ಆ್ಯಪ್ನಗರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭಾರೀ ಮಳೆಗೆ ಕೆರೆ-ಕುಂಟೆ ಭರ್ತಿ: ಆತಂಕದಲ್ಲಿ ರೈತರು

ಹಲವು ದಿನಗಳಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಇದರಿಂದ ಕೆರೆ-ಕುಂಟೆಗಳು ಭರ್ತಿಯಾಗಿವೆ. ಮಳೆಯಿಂದ ಕೆಲವೆಡೆ ಬೆಳೆಗಳು ಹಾನಿಗೀಡಾಗುವ ಆತಂಕದಲ್ಲಿ ರೈತರಿದ್ದಾರೆ.

Vijaya Karnataka Web 23 Oct 2020, 10:27 am
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಕಳೆದ ಎರಡು ಮೂರು ದಿನಗಳಿಂದ ಅಲ್ಲಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೆರೆ ಕಟ್ಟೆಗಳು ಭರ್ತಿ ಆಗುತ್ತಿವೆ. ಗುರುವಾರ ಒಂದೇ ದಿನ ಜಿಲ್ಲೆಯಾದ್ಯಂತ 4 ಮಿ.ಮೀ. ಮಳೆಯಾದರೆ, ಕಳೆದ ಒಂದು ವಾರದಲ್ಲಿ 49 ಮಿ.ಮೀ. ಮಳೆಯಾಗುವ ಮೂಲಕ ಶೇ.85ರಷ್ಟು ಹೆಚ್ಚುವರಿ ಮಳೆಯಾಗಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ಬಿಟ್ಟು ಬಿಟ್ಟು ಸುರಿಯುತ್ತಿರುವ ಮಳೆಯಿಂದ ಯಾವುದೇ ಆಸ್ತಿ ಹಾನಿ, ಸಾವು ನೋವು ಸಂಭವಿಸಿಲ್ಲ. ಆದರೆ ಚರಂಡಿ ನೀರು ರಸ್ತೆಯಲ್ಲಿ ಹರಿದು ಹೋಗುತ್ತಿದ್ದು ದ್ವಿಚಕ್ರ ವಾಹನ ಸವಾರರು ಪರದಾಡುವಂತಾಗಿದೆ. ಮಳೆಯಿಂದ ಕೆಲವೆಡೆ ಬೆಳೆಗಳು ಹಾನಿಗೀಡಾಗುವ ಆತಂಕದಲ್ಲಿ ರೈತರಿದ್ದಾರೆ.
ಮಲೆನಾಡಲ್ಲಿ ಮಂಕಾದ ಮಳೆ: ಉತ್ತರ ಕರ್ನಾಟಕದಲ್ಲಿ ಜನಜೀವನ ಅಸ್ತವ್ಯಸ್ತ!

ಈ ಬಾರಿಯ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ನಿಗದಿತ ಪ್ರಮಾಣಕ್ಕಿಂತ ಶೇ.33ರಷ್ಟು ಹೆಚ್ಚು ಮಳೆಯಾಗಿದೆ. 444 ಮಿ.ಮೀ. ಮಳೆಗೆ 590 ಮಿ.ಮೀ. ಮಳೆಯಾಗಿದೆ. ಕಳೆದ ಏಳು ದಿನಗಳಲ್ಲಿ 27 ಮಿ.ಮೀ. ಮಳೆಗೆ 49 ಮಿ.ಮೀ. ಮಳೆ ಸುರಿದಿದೆ. ವಿಪರ್ಯಾಸ ಎಂದರೆ ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದರೆ ನೆಲಮಂಗಲ ಮತ್ತು ಹೊಸಕೋಟೆ ತಾಲೂಕಿನಲ್ಲಿ ಮಳೆ ಕೊರತೆಯಾಗಿದೆ. ಗುರುವಾರ ಈ ಎರಡು ತಾಲೂಕಿನಲ್ಲಿ ಕೇವಲ 1 ಮಿ.ಮೀ.ನಷ್ಟು ಮಾತ್ರ ಮಳೆಯಾಗಿದ್ದರೆ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲೂಕಿನಲ್ಲಿ 6 ಮಿ.ಮೀ. ಮಳೆಯಾಗಿದೆ.
ರಾಜ್ಯಾದ್ಯಂತ ಭಾರೀ ಮಳೆ: 12 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್!

ಕಳೆದ ಒಂದು ವಾರದಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ 25 ಮಿ.ಮೀ. ಸರಾಸರಿ ಮಳೆಗೆ 40 ಮಿ.ಮೀ. ಮಳೆಯಾಗಿದೆ. ಹೊಸಕೋಟೆಯಲ್ಲಿ 34 ಮಿ.ಮೀ.ಗೆ 52 ಮಿ.ಮೀ., ನೆಲಮಂಗಲದಲ್ಲಿ 33 ಮಿ.ಮೀ.ಗೆ 60 ಮಿ.ಮೀ., ದೇವನಹಳ್ಳಿ ತಾಲೂಕಿನಲ್ಲಿ 30 ಮಿ.ಮೀ. 51 ಮಿ.ಮೀ. ಮಳೆಯಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ