ಆ್ಯಪ್ನಗರ

ಭಯ ಬೀಳುವ, ಗೋಗರೆಯುವ ಜಾಯಮಾನ ನನ್ನದಲ್ಲ: ಎಂಟಿಬಿ ನಾಗರಾಜ್‌

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಈಗ ಹಗ್ಗ ಜಗ್ಗಾಟ ಜೋರಾಗಿದೆ. ಉಪ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಅನರ್ಹಗೊಂಡಿರುವ ಶಾಸಕ ಎಂಟಿಬಿ ನಾಗರಾಜ್‌ ಸ್ಪರ್ಧೆಗೆ ಸಜ್ಜಾಗಿದ್ದಾರೆ.

Vijaya Karnataka Web 30 Oct 2019, 4:30 pm
ಹೊಸಕೋಟೆ: ಭಯ ಬೀಳುವುದು, ಗೋಗರೆಯುವುದು ಎಂಟಿಬಿ ಜಾಯಮಾನದಲ್ಲಿ ಇಲ್ಲ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗುಡುಗಿದ್ದಾರೆ.
Vijaya Karnataka Web ಎಂಟಿಬಿ ನಾಗರಾಜ್‌
ಎಂಟಿಬಿ ನಾಗರಾಜ್‌


ಹೊಸಕೋಟೆ ತಾಲೂಕಿನ ನಂದಗುಡಿಯಲ್ಲಿ ಹೋಬಳಿ ಮಟ್ಟದ ಪೂರ್ವಭಾವಿ ಸಭೆಯಲ್ಲಿ ಎಂಟಿಬಿ ನಾಗರಾಜ್‌ ಮಾತನಾಡಿದರು.

ಯಾರು ಯಾವುದೇ ಪಕ್ಷದಲ್ಲಿ ಸ್ಪರ್ಧಿಸಲಿ. ನನ್ನ ಕಾರ್ಯಕರ್ತರ ಬಲ ನನಗೆ ಇದೆ. ಧೈರ್ಯವಾಗಿ ಚುನಾವಣೆ ಎದುರಿಸಲು ನಾನು ರೆಡಿ ಇದ್ದೇನೆ ಎಂದರು.

ಶರತ್ ಬಚ್ಚೇಗೌಡ ಸ್ವತಂತ್ರ ಅಭ್ಯರ್ಥಿಯಾಗಿ ನಿಲ್ಲುವುದೋ, ಕಾಂಗ್ರೆಸ್ ಪಕ್ಷದಲ್ಲಿ ನಿಂತು ಚುನಾವಣೆ ಎದುರಿಸುವುದು ಎಂಬ ಗೊಂದಲ ಸೃಷ್ಟಿಯಾಗಿ ಮನಸ್ಸು ಚಂಚಲವಾಗಿದ್ದು, ಜನರನ್ನು ಮರಳು ಮಾಡಲು ಇಲ್ಲ ಸಲ್ಲದ ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಎಂಟಿಬಿ ನಾಗರಾಜ್‌ ತಿಳಿಸಿದರು.

ಕ್ಷೇತ್ರದಲ್ಲಿ ಜನರಿಗಾಗಿ ಹಲವಾರು ಯೋಜನೆಗಳನ್ನು ಮಾಡಿದ್ದೇನೆ. ಜನರಿಗೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದೇನೆ. ಜನರ ಆಶೀರ್ವಾದ ನನ್ನ ಮೇಲಿದೆ ಎಂದು ಅನರ್ಹ ಶಾಸಕ ಎಂಟಿಬಿ ನಾಗರಾಜ್‌ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ