ಆ್ಯಪ್ನಗರ

ಡಿ.29, ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ

ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ಕಾರ್ಮಿಕ ಘಟಕ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಪಟ್ಟಣದ ನಂದಾಶ್ರೀ ಕಲ್ಯಾಣ ಮಂಟಪದಲ್ಲಿ ಡಿ.29ರಂದು ಗ್ರಾಮಾಂತರ ಜಿಲ್ಲಾ ಉತ್ಸವ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ.

Vijaya Karnataka 27 Dec 2018, 5:00 am
ಹೊಸಕೋಟೆ: ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌, ಕಾರ್ಮಿಕ ಘಟಕ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಪಟ್ಟಣದ ನಂದಾಶ್ರೀ ಕಲ್ಯಾಣ ಮಂಟಪದಲ್ಲಿ ಡಿ.29ರಂದು ಗ್ರಾಮಾಂತರ ಜಿಲ್ಲಾ ಉತ್ಸವ ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನ ಏರ್ಪಡಿಸಲಾಗಿದೆ. ಹಿರಿಯ ಸಾಹಿತಿ ದೊಡ್ಡಬಳ್ಳಾಪುರ ತಾಲೂಕಿನ ಸಿ. ವೀರಣ್ಣ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿದ್ದು, ಮಾಜಿ ಸಚಿವ ಬಿ.ಎನ್‌. ಬಚ್ಚೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್‌.ಎಸ್‌. ದೊರೆಸ್ವಾಮಿ, ಸೂ.ರಂ. ರಾಮಯ್ಯ, ಗ್ರಾಮಾಂತರ ಜಿಲ್ಲಾ ಕಸಾಪ ಅಧ್ಯಕ್ಷ ಚಿ.ಮಾ. ಸುಧಾಕರ್‌, ಚಿತ್ರ ನಟ ಟೆನಿಸ್‌ ಕೃಷ್ಣ, ಡಿಂಗ್ರಿ ನಾಗರಾಜ್‌, ಲಕ್ಷ್ಮಣ್‌, ರಾಜ್ಯ ಜ್ಞಾನ ವಿಜ್ಞಾನ ಪರಿಷತ್ತಿನ ಉಪಾಧ್ಯಕ್ಷ, ಜಿಲ್ಲಾ ಸಮ್ಮೇಳನದ ನಿಕಟಪೂರ್ವ ಅಧ್ಯಕ್ಷ ಹುಲಿಕಲ್‌ ನಟರಾಜ್‌ ಭಾಗವಹಿಸುವರು. ಸಮ್ಮೇಳನಾಧ್ಯಕ್ಷರ ಮೆರವಣಿಗೆಯನ್ನು ಯುವ ಮುಖಂಡ ಶರತ್‌ ಬಚ್ಚೇಗೌಡ, ಉತ್ಸವದ ಮೆರವಣಿಗೆಯನ್ನು ತಾಲೂಕು ಕನ್ನಡ ಕಾರ್ಮಿಕರ ಹೋರಾಟ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಿ. ಮಂಜುನಾಥ್‌ ಉದ್ಘಾಟಿಸುವರು ಎಂದು ಗ್ರಾಮಾಂತರ ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಕೆ.ಎಂ. ಚೌಡೇಗೌಡ ತಿಳಿಸಿದ್ದಾರೆ.
Vijaya Karnataka Web hoskote bangalore rural district kannada saahitya sammelan from december 29th
ಡಿ.29, ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ