ಆ್ಯಪ್ನಗರ

ಮೊಮ್ಮಗಳಿಂದಳೇ ತಾತನ ಕೊಲೆ

ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಕೆಬರೆ ಗ್ರಾಮದಲ್ಲಿ ನಡೆದ ಕೌಟುಂಬಿಕ ಕಲಹದಲ್ಲಿ ಮೊಮ್ಮಗಳು ತಾತನನ್ನೇ ಹತ್ಯೆ ಮಾಡಿದ್ದಾಳೆ.

Vijaya Karnataka Web 29 Apr 2018, 2:53 pm
ಕನಕಪುರ: ತಾಲೂಕಿನ ಕೋಡಿಹಳ್ಳಿ ಹೋಬಳಿಯ ಕೆಬರೆ ಗ್ರಾಮದಲ್ಲಿ ನಡೆದ ಕೌಟುಂಬಿಕ ಕಲಹದಲ್ಲಿ ಮೊಮ್ಮಗಳು ತಾತನನ್ನೇ ಹತ್ಯೆ ಮಾಡಿದ್ದಾಳೆ.
Vijaya Karnataka Web death jpge


ಮೃತನನ್ನು ಮಲ್ಲೇಗೌಡ (70) ಎಂದು ಗುರುತಿಸಲಾಗಿದೆ. ಮೃತರ ಮೊಮ್ಮಗಳಾಗಿರುವ ಆರೋಪಿ ಮತ್ತು ಮೃತರ ಮಗ ಪಂಕಜ್‌ಗೆ ಕಳೆದ ಏಳು ವರ್ಷದ ಹಿಂದೆ ಮದುವೆ ಮಾಡಲಾಗಿತ್ತು. ಪಂಕಜ್ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದ್ದು ಈ ವಿಚಾರವಾಗಿ ಕುಟುಂಬದಲ್ಲಿ ಆಗಾಗ ಗಲಾಟೆ ನಡೆಯುತ್ತಿತ್ತು. ಭಾನುವಾರವೂ ಇದೇ ವಿಚಾರವಾಗಿ ನಡೆಯುತ್ತಿದ್ದ ಗಲಾಟೆ ವೇಳೆ ನಿಂದನೆ ಮಾಡುತ್ತಿದ್ದ ತಾತನಿಗೆ ಮೊಮ್ಮಗಳು ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ.

ತೀವ್ರವಾಗಿ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಕೋಡಿಹಳ್ಳಿ ಪೋಲಿಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ