ವಿಕ ಸುದ್ದಿಲೋಕ ಬೆಂಗಳೂರು ಗ್ರಾಮಾಂತರ
ಜಿಲ್ಲೆಗೆ ಒಂದು ಸಚಿವ ಸ್ಥಾನದ ಜತೆಗೆ ನಿಗಮ ಮಂಡಳಿ ದಕ್ಕಿತು ಎನ್ನುವಷ್ಟರಲ್ಲಿ ಜೆಡಿಎಸ್, ಕಾಂಗ್ರೆಸ್ನ ಸಮ್ಮಿಶ್ರ ಸರಕಾರ ಜಿಲ್ಲೆಯ ಜನತೆಗೆ ದೊಡ್ಡ ಶಾಕ್ ನೀಡಿದೆ. ಅದರಲ್ಲೂ ಕಾಂಗ್ರೆಸ್ ಕಾರ್ಯಕರ್ತರಿಗಂತೂ ಕೈ ಕೈ ಹಿಸುಕಿಕೊಳ್ಳುವಂತೆ ಮಾಡಿರುವುದು ಮಾತ್ರವಲ್ಲದೆ ಲೋಕಸಭೆ ಚುನಾವಣೆ ಮೇಲೂ ಪರಿಣಾಮ ಬೀಳುವ ಸಾಧ್ಯತೆ ದಟ್ಟವಾಗಿದೆ.
ಹೊಸಕೋಟೆ ಶಾಸಕ ಎನ್.ನಾಗರಾಜ್ ಸಚಿವರಾಗಿ ವಸತಿ ಖಾತೆ ವಹಿಸಿಕೊಂಡಂತೆ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಅವರು ಲೋಕೋಪಯೋಗಿ ಇಲಾಖೆ ಅಧೀನದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಲಿದ್ದಾರೆ ಎಂದೇ ಜಿಲ್ಲೆಯ ಜನತೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಿರೀಕ್ಷೆ ಹೊಂದಿದ್ದರು. ಆದರೆ ಭಾನುವಾರ ರಾತ್ರಿ ಹೊರಬಿದ್ದ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ನೇಮಕ ಮಾಡದೆ ಬಾಕಿ ಉಳಿಸಿಕೊಂಡಿದೆ. ಸರಕಾರದ ಈ ನಡೆಯಿಂದ ರಾಜಕೀಯ ವಲಯದಲ್ಲಿ ಸಾಕಷ್ಟ ತಲ್ಲಣ ಸೃಷ್ಟಿಸಿದೆ.
ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ವೆಂಕಟರಮಣಯ್ಯ ಅವರ ನೇಮಕ ಮಾಡದೆ ತಡೆ ನೀಡಿರುವುದು ದೊಡ್ಡಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದರೆ ಜಿಲ್ಲಾ , ಮತ್ತು ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರು ಮಾತ್ರ ಭರವಸೆಯ ಮಾತುಗಳನ್ನಾಡುತ್ತಿದ್ದಾರೆ. ಲೋಕೋಪಯೋಗಿ ಅಧೀನದಡಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಕಾರ್ಯನಿರ್ವಹಿಸುವುದರಿಂದ ಇದಕ್ಕೆ ಜೆಡಿಎಸ್ ಶಾಸಕರನ್ನೇ ನೇಮಕ ಮಾಡುವಂತೆ ಆ ಪಕ್ಷದ ಹಿರಿಯರು ಚಿಂತನೆ ನಡೆಸಿರುವುದರಿಂದ ಅಧ್ಯಕ್ಷರ ನೇಮಕಕ್ಕೆ ತಡೆ ಬಿದ್ದಿದೆ ಎಂದೇ ಹೇಳಲಾಗುತ್ತಿದೆ. ಒಂದು ವೇಳೆ ಈ ನಿಗಮ ಕಾಂಗ್ರೆಸ್ಗೆ ದಕ್ಕದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ 'ಕೈ' ಚಳಕ ತೋರುವುದರಲ್ಲಿ ಎರಡು ಮಾತಿಲ್ಲ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ
ದೊಡ್ಡಬಳ್ಳಾಪುರ ಶಾಸಕರಾದಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವೊಬ್ಬ ಕಾಂಗ್ರೆಸ್ ಶಾಸಕರಿಗೂ ನಿಗಮ ಮಂಡಳಿಯಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಕುರಿತು ಜಿಲ್ಲೆಯ ಕೈ ನಾಯಕರು ಬಹಿರಂಗವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸದಿದ್ದರೆ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಅವರು ಬಹಿರಂಗವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಕಾಲೆಳೆದಿದ್ದಾರೆ. ''ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡ್ತಿದೆಯೇ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿರುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಉತ್ತರ ಕೊಡಬೇಕು. ಹೈಕಮಾಂಡ್ ಅವರೇ ಕುಮಾರಸ್ವಾಮಿ ಜತೆ ಚರ್ಚಿಸಲಿ. ಸೆಕೆಂಡ್ ಲಿಸ್ಟ್ ಬಿಡುಗಡೆಯಾಗಲಿದ್ದು ಅಲ್ಲಿಯವರೆಗೆ ಕಾದು ನಂತರ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ,'' ಹೇಳಿದ್ದಾರೆ. ಇತ್ತ ವೆಂಕಟರಮಣಯ್ಯ ಕೂಡ ಜಿಲ್ಲಾ, ರಾಜ್ಯ ಮಟ್ಟದ ನಾಯಕರೊಂದಿಗೆ ಚರ್ಚಿಸಿದ್ದು ಎರಡನೇ ಪಟ್ಟಿ ಬಿಡುಗಡೆಯಲ್ಲಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸಲ್ಲಿದ್ದಾರೆ.
.....
ನಿಗಮ, ಮಂಡಳಿಗೆ ಯಾರನ್ನು ನೇಮಕ ಮಾಡಬೇಕು ಎಂದು ಪಕ್ಷದ ಹಿರಿಯ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ. ಅವರು ಯಾವುದೇ ನಿರ್ಧಾರ ಕೈಗೊಂಡರು ಅದಕ್ಕೆ ಬದ್ಧನಾಗಿದ್ದಾನೆ. ಎರಡನೇ ಪಟ್ಟಿ ಬಿಡುಗಡೆ ಬಾಕಿಯಿದ್ದು ಅಧ್ಯಕ್ಷ ಸ್ಥಾನ ಸಿಗುವ ನಿರೀಕ್ಷೆಯಿದೆ.
-ಟಿ.ವೆಂಕಟರಮಣಯ್ಯ, ಶಾಸಕ, ದೊಡ್ಡಬಳ್ಳಾಪುರ
ಜಿಲ್ಲೆಗೆ ಒಂದು ಸಚಿವ ಸ್ಥಾನದ ಜತೆಗೆ ನಿಗಮ ಮಂಡಳಿ ದಕ್ಕಿತು ಎನ್ನುವಷ್ಟರಲ್ಲಿ ಜೆಡಿಎಸ್, ಕಾಂಗ್ರೆಸ್ನ ಸಮ್ಮಿಶ್ರ ಸರಕಾರ ಜಿಲ್ಲೆಯ ಜನತೆಗೆ ದೊಡ್ಡ ಶಾಕ್ ನೀಡಿದೆ. ಅದರಲ್ಲೂ ಕಾಂಗ್ರೆಸ್ ಕಾರ್ಯಕರ್ತರಿಗಂತೂ ಕೈ ಕೈ ಹಿಸುಕಿಕೊಳ್ಳುವಂತೆ ಮಾಡಿರುವುದು ಮಾತ್ರವಲ್ಲದೆ ಲೋಕಸಭೆ ಚುನಾವಣೆ ಮೇಲೂ ಪರಿಣಾಮ ಬೀಳುವ ಸಾಧ್ಯತೆ ದಟ್ಟವಾಗಿದೆ.
ಹೊಸಕೋಟೆ ಶಾಸಕ ಎನ್.ನಾಗರಾಜ್ ಸಚಿವರಾಗಿ ವಸತಿ ಖಾತೆ ವಹಿಸಿಕೊಂಡಂತೆ ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ ಅವರು ಲೋಕೋಪಯೋಗಿ ಇಲಾಖೆ ಅಧೀನದಡಿ ಕಾರ್ಯನಿರ್ವಹಿಸುವ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಲಿದ್ದಾರೆ ಎಂದೇ ಜಿಲ್ಲೆಯ ಜನತೆ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನಿರೀಕ್ಷೆ ಹೊಂದಿದ್ದರು. ಆದರೆ ಭಾನುವಾರ ರಾತ್ರಿ ಹೊರಬಿದ್ದ ನಿಗಮ, ಮಂಡಳಿ ಅಧ್ಯಕ್ಷರ ಪಟ್ಟಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನು ನೇಮಕ ಮಾಡದೆ ಬಾಕಿ ಉಳಿಸಿಕೊಂಡಿದೆ. ಸರಕಾರದ ಈ ನಡೆಯಿಂದ ರಾಜಕೀಯ ವಲಯದಲ್ಲಿ ಸಾಕಷ್ಟ ತಲ್ಲಣ ಸೃಷ್ಟಿಸಿದೆ.
ರಾಜ್ಯ ರಸ್ತೆ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ವೆಂಕಟರಮಣಯ್ಯ ಅವರ ನೇಮಕ ಮಾಡದೆ ತಡೆ ನೀಡಿರುವುದು ದೊಡ್ಡಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದ್ದರೆ ಜಿಲ್ಲಾ , ಮತ್ತು ರಾಜ್ಯ ಮಟ್ಟದ ಕಾಂಗ್ರೆಸ್ ನಾಯಕರು ಮಾತ್ರ ಭರವಸೆಯ ಮಾತುಗಳನ್ನಾಡುತ್ತಿದ್ದಾರೆ. ಲೋಕೋಪಯೋಗಿ ಅಧೀನದಡಿ ರಾಜ್ಯ ರಸ್ತೆ ಅಭಿವೃದ್ಧಿ ನಿಗಮ ಕಾರ್ಯನಿರ್ವಹಿಸುವುದರಿಂದ ಇದಕ್ಕೆ ಜೆಡಿಎಸ್ ಶಾಸಕರನ್ನೇ ನೇಮಕ ಮಾಡುವಂತೆ ಆ ಪಕ್ಷದ ಹಿರಿಯರು ಚಿಂತನೆ ನಡೆಸಿರುವುದರಿಂದ ಅಧ್ಯಕ್ಷರ ನೇಮಕಕ್ಕೆ ತಡೆ ಬಿದ್ದಿದೆ ಎಂದೇ ಹೇಳಲಾಗುತ್ತಿದೆ. ಒಂದು ವೇಳೆ ಈ ನಿಗಮ ಕಾಂಗ್ರೆಸ್ಗೆ ದಕ್ಕದಿದ್ದರೆ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ತಮ್ಮ 'ಕೈ' ಚಳಕ ತೋರುವುದರಲ್ಲಿ ಎರಡು ಮಾತಿಲ್ಲ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ
ದೊಡ್ಡಬಳ್ಳಾಪುರ ಶಾಸಕರಾದಿಯಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವೊಬ್ಬ ಕಾಂಗ್ರೆಸ್ ಶಾಸಕರಿಗೂ ನಿಗಮ ಮಂಡಳಿಯಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಈ ಕುರಿತು ಜಿಲ್ಲೆಯ ಕೈ ನಾಯಕರು ಬಹಿರಂಗವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸದಿದ್ದರೆ ಚಿಕ್ಕಬಳ್ಳಾಪುರ ಶಾಸಕ ಡಾ.ಕೆ.ಸುಧಾಕರ್ ಅವರು ಬಹಿರಂಗವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರ ಕಾಲೆಳೆದಿದ್ದಾರೆ. ''ಜೆಡಿಎಸ್ ಮೈತ್ರಿ ಧರ್ಮ ಪಾಲನೆ ಮಾಡ್ತಿದೆಯೇ. ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೈ ತಪ್ಪಿರುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಉತ್ತರ ಕೊಡಬೇಕು. ಹೈಕಮಾಂಡ್ ಅವರೇ ಕುಮಾರಸ್ವಾಮಿ ಜತೆ ಚರ್ಚಿಸಲಿ. ಸೆಕೆಂಡ್ ಲಿಸ್ಟ್ ಬಿಡುಗಡೆಯಾಗಲಿದ್ದು ಅಲ್ಲಿಯವರೆಗೆ ಕಾದು ನಂತರ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ,'' ಹೇಳಿದ್ದಾರೆ. ಇತ್ತ ವೆಂಕಟರಮಣಯ್ಯ ಕೂಡ ಜಿಲ್ಲಾ, ರಾಜ್ಯ ಮಟ್ಟದ ನಾಯಕರೊಂದಿಗೆ ಚರ್ಚಿಸಿದ್ದು ಎರಡನೇ ಪಟ್ಟಿ ಬಿಡುಗಡೆಯಲ್ಲಿ ಅಧ್ಯಕ್ಷ ಸ್ಥಾನ ಸಿಗುವ ವಿಶ್ವಾಸಲ್ಲಿದ್ದಾರೆ.
.....
ನಿಗಮ, ಮಂಡಳಿಗೆ ಯಾರನ್ನು ನೇಮಕ ಮಾಡಬೇಕು ಎಂದು ಪಕ್ಷದ ಹಿರಿಯ ಮುಖಂಡರು ತೀರ್ಮಾನ ಕೈಗೊಳ್ಳಲಿದ್ದಾರೆ. ಅವರು ಯಾವುದೇ ನಿರ್ಧಾರ ಕೈಗೊಂಡರು ಅದಕ್ಕೆ ಬದ್ಧನಾಗಿದ್ದಾನೆ. ಎರಡನೇ ಪಟ್ಟಿ ಬಿಡುಗಡೆ ಬಾಕಿಯಿದ್ದು ಅಧ್ಯಕ್ಷ ಸ್ಥಾನ ಸಿಗುವ ನಿರೀಕ್ಷೆಯಿದೆ.
-ಟಿ.ವೆಂಕಟರಮಣಯ್ಯ, ಶಾಸಕ, ದೊಡ್ಡಬಳ್ಳಾಪುರ