‌, ರವೀಂದ್ರ, ಡೈರಿ ನಾಗೇಶ್‌, ಕಾಲೇಜಿನ ಉಪನ್ಯಾಸಕರು, ವಕೀಲ ಸುನೀಲ್‌, ಮುತ್ತು, ಗುತ್ತಿಗೆದಾರ ಸುಬ್ರಮಣಿ, ಚಿಕ್ಕಣ್ಣ, ಮತ್ತಿತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ