ಆ್ಯಪ್ನಗರ

50 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ 50 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ...

Vijaya Karnataka 20 Jan 2019, 5:00 am
ಬೆಂಗಳೂರು ಗ್ರಾಮಾಂತರ: ದಟ್ಟ ಮಂಜು ಕವಿದ ಹಿನ್ನೆಲೆಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ 50 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ. ಕಳೆದ ಎರಡು ದಿನಗಳಿಂದ ವಿಮಾನ ನಿಲ್ದಾಣದಲ್ಲಿ ಮುಂಜಾನೆ ಮಂಜು ಮುಸುಕಿರುವುದರಿಂದ ವಿಮಾನಗಳ ಆಗಮನ ಮತ್ತು ನಿರ್ಗಮನ ವಿಳಂಬವಾಗಿದೆ.
Vijaya Karnataka Web 50 filights or delay on saturday
50 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ


ಶನಿವಾರ 28 ವಿಮಾನಗಳ ನಿರ್ಗಮನ, 12 ವಿಮಾನಗಳ ಆಗಮನದಲ್ಲಿ ವಿಳಂಬವಾಗಿದೆ. ಇದರ ಜತೆಗೆ ಬೆಳಗ್ಗೆ 7.05ರಿಂದ 8.57ರವರೆಗೆ ವಿಮಾನಗಳ ಹಾರಾಟಕ್ಕೆ ನಿರ್ಬಂದ ಹೇರಲಾಗಿತ್ತು. ದಟ್ಟ ಮಂಜಿನಿಂದಾಗಿ 10 ವಿಮಾನಗಳ ಮಾರ್ಗಗಳನ್ನು ಬದಲಾವಣೆ ಮಾಡಲಾಗಿತ್ತು.

ಗುರುವಾರ ಕೂಡ 66 ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿತ್ತು. ಮಂಜಿನಾಟಕ್ಕೆ 44 ವಿಮಾನಗಳ ನಿರ್ಗಮನ, 18 ವಿಮಾನಗಳ ಆಗಮನದಲ್ಲಿ ವಿಳಂಬವಾಗಿದ್ದರೆ 4 ವಿಮಾನಗಳ ಮಾರ್ಗಗಳನ್ನು ಬದಲಿಸಲಾಗಿತ್ತು.

ಸಂಕ್ರಾಂತಿ ಬಳಿಕ ರಾಜ್ಯದಲ್ಲಿ ಚಳಿ ತೀವ್ರಗೊಂಡಿದೆ. ಜಿಲ್ಲೆಯಲ್ಲೂ ಚಳಿಗೆ ಜನ ಥಂಡಾ ಹೊಡೆದಿದ್ದಾರೆ. ರಸ್ತೆಗಳಲ್ಲಿ ಮಂಜು ಮುಸುಕಿರುವ ಹಿನ್ನೆಲೆಯಲ್ಲಿ ವಾಹನ ಚಲಾಯಿಸಲು ಸವಾರರು ಪರದಾಡುವಂತಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ