ಆ್ಯಪ್ನಗರ

ಗೃಹ ಮಂಡಳಿ ವಸತಿ ಯೋಜನೆಗಳ ವಿಳಂಬ ಸಹಿಸಲ್ಲ: ಸಚಿವ ಸೋಮಣ್ಣ

ಸ್ಥಳೀಯ ಯೋಜನಾ ಪ್ರಾಧಿಕಾರಗಳು ಶೀಘ್ರ ಮಂಜೂರಾತಿ ನೀಡಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಆನೇಕಲ್‌ ಹಾಗೂ ರಾಮನಗರ ಜಿಲ್ಲೆಯ ಮಾಗಡಿಯ ವಿವಿಧ ವಸತಿ ಯೋಜಗಳು ಶೀಘ್ರ ಅನುಷ್ಠಾನಗೊಳಿಸಬೇಕು ಎಂದು ವಿ ಸೋಮಣ್ಣ ತಾಕೀತು ಮಾಡಿದರು.

Vijaya Karnataka Web 16 May 2020, 10:28 am
ಬೆಂಗಳೂರು: ಕರ್ನಾಟಕ ಗೃಹ ಮಂಡಳಿಯ ವಿವಿಧ ವಸತಿ ಯೋಜನೆಗಳ ಅನುಷ್ಠಾನದಲ್ಲಿ ಅನಗತ್ಯ ವಿಳಂಬ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಎಚ್ಚರಿಕೆ ನೀಡಿದ್ದಾರೆ.
Vijaya Karnataka Web V Somanna


ಗೃಹ ಮಂಡಳಿಯ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ಆಡಳಿತಾತ್ಮಕ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ದೀರ್ಘಕಾಲದಿಂದ ಒಂದೇ ಸ್ಥಳದಲ್ಲಿರುವ ಅಧಿಕಾರಿ/ಸಿಬ್ಬಂದಿಗಳನ್ನು ವರ್ಗಾವಣೆ ಮಾಡುವಂತೆ ಆಯುಕ್ತರಿಗೆ ಸೂಚಿಸಿದ್ದಾರೆ.

ಯೋಜನೆಗಳಿಗೆ ಶೀಘ್ರ ಅನುಮೋದನೆಗೆ ಸೂಚನೆ
ಗೃಹ ಮಂಡಳಿಯ ಯೋಜನೆಗಳಿಗೆ ಸಂಬಂಧಿಸಿದ ಸ್ಥಳೀಯ ಯೋಜನಾ ಪ್ರಾಧಿಕಾರಗಳು ಶೀಘ್ರ ಮಂಜೂರಾತಿ ನೀಡುವಂತೆ ವಸತಿ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ''ಗೃಹ ಮಂಡಳಿ ವಸತಿ ಯೋಜನೆಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ಆನೇಕಲ್‌ ಹಾಗೂ ರಾಮನಗರ ಜಿಲ್ಲೆಯ ಮಾಗಡಿ ಸ್ಥಳೀಯ ಯೋಜನಾ ಪ್ರಾಧಿಕಾರಗಳು ಶೀಘ್ರ ಯೋಜನಾ ಮಂಜೂರಾತಿ ನೀಡಬೇಕು,'' ಎಂದು ನಿರ್ದೇಶನಗಳನ್ನು ನೀಡಿದರು.

ಮೊಬೈಲ್‌ ಆ್ಯಪ್‌ನಲ್ಲೇ ನರೇಗಾ ಉದ್ಯೋಗಕ್ಕೆ ಬೇಡಿಕೆ ಸಲ್ಲಿಸಿ: ಹೇಗೆ? ಇಲ್ಲಿದೆ ವಿವರ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ