ಆ್ಯಪ್ನಗರ

ಕಾಂಗ್ರೆಸ್ ನಾಯಕ ಉಗ್ರಪ್ಪ ಚರಾಸ್ತಿ ಜಪ್ತಿಗೆ ನ್ಯಾಯಾಲಯ ಆದೇಶ

ದೊಡ್ಡಬಳ್ಳಾಪುರ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಶುಕ್ಲಾಕ್ಷ ಫಾಲನ್ ಅವರು ಆದೇಶ ಹೊರಡಿಸಿದೆ.

Vijaya Karnataka Web 2 Nov 2018, 3:20 pm
ದೊಡ್ಡಬಳ್ಳಾಪುರ: ಅಪಘಾತ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೂ ಹಾಜರಾಗದೆ ಹಾಗೂ ದಂಡ ಪಾವತಿಸದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ವಿ.ಎಸ್.ಉಗ್ರಪ್ಪ ಚರಾಸ್ತಿ ಜಪ್ತಿ ಮಾಡುವಂತೆ ಕೋರ್ಟ್ ಆದೇಶಿಸಿದೆ
Vijaya Karnataka Web ugrappa


ದೊಡ್ಡಬಳ್ಳಾಪುರ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ನ್ಯಾಯಾಧೀಶರಾದ ಶುಕ್ಲಾಕ್ಷ ಫಾಲನ್ ಅವರು ಆದೇಶ ಹೊರಡಿಸಿದೆ.

2010ರಲ್ಲಿ ಉಗ್ರಪ್ಪನವರ ಕ್ವಾಲಿಸ್ ಕಾರು ಬಾಲಾಜಿ ಎಂಬವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಕಾರ್‌ಗೆ ವಿಮೆ ಇಲ್ಲವೆಂದು ಆರೋಪಿಸಿ ಗಾಯಾಳು ನ್ಯಾಯಾಲಯದ ಮೊರೆ ಹೋಗಿದ್ದರು.

2012 ರಿಂದ ನೋಟಿಸ್ ಜಾರಿ ಮಾಡುತ್ತಿದ್ದರೂ ಉಗ್ರಪ್ಪನವರು ಪ್ರಕರಣದ ವಿಚಾರಣೆಗೆ ಗೈರು ಹಾಜರಾಗುವ ಮೂಲಕ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆಂದು ನ್ಯಾಯಾಧೀಶರು 94,925 ರೂ. ದಂಡ ವಿಧಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ