ಆ್ಯಪ್ನಗರ

ಚಿಕ್ಕಬಳ್ಳಾಪುರದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ!

ಚಿಕ್ಕಬಳ್ಳಾಪುರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನ ಹೈರಾಣಾಗಿದ್ದಾರೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಸುಮಾರು 3 ಗಂಟೆಗೂ ಅಧಿಕ ಕಾಲ ಸುರಿದ ಜೋರು ಮಳೆಗೆ ನಗರದಲ್ಲಿನ ಚರಂಡಿಗಳೆಲ್ಲಾ ತುಂಬಿ ಕೊಳಚೆ ನೀರು ರಸ್ತೆಗೆ ಹರಿದಿದೆ.

Vijaya Karnataka Web 21 Oct 2020, 12:32 pm
ಚಿಕ್ಕಬಳ್ಳಾಪುರ: ಜಿಲ್ಲಾಕೇಂದ್ರ ಚಿಕ್ಕಬಳ್ಳಾಪುರವೂ ಸೇರಿದಂತೆ ಜಿಲ್ಲೆಯ ಹಲವೆಡೆ ಮಂಗಳವಾರ ಜೋರು ಮಳೆಯಾಗಿದೆ. ಚಿಕ್ಕಬಳ್ಳಾಪುರ, ಗೌರಿಬಿದನೂರು, ಬಾಗೇಪಲ್ಲಿ, ಚಿಂತಾಮಣಿ, ಶಿಡ್ಲಘಟ್ಟದ ಬಹುತೇಕ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ನದಿ, ಕೆರೆ ಕುಂಟೆ, ಚೆಕ್‌ಡ್ಯಾಂಗಳಿಗೆ ನೀರು ಹರಿದಿದೆ.
Vijaya Karnataka Web ಸಾಂದರ್ಭಿಕ ಚಿತ್ರ


ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು
ಜಿಲ್ಲಾ ಕೇಂದ್ರದಲ್ಲಿ ಮಂಗಳವಾರ ಬೆಳಗ್ಗೆಯಿಂದ ದಿನವಿಡೀ ಮಳೆ ಸುರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಬೆಳಗ್ಗೆ ಸುಮಾರು 3 ಗಂಟೆಗೂ ಅಧಿಕ ಕಾಲ ಸುರಿದ ಜೋರು ಮಳೆಗೆ ನಗರದಲ್ಲಿನ ಚರಂಡಿಗಳೆಲ್ಲಾ ತುಂಬಿ ಕೊಳಚೆ ನೀರು ರಸ್ತೆಗೆ ಹರಿದಿದೆ.
ಬೆಂಗಳೂರಿನಲ್ಲಿ ವರುಣನ ಅಬ್ಬರ: ಹಲವು ಕಡೆಗಳಲ್ಲಿ ಜಲಾವೃತ, ಜನರ ಪರದಾಟ

ತಗ್ಗು ಪ್ರದೇಶದಲ್ಲಿನ ನೂರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿತು. ನಗರದ ತಗ್ಗು ಪ್ರದೇಶಗಳಾದ ನಕ್ಕಲಕುಂಟೆ, 8ನೇ ವಾರ್ಡ್‌, ಧರ್ಮ ಛತ್ರ ರಸ್ತೆ, ಕೊಂದಡಸ್ವಾಮಿ ದೇವಾಲಯ ರಸ್ತೆ, ಕಂದವಾರ ಬಾಗಿಲು, ವಾಪಸಂದ್ರ, ಕೆಳಗಿನ ತೋಟಗಳಲ್ಲಿ ಹಲವಾರು ಪ್ರದೇಶಗಳಲ್ಲಿ ತ್ಯಾಜ್ಯ ನೀರು ಮನೆಗಳಿಗೆ ನುಗ್ಗಿದೆ. ಹೀಗಾಗಿ ಜನರು ಪರದಾಡುವಂತಾಯಿತು.
ಮಳೆಯ ಅಬ್ಬರಕ್ಕೆ ಕಲ್ಯಾಣ ಮಂಟಪದಲ್ಲೆಲ್ಲಾ ನೀರು..! ನಿಂತೇ ಹೋಯ್ತು ರಿಸೆಪ್ಷನ್‌..!

ನಗರದ ಕೆಲವೆಡೆ ಅವೈಜ್ಞಾನಿಕ ನಗರೋತ್ಥಾನ ಕಾಮಗಾರಿಗಳಿಂದ ಒಳಚರಂಡಿ(ಯುಜಿಡಿ) ಕೊಚ್ಚೆ ನೀರು ಮನೆಗಳಿಗೆ ನುಗ್ಗಿದ್ದು, ಅವೈಜ್ಞಾನಿಕ ಕಾಮಗಾರಿ ಕೈಗೊಂಡ ನಗರಸಭೆ ವಿರುದ್ಧ ಸ್ಥಳೀಯ ನಿವಾಸಿಗಳು ಕಿಡಿಕಾರಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ