ಆ್ಯಪ್ನಗರ

ಬೇಗೂರಿನ ಅಪಾರ್ಟ್‌ಮೆಂಟ್‌ನಲ್ಲಿ ಚಿರತೆ ಸೆರೆಗೆ ಕಾರ್ಯಾಚರಣೆ ಚುರುಕು, ಡ್ರೋನ್‌ ಬಳಕೆ

ಬೇಗೂರಿನ ಪ್ರೆಸ್ಟೀಜ್‌ ಸಾಂಗ್‌ ಆಫ್‌ ಸೌತ್‌ ಅಪಾರ್ಟ್‌ಮೆಂಟ್‌ ಸುತ್ತಮುತ್ತಲಿನ ಕಡೆಗಳಲ್ಲಿ ಚಿರತೆ ಬೀಡು ಬಿಟ್ಟಿದೆ. ರಾತ್ರಿ ವೇಳೆ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯಾವಳಿಗಳು ಸೆರೆಯಾಗುತ್ತಿದ್ದು

Vijaya Karnataka Web 27 Jan 2021, 9:00 pm
ಬೆಂಗಳೂರು ದಕ್ಷಿಣ: ಚಿರತೆಯೊಂದು ಕಳೆದ ಕೆಲವು ದಿನಗಳಿಂದ ನಗರದ ಬೇಗೂರಿನ ಪ್ರೆಸ್ಟೀಜ್‌ ಸಾಂಗ್‌ ಆಫ್‌ ಸೌತ್‌ ಅಪಾರ್ಟ್‌ಮೆಂಟ್‌ ಸುತ್ತಮುತ್ತಲಿನ ಕಡೆಗಳಲ್ಲಿ ಬೀಡು ಬಿಟ್ಟಿದೆ. ರಾತ್ರಿ ವೇಳೆ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆಯ ದೃಶ್ಯಾವಳಿಗಳು ಸೆರೆಯಾಗುತ್ತಿದ್ದು, ಸ್ಥಳೀಯ ನಿವಾಸಿಗಳು ಆತಂಕದಲ್ಲಿ ದಿನ ಕಳೆಯುವಂತಾಗಿದೆ.
Vijaya Karnataka Web Leopard
ಚಿರತೆ


ಬೆಂಗಳೂರು ಹೊರವಲಯದ ಎಲೇನಹಳ್ಳಿ ಬಳಿ ಕಳೆದ ಶುಕ್ರವಾರ ರಾತ್ರಿ ಅಪಾರ್ಟ್‌ಮೆಂಟ್‌ನ ಪಾರ್ಕಿಂಗ್‌ ಸ್ಥಳದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ಚಿರತೆಯ ದೃಶ್ಯ ಸೆರೆಯಾಗಿದ್ದು, ಮತ್ತೆ ಭಾನುವಾರ ಸಹ ಕಾಣಿಸಿಕೊಂಡು ಸ್ಥಳೀಯರಲ್ಲಿ ಮತ್ತಷ್ಟು ಭಯ ಹೆಚ್ಚಿಸಿತು. ಇದೀಗ ಅಲ್ಲಿನ ನಿವಾಸಿಗಳ ಮನವಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿ ಅಪಾರ್ಟ್‌ಮೆಂಟ್‌ ಹಾಗೂ ಲೇಔಟ್‌ ಬಳಿ ಬೋನುಗಳನ್ನು ಇಟ್ಟಿದ್ದರೂ ಇದುವರೆಗೂ ಚಿರತೆ ಸೆರೆಯಾಗಿಲ್ಲ.

ಅಪಾರ್ಟ್‌ಮೆಂಟ್‌ ಕಾಂಪೌಂಡ್‌ ಮೇಲೆ ಚಿರತೆಯ ಹೆಜ್ಜೆ ಗುರುತು ಮೂಡಿದ್ದು, ಚಿರತೆ ಬಂದು ಹೋಗಿರುವುದಕ್ಕೆ ಸಾಕ್ಷಿಯಾಗಿದೆ. ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಬೋನಿನ ಒಳಗೆ ಮೇಕೆ ಮರಿಯನ್ನು ಕಟ್ಟಿ, ಚಿರತೆ ಸೆರೆಗಾಗಿ ಕಾರ್ಯಾಚರಣೆ ಚುರುಕುಗೊಳಿಸಿದ್ದಾರೆ.

ಬೆಂಗಳೂರು ಹೊರವಲಯದ ಅಪಾರ್ಟ್‌ಮೆಂಟ್‌ನಲ್ಲಿ‌ಚಿರತೆ ಓಡಾಟ.. ಹೆಜ್ಜೆ ಗುರುತು ಪತ್ತೆ..!

''ಚಿರತೆಯನ್ನು ಸುರಕ್ಷಿತವಾಗಿ ಸೆರೆಹಿಡಿಯಬೇಕು. ಜತೆಗೆ ಸಾರ್ವಜನಿಕರ ಹಿತ ಕಾಯುವ ಜವಾಬ್ದಾರಿಯೂ ನಮ್ಮದಾಗಿದೆ. ಈ ನಿಟ್ಟಿನಲ್ಲಿ ಈಗಾಗಲೇ ಡ್ರೋನ್‌ ಕ್ಯಾಮೆರಾ ಮೂಲಕ ಚಿರತೆಯ ಹುಡುಕಾಟ ನಡೆಸಲಾಗಿದೆ. ಆದರೆ ಚಿರತೆ ಕಾಣಿಸಿಕೊಂಡಿಲ್ಲ. ಬಡಾವಣೆಯಲ್ಲಿ ರಾತ್ರಿ ಸಮಯದಲ್ಲಿ ಓಡಾಟ ಮಾಡುತ್ತಿರುವುದು ಮಾತ್ರ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗಾಗಲೇ ಬೋನ್‌ ಇಡಲಾಗಿದ್ದು, ಚಿರತೆಯ ಚಲನವಲನಗಳ ಬಗ್ಗೆ ಮಾಹಿತಿ ಕಲೆಹಾಕುವ ಕಾರಣದಿಂದ ಎರಡು ಕಡೆ ಕ್ಯಾಮೆರಾ ಇಡಲಾಗಿದೆ,'' ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ