ಆ್ಯಪ್ನಗರ

ಸಚಿವರ ಅಸಮಾಧಾನವನ್ನು ಸಿಎಂ ಪರಿಹರಿಸುತ್ತಾರೆ - ಅಶ್ವತ್ಥ ನಾರಾಯಣ್‌

ಖಾತೆ ಹಂಚಿಕೆ ಸಂಬಂಧ ಸಚಿವರು ಅಸಮಧಾನಗೊಂಡಿರುವ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಾ. ಸಿಎನ್‌ ಅಶ್ವತ್ಥ ನಾರಾಯಣ್‌, ಸಿಎಂ ಯಡಿಯೂರಪ್ಪ ಸಚಿವರ ಅಸಮಾಧಾನ ಪರಿಹರಿಸಿ ಎಲ್ಲರ ವಿಶ್ವಾಸ ಪಡೆಯುವಲ್ಲಿ ಯಶಸ್ವಿಯಾಗಲಿದ್ದಾರೆ ಎಂದರು.

Agencies 22 Jan 2021, 8:46 pm
ಹೊಸಕೋಟೆ: ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಸಚಿವರ ಅಸಮಾಧಾನ ಪರಿಹರಿಸಿ ಎಲ್ಲರ ವಿಶ್ವಾಸ ಪಡೆಯುವಲ್ಲಿ ಯಶಸ್ವಿಯಾಗಲಿದ್ದಾರೆ ಎಂದು ಡಿಸಿಎಂ ಡಾ. ಸಿಎನ್‌ ಅಶ್ವತ್ಥ ನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು.‌
Vijaya Karnataka Web Dr. Ashwath Narayan


ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ವೈದ್ಯಕೀಯ ವೃತ್ತಿಯ ಬಗ್ಗೆ ಆಸಕ್ತಿ ಹೊಂದುವ ಜತೆಗೆ, ನಿರಂತರ ಕಲಿಕೆಯಲ್ಲಿ ತೊಡಗಿ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಂಡು ಸಮಾಜದ ಬೇಡಿಕೆಗಳನ್ನು ಪೂರೈಸಲು ಬದ್ಧತೆ ಹೊಂದಬೇಕು. ಕೋವಿಡ್‌ ಲಸಿಕೆಯ ಬಗ್ಗೆ ಸಂಶೋಧನೆ ನಡೆಸಿ ಯಶಸ್ವಿಗೊಳಿಸುವ ಮೂಲಕ ಭಾರತವು ಇಡೀ ವಿಶ್ವಕ್ಕೆ ಮಾದರಿಯಾಗಿದೆ," ಎಂದರು.

ಇದೇ ವೇಳೆ ಹೊಸಕೋಟೆಯ ಎಂವಿಜೆ ವೈದ್ಯಕೀಯ ಕಾಲೇಜಿನಲ್ಲಿ ಏರ್ಪಡಿಸಿದ್ದ ಪದವಿ ಪ್ರದಾನ ಸಮಾರಂಭದಲ್ಲಿ 2019ನೇ ಸಾಲಿನಲ್ಲಿ ವೈದ್ಯಕೀಯ ಪರೀಕ್ಷೆಯಲ್ಲಿ ಉತ್ತೀರ್ಣರಾದ 125 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ಆಸ್ಪತ್ರೆಯ ಎಕ್ಸಿಕ್ಯೂಟಿವ್‌ ಡೈರೆಕ್ಟರ್‌ ಆಗಿ 18 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಡಾ. ಪಿ. ಮೋಹನ್‌ರಾವ್‌ ಅವರನ್ನು ಸನ್ಮಾನಿಸಲಾಯಿತು.

ಉತ್ತಮ ಸಾಧನೆ ಮಾಡಿದ ಡಾ. ಅಪರ್ಣ ಮೆನನ್‌ ಅವರಿಗೆ ಡಿಸಿಎಂ ಡಾ. ಸಿ.ಎನ್‌. ಅಶ್ವಥನಾರಾಯಣ್‌ ವಿಶೇಷ ಪ್ರಶಸ್ತಿ ನೀಡಿ ಗೌರವಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ