ಆ್ಯಪ್ನಗರ

ದೇಶದಲ್ಲಿ ಕೋಮುವಾದ, ಜಾತೀಯತೆ ಹೆಚ್ಚಳ

ರೈತರ ಕಾರ್ಮಿಕರ ಹಿತಾಸಕ್ತಿಗೆ ಪೂರಕವಾಗಿ ಹಲವಾರು ಹೋರಾಟಗಳನ್ನು ನಡೆಸಿದ್ದರೂ ಕೇಂದ್ರ ಸರಕಾರ ಮಾನ್ಯತೆ ನೀಡುತ್ತಿಲ್ಲ. ರೈತರಿಂದ ಭೂಮಿಯನ್ನು ಅಕ್ರಮವಾಗಿ ಭೂಸ್ವಾಧೀನ ಕಾಯ್ದೆ ಮೂಲಕ ಪಡೆದು ಕಾರ್ಪೋರೇಟ್‌ ಲಾಬಿಗೆ ಮಣಿಯಲಾಗುತ್ತಿದೆ ಎಂದು ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷ ಡಾ.ಅಶೋಕ್‌ ದವಳೆ ಕಿಡಿ ಕಾರಿದರು.

Vijaya Karnataka 11 Jun 2019, 5:00 am
ವಿಕ ಸುದ್ದಿಲೋಕ ದೊಡ್ಡಬಳ್ಳಾಪುರ
Vijaya Karnataka Web increase of communalism and casteism in the country
ದೇಶದಲ್ಲಿ ಕೋಮುವಾದ, ಜಾತೀಯತೆ ಹೆಚ್ಚಳ


ರೈತರ ಕಾರ್ಮಿಕರ ಹಿತಾಸಕ್ತಿಗೆ ಪೂರಕವಾಗಿ ಹಲವಾರು ಹೋರಾಟಗಳನ್ನು ನಡೆಸಿದ್ದರೂ ಕೇಂದ್ರ ಸರಕಾರ ಮಾನ್ಯತೆ ನೀಡುತ್ತಿಲ್ಲ. ರೈತರಿಂದ ಭೂಮಿಯನ್ನು ಅಕ್ರಮವಾಗಿ ಭೂಸ್ವಾಧೀನ ಕಾಯ್ದೆ ಮೂಲಕ ಪಡೆದು ಕಾರ್ಪೋರೇಟ್‌ ಲಾಬಿಗೆ ಮಣಿಯಲಾಗುತ್ತಿದೆ ಎಂದು ಅಖಿಲ ಭಾರತ ಕಿಸಾನ್‌ ಸಭಾ ಅಧ್ಯಕ್ಷ ಡಾ.ಅಶೋಕ್‌ ದವಳೆ ಕಿಡಿ ಕಾರಿದರು.

ನಗರದ ಅನಿಬೆæಸೆಂಟ್‌ ಪಾರ್ಕ್‌ನಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಆಯೋಜಿಸಿರುವ ಮೂರು ದಿನಗಳ ರಾಜ್ಯ ಮಟ್ಟದ ರೈತರ ಅಧ್ಯಯನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದಲ್ಲಿ ಕೋಮುವಾದ, ಜಾತೀಯತೆ ದಿನೇ ದಿನೇ ಹೆಚ್ಚಾಗುತ್ತಿದೆ. ಕಾರ್ಮಿಕ ನೀತಿಗಳನ್ನು ಬದಲಾವಣೆ ಮಾಡಲಾಗುತ್ತಿದೆ. ದಲಿತರ, ಹಿಂದುಳಿದವರ, ಮಹಿಳೆಯರ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಪ್ರಾಂತ ರೈತ ಸಂಘ ಗಂಭೀರ ಚಿಂತನೆ ನಡೆಸಬೇಕಿದೆ. ನೀರಾವರಿ ಯೋಜನೆ, ಸರಕಾರದ ರೈತ ವಿರೋಧಿ ನೀತಿಗಳನ್ನು ಅರ್ಥ ಮಾಡಿಕೊಳ್ಳುವುದು ಹಾಗೂ ರೈತರ ಸಮಸ್ಯೆಗಳಿಗೆ ಪರಿಹಾರ ಹುಡುಕುವುದು. ಈ ದೇಶದ ಪ್ರಜಾಸತ್ತಾತ್ಮಕ ಉಳಿವಿಗೆ ಹಾಗೂ ಸಂವಿಧಾನದ ಆಶಯಗಳನ್ನು ಈಡೇರಿಸಲು ಎಲ್ಲರೂ ಒಗ್ಗೂಡಿ ಹೋರಾಟ ನಡೆಸಬೇಕಿದೆ ಎಂದರು.

ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಎನ್‌ಡಿಎ ಸರಕಾರ 2014ರ ಚುನಾವಣೆಯಲ್ಲಿ ರೈತರ ಸಾಲಮನ್ನಾ ಸೇರಿದಂತೆ ಯಾವೊಂದು ಭರವಸೆಗಳನ್ನು ಸಹ ಈಡೇರಿಸಿಲ್ಲ. ರೈತರ ಹಾಗೂ ಕಾರ್ಮಿಕರ ಹಿತಾಸಕ್ತಿಗೆ ಮಾರಕವಾಗಿರುವ ಈ ಸರಕಾರ ಮತ್ತೊಮ್ಮೆ ಅಧಿಕಾರಕ್ಕೆ ಬಂದಿದ್ದು, ಇಂದಿನ ಸವಾಲುಗಳನ್ನು ಎದುರಿಸಲು ಪ್ರಾಂತ ರೈತ ಸಂಘಟನೆ ಒಗ್ಗೂಡಿ ಹೋರಾಟ ನಡೆಸಬೇಕಿದೆ ಎಂದು ಕರೆ ನೀಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಬಿ.ಸಿ.ಬಯ್ಯಾರೆಡ್ಡಿ ಮಾತನಾಡಿ, ಇಂದು ದೇಶದಲ್ಲಿ ಕೃಷಿ ಬಿಕ್ಕಟ್ಟು ಎದುರಾಗಿದ್ದು, ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣದ ಪರಿಣಾಮವಾಗಿ ಸುಮಾರು 3.7 ಲಕ್ಷ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಕಾರದ ಅವೈಜ್ಞಾನಿಕ ನೀತಿಗಳಿಂದಾಗಿ ದೇಶದಲ್ಲಿ ಕೃಷಿ ಬಿಕ್ಕಟ್ಟು ದಿನೇ ದಿನೇ ಹೆಚ್ಚಾಗುತ್ತಿದ್ದು, ರೈತರನ್ನು ಸಂಕಷ್ಟಕ್ಕೆ ದೂಡುತ್ತಿವೆ. ರೈತರ ಆತ್ಮಹತ್ಯೆ ತಡೆ, ಸ್ವಾಮಿನಾಥನ್‌ ವರದಿ ಜಾರಿ, ಭೂಸ್ವಾಧೀನ ನೀತಿ ವಿರುದ್ಧ ಹೋರಾಟಕ್ಕೆ ಸಜ್ಜುಗೊಳ್ಳಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ರಂಗಕರ್ಮಿ ಗಿರೀಶ್‌ ಕಾರ್ನಾಡ್‌ ಹಾಗೂ ಇತ್ತೀಚೆಗೆ ದೊಡ್ಡಬಳ್ಳಾಪುರದಲ್ಲಿ ನಿಧನರಾದ ಪ್ರಾಂತ ರೈತ ಸಂಘದ ತಾಲೂಕು ಮಾಜಿ ಅಧ್ಯಕ್ಷ ಸಿದ್ದಗಂಗಯ್ಯ ಅವರಿಗೆ ಶ್ರದ್ದಾಂಜಲಿ ಸಲ್ಲಿಸಲಾಯಿತು. ಸಿಐಟಿಯು ರಾಜ್ಯ ಕಾರ್ಯದರ್ಶಿ ಕೆ.ಎನ್‌.ಉಮೇಶ್‌, ಕರ್ನಾಟಕ ಪ್ರಾಂತ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯು.ಬಸವರಾಜು, ಉಪಾಧ್ಯಕ್ಷ ರಾದ ಎನ್‌.ವೆಂಕಟಾಚಲಯ್ಯ, ಮಾರುತಿ ಮಾನ್ಪಡೆ, ಮುಖಂಡರಾದ ಬಫಿನ್‌, ಯಶೋಧಮ್ಮ,ರಾಜ್ಯ ಮಟ್ಟದ ರೈತರ ಅಧ್ಯಯನ ಶಿಬಿರದ ಸ್ವಾಗತ ಸಮಿತಿಯ ಅಧ್ಯಕ್ಷ ಎನ್‌.ನಾಗರಾಜ ಗೌಡ, ಪ್ರಧಾನ ಕಾರ‍್ಯದರ್ಶಿ ಆರ್‌.ಚಂದ್ರತೇಜಸ್ವಿ, ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಕಾರ‍್ಯದರ್ಶಿ ಸಿ.ಎಚ್‌.ರಾಮಕೃಷ್ಣ ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ