ಆ್ಯಪ್ನಗರ

ಎಚ್‌1ಎನ್‌1: ಭಯ ಬೇಡ, ಎಚ್ಚರವಿರಲಿ

ಎಚ್‌1ಎನ್‌1 ಜ್ವರವು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇತ್ತಿಚೆಗೆ ವ್ಯಾಪಕವಾಗಿ ಹರಡುತ್ತಿದ್ದು ಈ ಜ್ವರದ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ತಾಲೂಕು ಆರೋಗ್ಯ ಶಿಕ್ಷ ಣಾಧಿಕಾರಿ ರೇವಣ್ಣ ತಿಳಿಸಿದರು.

Vijaya Karnataka 10 Nov 2018, 3:10 pm
ದೇವನಹಳ್ಳಿ: ಎಚ್‌1ಎನ್‌1 ಜ್ವರವು ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಇತ್ತಿಚೆಗೆ ವ್ಯಾಪಕವಾಗಿ ಹರಡುತ್ತಿದ್ದು ಈ ಜ್ವರದ ಬಗ್ಗೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಎಂದು ತಾಲೂಕು ಆರೋಗ್ಯ ಶಿಕ್ಷ ಣಾಧಿಕಾರಿ ರೇವಣ್ಣ ತಿಳಿಸಿದರು.
Vijaya Karnataka Web h1n1 dont panic take precautionary measures
ಎಚ್‌1ಎನ್‌1: ಭಯ ಬೇಡ, ಎಚ್ಚರವಿರಲಿ


ಎಚ್‌1ಎನ್‌1 ಜ್ವರದ ಬಗ್ಗೆ ಎಚ್ಚರದಿಂದಿರಬೇಕು. ಬಹುಮುಖ್ಯವಾಗಿ ಈ ರೋಗದ ಲಕ್ಷ ಣಗಳೆಂದರೆ ಶೀತ, ತಲೆನೋವು, ಕೆಮ್ಮು, ಜ್ವರ, ಕಾಣಿಸಿ ಚಳಿಯಲ್ಲಿ ಇದ್ದು ದೇಹವು ಅತಿಯಾಗಿ ಬಳಲುತ್ತದೆ. ಕೆಲವೊಮ್ಮೆ ವಾಂತಿ ಮತ್ತು ಬೇಧಿಯೂ ಆಗಬಹುದು. ಉಸಿರಾಟದಲ್ಲಿ ತೊಂದರೆ ಕಾಣಿಸಬಹುದು. ಈ ಜ್ವರವು ಸೋಂಕಿತ ಎಚ್‌1ಎನ್‌1 ರೋಗಿ ಕೆಮ್ಮಿದಾಗ, ಸೀನಿದಾಗ ಗಾಳಿಯ ಮೂಲಕ ಇತರರಿಗೂ ಹರಡುತ್ತದೆ. ಆದುದರಿಂದ ಕೆಮ್ಮುವಾಗ, ಸೀನುವಾಗ ಕರವಸ್ತ್ರದಿಂದ ಮೂಗನ್ನು ಮುಚ್ಚಿಕೊಳ್ಳಬೇಕು.

ಆಗಾಗ ಸಾಬೂನಿನಿಂದ ಕೈಗಳನ್ನು ಸ್ವಚ್ಛ ಮಾಡಿಕೊಳ್ಳಬೇಕು. ವೈಯಕ್ತಿಕ ಸ್ವಚ್ಛತೆ ಪಾಲಿಸಿ ಸ್ನಾನ ಮಾಡಿ ಶುಭ್ರವಾದ ಉಡುಪು ಧರಿಸಬೇಕು. ಯಾವುದೇ ವ್ಯಕ್ತಿಗೆ ಸೋಂಕಿದ್ದಲ್ಲಿ ಮೂಗಿಗೆ ಮಾಸ್ಕ್‌ ಧರಿಸಿ ಮನೆಯಲ್ಲಿಯೇ ಇರುವುದು ಸೂಕ್ತ.

ಚಿಕ್ಕ ವಯಸ್ಸಿನ ಮಕ್ಕಳಿಂದ ದೂರವಿರುವುದು ಸೂಕ್ತ. ಸೋಂಕು ಇದ್ದಲ್ಲಿ ವಿಶ್ರಾಂತಿ ಪಡೆದುಕೊಳ್ಳಬೇಕು. ಒತ್ತಡವನ್ನು ನಿಭಾಯಿಸಬೇಕು. ಪೌಷ್ಟಿಕ ಆಹಾರ ಸೇವಿಸಬೇಕು, ಉಸಿರಾಟದ ತೊಂದರೆ ಕಂಡುಬಂದಲ್ಲಿ ತಕ್ಷ ಣ ವೈದ್ಯರ ಸಲಹೆ ಪಡೆಯಬೇಕು ಹಾಗೂ ಜನಸಂದಣಿ ಇರುವ ಪ್ರದೇಶದಿಂದ ದೂರವಿರಬೇಕು. ಸೋಂಕಿತರ ಅತೀ ಸಮೀಪ ಹೋಗಬಾರದು. ಹಸ್ತಲಾಘವ, ತಬ್ಬಿಕೊಳ್ಳುವುದು ಅಥವಾ ಚುಂಬನ ಮಾಡಬಾರದು. ಕಣ್ಣು, ಮೂಗು ಬಾಯಿಯನ್ನು ಆಗಾಗ ಕೈಗಳಿಂದ ಮುಟ್ಟಬಾರದು. ಎಲ್ಲೆದರಲ್ಲಿ ಉಗುಳಬಾರದು. ವೈದ್ಯರ ಸಲಹೆ ಪಡೆಯದೆ ಔಷಧಗಳನ್ನು ಸೇವಿಸಬಾರದು.

ಪರಿಣಾಮಕಾರಿಯಾಗಿ ಕೆಲಸ ಮಾಡುವಂತಹ ಔಷಧ ಆರೋಗ್ಯ ಇಲಾಖೆಯಲ್ಲಿ ಲಭ್ಯವಿದ್ದು ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆ ಪಡೆದು ಆರೋಗ್ಯವಂತರಾಗಬಹುದು. ಯಾವುದೇ ರೀತಿಯ ಜ್ವರ ಕಂಡುಬಂದಲ್ಲಿ ಹತ್ತಿರದ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರ ಸಲಹೆ ಪಡೆಯುವುದು ಸೂಕ್ತವಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ