ಆ್ಯಪ್ನಗರ

ಉಪಚುನಾವಣೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ನಿಂದ ಅಸ್ತಿತ್ವಕ್ಕಾಗಿ ಹೋರಾಟ: ಕಟೀಲ್‌

"ಜನರಲ್ಲಿ ಗೊಂದಲ ನಿರ್ಮಿಸುವ ಸಲುವಾಗಿ ಎರಡೂ ಪಕ್ಷಗಳೂ ಸಮ್ಮಿಶ್ರ ಸರಕಾರ ರಚಿಸಿ ಒಂದೆಡೆ ಸಿದ್ದರಾಮಯ್ಯ ಮತ್ತೊಂದೆಡೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಡಿಸೆಂಬರ್‌ 9ರ ನಂತರ ಈ ಕನಸು ಈಡೇರದೆ ನುಚ್ಚುನೂರಾಗಲಿದೆ,” - ನಳಿನ್‌ ಕುಮಾರ್‌ ಕಟೀಲ್‌.

Vijaya Karnataka 1 Dec 2019, 7:49 pm

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ರಾಜ್ಯದಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಪಕ್ಷಗಳು ಅಸ್ವಿತ್ವಕ್ಕಾಗಿ ಹೋರಾಟ ನಡೆಸುತ್ತಿದ್ದು ಉಪಚುನಾವಣೆ ಫಲಿತಾಂಶದ ನಂತರ ಇಡೀ ಚಿತ್ರಣವೇ ಬದಲಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದರು.
Vijaya Karnataka Web Nalin Kumar Kateel


ನಗರದ ಎಂಟಿಬಿ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜನರಲ್ಲಿ ಗೊಂದಲ ನಿರ್ಮಿಸುವ ಸಲುವಾಗಿ ಎರಡೂ ಪಕ್ಷಗಳೂ ಸಮ್ಮಿಶ್ರ ಸರಕಾರ ರಚಿಸಿ ಒಂದೆಡೆ ಸಿದ್ದರಾಮಯ್ಯ ಮತ್ತೊಂದೆಡೆ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಕನಸು ಕಾಣುತ್ತಿದ್ದಾರೆ. ಡಿಸೆಂಬರ್‌ 9ರ ನಂತರ ಈ ಕನಸು ಈಡೇರದೆ ನುಚ್ಚುನೂರಾಗಲಿದೆ,” ಎಂದರು.

“ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಡಮ್ಮಿ ನಾಯಕನಾಗಿದ್ದು ಏಕಾಂಗಿ ಹೋರಾಟ ಮಾಡುತ್ತಿದ್ದು ಚುನಾವಣೆ ನಂತರ ಪಕ್ಷದಿಂದ ಹೊರಬೀಳಲಿದ್ದಾರೆ. 18 ತಿಂಗಳುಗಳ ಸಮ್ಮಿಶ್ರ ಸರಕಾರದ ವೈಫಲ್ಯದಿಂದ ಬೇಸತ್ತು ಶಾಸಕರು ರಾಜೀನಾಮೆ ನೀಡಿದ್ದಾರೆಯೇ ಹೊರತು ಇದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ. ಉಪಚುನಾವಣೆಯ ಎಲ್ಲಾ 15 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಸಾಧಿಸಲಿದ್ದು ಮುಂದಿನ ಮೂರೂವರೆ ವರ್ಷಗಳ ಕಾಲ ಸುಭದ್ರ ಆಡಳಿತ ನಡೆಸಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಲಾಗುವುದು,” ಎಂದು ಹೇಳಿದರು.

ಮತ್ತೆ ಕೈ-ದಳ ಮೈತ್ರಿ ತಿರುಕನ ಕನಸು: ಸಿಟಿ ರವಿ ಲೇವಡಿ

“ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಉಪಯುಕ್ತ ಯೋಜನೆಗಳ ಕೊಡುಗೆ, ರಾಜ್ಯದಲ್ಲಿ ಯಡಿಯೂರಪ್ಪ ನೇತೃತ್ವದ ಸರಕಾರದ ಸಾಧನೆಗಳು ಬಿಜೆಪಿಗೆ ಶ್ರೀರಕ್ಷೆಯಾಗಲಿದೆ. ಹೊಸಕೋಟೆಯಲ್ಲಿಯೂ ಸಹ ಎಂಟಿಬಿ ನಾಗರಾಜ್‌ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳಿಗೆ ಮತದಾರರು ಮನ್ನಣೆ ನೀಡಿ ಮತ್ತೊಮ್ಮೆ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸವಿದ್ದು ಕಾಂಗ್ರೆಸ್‌ ಹಾಗೂ ಪಕ್ಷೇತರ ಅಭ್ಯರ್ಥಿಯ ಆಟ ನಡೆಯುವುದಿಲ್ಲ,” ಎಂದು ನಳಿನ್‌ ಕುಮಾರ್‌ ಕಟೀಲ್‌ ವಿಶ್ವಾಸ ವ್ಯಕ್ತಪಡಿಸಿದರು.

ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಮಾತನಾಡಿ ನೂರಾರು ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆಯಾಗುತ್ತಿರುವುದರಿಂದ ಕಾಂಗ್ರೆಸ್‌ಗೆ ತಲೆನೋವಾಗಿದ್ದು ಪಕ್ಷದ ಅಭ್ಯರ್ಥಿ ಗೆಲುವು ನಿಶ್ಚಿತವಾಗಿದೆ ಎಂದರು.

ಸಂಸದ ಮುನಿಸ್ವಾಮಿ, ಮಾಜಿ ಸಚಿವರಾದ ಕಟ್ಟಾ ಸುಬ್ರಮಣ್ಯ ನಾಯ್ಡು, ಕೃಷ್ಣಯ್ಯಶೆಟ್ಟಿ, ಮುಖಂಡರಾದ ಸಂಪಂಗಿ, ಚಿ.ನಾ.ರಾಮು ಇನ್ನಿತರರು ಉಪಸ್ಥಿತರಿದ್ದರು. ಎಂಟಿಬಿ ಭವನದಿಂದ ನಗರದ ಪ್ರಮುಖ ಬೀದಿಗಳಲ್ಲಿ ಮುಖಂಡರುಗಳು ರೋಡ್‌ಶೋ ಮೂಲಕ ಮತಯಾಚನೆ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ