ಆ್ಯಪ್ನಗರ

ದೊಡ್ಡಬಳ್ಳಾಪುರ: ಅಕ್ರಮ ಲೇಔಟ್‌ಗಳ ತೆರವು, 111 ಲೇಔಟ್‌ಗಳಿಗೆ ನೋಟಿಸ್

ತಾಲೂಕಿನಲ್ಲಿ ಕಂದಾಯ ಇಲಾಖೆಯ ಪರವಾನಗಿ ಇಲ್ಲದೆ ಅಕ್ರಮವಾಗಿ ನಿರ್ಮಿಸಿದ್ದ ಲೇಔಟ್‌ಗಳನ್ನು ತೆರವುಗೊಳಿಸಲಾಯಿತು. ದೊಡ್ಡಬಳ್ಳಾಪುರ ತಾಲೂಕಿನ ವಿವಿಧೆಡೆ ನಿರ್ಮಾಣವಾಗಿದ್ದ 17 ಎಕರೆ 11 ಗುಂಟೆ ಜಾಗವನ್ನು ತೆರವುಗೊಳಿಸಲಾಯಿತು.

Vijaya Karnataka Web 8 Oct 2020, 2:06 pm
ದೊಡ್ಡಬಳ್ಳಾಪುರ ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳ ಆದೇಶದಂತೆ ದೊಡ್ಡಬಳ್ಳಾಪುರ ತಹಸೀಲ್ದಾರ್‌ ಟಿ. ಶಿವರಾಜ್‌ ನೇತೃತ್ವದಲ್ಲಿ ಅನಧಿಕೃತ ಬಡಾವಣೆಗಳ ತೆರವು ಕಾರ್ಯ ನಡೆದಿದೆ. ಅನಧಿಕೃತ ಬಡಾವಣೆಗಳ ತೆರವು ಭೂ ಪರಿವರ್ತನೆ ಆಗದೇ ಇರುವ ಮತ್ತು ಯೋಜನಾ ಪ್ರಾಧಿಕಾರಗಳಿಂದ ಅನುಮತಿ ಪಡೆಯದೆ ನಿರ್ಮಾಣವಾಗಿದ್ದ ಅನಧಿಕೃತ ಬಡಾವಣೆಗಳ ವಿರುದ್ಧ ಮೊದಲ ಹಂತದ ತೆರವು ಕಾರ್ಯಾಚರಣೆ ಮಾಡಲಾಯಿತು.
Vijaya Karnataka Web ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ


ಮಧುರೆ ಹೋಬಳಿಯ ಸುತ್ತಮುತ್ತ ಕೃಷಿ ಭೂಮಿಯಲ್ಲಿ ಕಳೆದ ಕೆಲ ವರ್ಷಗಳಿಂದ ಅಕ್ರಮವಾಗಿ ಲೇಔಟ್‌ ನಿರ್ಮಾಣ ಮಾಡಲಾಗಿತ್ತು. ಮೊದಲು ಕೆರೆಯ ಸ್ವಲ್ಪ ಭಾಗ ಅಕ್ರಮವಾಗಿ ಬಳಸಿಕೊಳ್ಳಲಾಗಿತ್ತು. ಮಧುರೆ ಹೋಬಳಿಯ ಹೊನ್ನಾವರ ಸರ್ವೆ ನಂ. 73 ರಲ್ಲಿ 3 ಎಕರೆ, ನಾಗೇನಹಳ್ಳಿ ಗ್ರಾಮದ ಸರ್ವೆ ನಂ 54/9 ರ 9 ಎಕರೆ 20 ಗುಂಟೆ, ಕೆಂಜಿಗದಹಳ್ಳಿಯ ಸರ್ವೆ ನಂ 69/1 ರ 1 ಎಕರೆ 30 ಗುಂಟೆ ಮತ್ತು 69/2 ರ 3 ಎಕರೆ ಒಟ್ಟು 17 ಎಕರೆ 11 ಗುಂಟೆ ತೆರವು ಮಾಡಲಾಯಿತು.

ಸ್ಥಳದಲ್ಲಿ ತಹಸೀಲ್ದಾರ್‌ ಟಿ. ಶಿವರಾಜ್‌, ರಾಜಸ್ವ ನಿರೀಕ್ಷಕ ಮುನಿರಾಜು ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳಿದ್ದರು.

ಸದನ ಸಮಿತಿಯ ಮತ್ತು ಜಿಲ್ಲಾಧಿಕಾರಿಗಳ ಆದೇಶದಂತೆ ಭೂ ಪರಿವರ್ತನೆ ಮಾಡಿಸದೆ ಅಕ್ರಮವಾಗಿ ಕೃಷಿ ಜಮೀನುಗಳಲ್ಲಿ ನಿರ್ಮಿಸಿರುವ ಬಡಾವಣೆಗಳನ್ನು ತೆರವುಗೊಳಿಸಲಾಗುವುದು. ತಾಲೂಕಿನಲ್ಲಿ 111ಲೇಔಟ್‌ಗಳಿಗೆ ನೋಟಿಸ್‌ ನೀಡಲಾಗಿದೆ. ಮೊದಲನೆ ಹಂತವಾಗಿ ಮಧುರೆಯಲ್ಲಿ ತೆರವು ಕಾರ್ಯ ಪ್ರಾರಂಭ ಮಾಡಿದ್ದೇವೆ. ತೆರವು ಕಾರ್ಯಕ್ಕೆ ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕ್ರಿಮಿನಲ್‌ ಕೇಸ್‌ ಅನ್ನು ದಾಖಲು ಮಾಡಲಾಗುವುದು.
ಟಿ. ಶಿವರಾಜ್‌, ತಹಸೀಲ್ದಾರ್‌ ದೊಡ್ಡಬಳ್ಳಾಪುರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ