ಆ್ಯಪ್ನಗರ

ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ಇಂದು ತಮಟೆ ಚಳವಳಿ

ಸರಕಾರ ದಲಿತರ ಮೇಲೆ ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಅ.15ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಜಾವಿಮೋಚನ ಬಹುಜನ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿಜ್ಜವಾರ ನಾಗರಾಜ್‌ ಹೇಳಿದ್ದಾರೆ.

Vijaya Karnataka Web 15 Oct 2020, 7:15 am
ಕುಂದಾಣ: ಜಿಲ್ಲಾ ಮತ್ತು ತಾಲೂಕು ಪ್ರಜಾವಿಮೋಚನಾ ಬಹುಜನ ಸಮಿತಿ ವತಿಯಿಂದ ದಲಿತರ ಮೇಲೆ ದೌರ್ಜನ್ಯ ಮತ್ತು ರೈತ ವಿರೋಧಿ ನೀತಿ ಹಾಗೂ ಕೆಲ ಭ್ರಷ್ಟ ಕಂದಾಯ ಅಧಿಕಾರಿಗಳ ಕುಮ್ಮಕ್ಕಿನಿಂದ ಸರ್ಕಾರಿ ಜಮೀನುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದನ್ನು ಖಂಡಿಸಿ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಬೆ.10.30ಕ್ಕೆ ತಮಟೆ ಚಳವಳಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರಜಾವಿಮೋಚನಾ ಬಹುಜನ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಬಿಜ್ಜವಾರ ನಾಗರಾಜ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vijaya Karnataka Web ಸಾಂದರ್ಭಿಕ ಚಿತ್ರ


ರಾಜ್ಯ ಮತ್ತು ಕೇಂದ್ರ ಸರಕಾರಗಳ ರೈತ ವಿರೋಧಿ ನೀತಿಗಳಿಂದ ರೈತರನ್ನು ಬೀದಿಪಾಲು ಮಾಡುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಸರಕಾರ ಬಂದಾಗಿನಿಂದಲೂ ದಲಿತರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಕೊಲೆ, ಮಹಿಳೆಯರ ಮೇಲೆ ಅತ್ಯಾಚಾರ ಇನ್ನೂ ಜೀವಂತವಾಗಿರುವುದಕ್ಕೆ ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ದಲಿತ ಹೆಣ್ಣುಮಕ್ಕಳ ಮೇಲೆ ವಿಕೃತ ಕಾಮಿಗಳು ಅತ್ಯಾಚಾರ ಮಡಿ, ಕೊಲೆ ಮಾಡಿರುವಂತಹ ಬಹಳಷ್ಟು ಪ್ರಕರಣಗಳಿಂದ ನಾಗರೀಕ ಸಮಾಜ ತಲೆತಗ್ಗಿಸುವಂತೆ ಆಗಿದೆ. ಪ್ರಜ್ಞಾವಂತರು, ರೈತರು, ಇತರೆ ಸಂಘಟನೆಗಳು ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ