ಆ್ಯಪ್ನಗರ

ರೈತನ ಆತ್ಮಹತ್ಯೆ: ಕಚೇರಿ ಬಳಿ ಪ್ರತಿಭಟನೆ, ಕೃಷಿ ನಿರ್ದೇಶಕರ ಅಮಾನತು

ಗಲಿಬಿಲಿಕೋಟೆ ಗ್ರಾಮದ ರೈತ ದೇವರಾಜು (42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Vijaya Karnataka Web 25 Aug 2018, 2:27 pm
ದೊಡ್ಡಬಳ್ಳಾಪುರ: ಗಲಿಬಿಲಿಕೋಟೆ ಗ್ರಾಮದ ರೈತ ದೇವರಾಜು (42) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು 15 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು.
Vijaya Karnataka Web farmer.


ಅವರು 15 ಲಕ್ಷಕ್ಕೂ ಹೆಚ್ಚು ಸಾಲ ಮಾಡಿಕೊಂಡಿದ್ದರು. ಬೆಳೆಗಳು ಕೂಡ ನಿರೀಕ್ಷಿತ ಫಲ ನೀಡದೆ ನಷ್ಟವುಂಟಾಗಿದ್ದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತ ದೇವರಾಜ್‌ ಕುಟುಂಬಕ್ಕೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ತಾಲೂಕು ಕಚೇರಿಯ ಬಳಿ ಪ್ರತಿಭಟನೆ ರೈತ ಮುಖಂಡರು ಮತ್ತು ಕುಟುಂಬದವರು ಪ್ರತಿಭಟನೆ ನಡೆಸಿದರು. ಇಲಾಖೆಗಳಿಗೆ ಅಲೆದಾಡಿಸದೆ ಇಪ್ಪತ್ತು ಲಕ್ಷ ಶೀಘ್ರ ಪರಿಹಾರ ನೀಡಬೇಕೆಂದು ಪ್ರತಿಭಟನಾಕಾರರು ಬೇಡಿಕೆಯಿಟ್ಟರು.

ಕೃಷಿ ಸಹಾಯಕ ನಿರ್ದೇಶಕರ ಅಮಾನತು

ರೈತನ ಆತ್ಮಹತ್ಯೆಯ ಹಿನ್ನೆಲೆಯಲ್ಲಿ ಉಪವಿಭಾಗಾಧಿಕಾರಿ ಕರೆ ಮಾಡಿ ವಿವರ ಕೇಳಿದಾಗ ಹಾರಿಕೆಯ ಉತ್ತರನೀಡಿದ್ದಕ್ಕೆ ತಾಲೂಕು ಕೃಷಿ ಸಹಾಯಕ ನಿರ್ದೇಶಕರ ಅಮಾನತಿಗೆ ಉಪವಿಭಾಗಾಧಿಕಾರಿ ಆದೇಶ ನೀಡಿದ್ದಾರೆ.

ಕೃಷಿ ಇಲಾಖೆಯ ಅಧಿಕಾರಿಗಳ ವರ್ತನೆಯನ್ನು ಖಂಡಿಸಿ, ರೈತನ ಕುಟುಂಬಕ್ಕೆ ಶೀಘ್ರ ಪರಿಹಾರದ ಭರವಸೆ ನೀಡಿದ್ದಾರೆ. ಕೃಷಿ ಇಲಾಖೆಯ ಜಿಲ್ಲಾ ನಿರ್ದೇಶಕರ ನೇತೃತ್ವದಲ್ಲಿ ಗಲಿಬಿಲಿಕೋಟೆಗೆ ತಂಡ ಭೇಟಿ ನೀಡಬೇಕು. ಮರಣೊತ್ತರ ಪರೀಕ್ಷೆ ಹಾಗೂ ತಂಡದ ವರದಿಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸ್ಥಳೀಯ ಖಾಸಗಿ ವ್ಯಕ್ತಿಗಳ ಲೇವಾದೇವಿ ವಿಚಾರಗಳಿಗೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಹೇಳಿದರು.

ಮೃತ ರೈತನ ಕುಟುಂಬಕ್ಕೆ ಹೆಚ್ಚುವರಿ ಪರಿಹಾರ ನೀಡಬೇಕು ಎಂದು ರೈತಸಂಘ ಮುಖ್ಯಮಂತ್ರಿಯನ್ನು ಒತ್ತಾಯಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ