ಆ್ಯಪ್ನಗರ

ಬೆಂಗಳೂರು: ರೌಡಿ ಶೀಟರ್ ಕಾಲಿಗೆ ಪೊಲೀಸರಿಂದ ಗುಂಡೇಟು

ಇಂದು ಬೆಳಗ್ಗೆ ನಗರದಲ್ಲಿ ಗುಂಡಿನ ಮೊರೆತ ಕೇಳಿಬಂದಿದೆ. ರೌಡಿ ಶೀಟರ್ ಕಿರಣ್ ಅಲಿಯಾಸ್ ತಮಾಣೆ ಕಾಲಿಗೆ, ಮಾಗಡಿ ಸರ್ಕಲ್ ಇನ್ಸ್ ಪೆಕ್ಟರ್ ಗುಂಡು ಹಾರಿಸಿದ್ದಾರೆ.

Vijaya Karnataka Web 15 Mar 2020, 12:05 pm
ಬೆಂಗಳೂರು: ಇಂದು ನಗರದಲ್ಲಿ ರೌಡಿ ಶೀಟರ್ ಕಿರಣ್ ಅಲಿಯಾಸ್ ತಮಾಣೆ ಕಾಲಿಗೆ, ಮಾಗಡಿ ಸರ್ಕಲ್ ಇನ್ಸ್ ಪೆಕ್ಟರ್ ಗುಂಡು ಹಾರಿಸಿದ ಘಟನೆ
Vijaya Karnataka Web rowdy kiran

ಬೆಂಗಳೂರು ಹೊರವಲಯದ ಕೆಂಗೇರಿ ಸಮೀಪದ ಸೂಲಿಕೆರೆ ಅರಣ್ಯದ ಬಳಿ ನಡೆದಿದೆ.

20 ದಿನಗಳ ಹಿಂದೆ ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಣ್ಣೂರು ಗ್ರಾಮದ ನಿವಾಸಿ‌ ಲೋಕನಾಥ್ ಎಂಬುವವರ ಮನೆಯಲ್ಲಿ ಕಿರಣ್ ಅಲಿಯಾಸ್ ತಮಾಣೆ ಸೇರಿದಂತೆ 13 ಜನರು ಬಂದು ಡಕಾಯಿತಿ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ರೌಡಿ ಶೀಟರ್ ಕಿರಣ್ ಅಲಿಯಾಸ್ ತಮಾಣೆ ಬಂಧನವಾಗಿತ್ತು.

ಈ ಪ್ರಕರಣ ಸಂಬಂಧ ತನಿಖೆಗೆ ಕರೆದುಕೊಂಡು ಹೋಗುವಾಗ, ಕುದೂರು ಠಾಣೆ ಪೊಲೀಸ್ ಪೇದೆ ವೀರಭದ್ರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ.
ಈ ವೇಳೆ ಮಾಗಡಿ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್, ತಮಾಣೆ ಎಡಗಾಲಿಗೆ ಗುಂಡು ಹಾರಿಸಿದ್ದಾರೆ.

ರೌಡಿ ಶೀಟರ್ ಕಿರಣ್ ಅಲಿಯಾಸ್ ತಮಾಣೆ 2016ರಲ್ಲಿ ಕೆಂಗೇರಿ ಮಾರಹನುಮ ಅಲಿಯಾಸ್ ಚಿಚಿ ಎಂಬಾತನನ್ನು ಮರ್ಡರ್ ಮಾಡಿದ್ದ. ಈತನ ಮೇಲೆ ಕೆಂಗೇರಿ, ತಾವರೆಕೆರೆ, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ 11 ಪ್ರಕರಣಗಳು‌ ದಾಖಲಾಗಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ