ಆ್ಯಪ್ನಗರ

ಎಂ.ಟಿ.ಬಿ ನಾಗರಾಜ್‌ ಮನೆಗೆ ಐಟಿ ದಾಳಿ

ಹೊಸಕೋಟೆ ಕಾಂಗ್ರೆಸ್‌ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್‌ ಅವರ ಆಪ್ತರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಬರಿಗೈಯಲ್ಲಿ ಹಿಂದಿರುಗಿದ್ದಾರೆ.

Vijaya Karnataka Web 5 May 2018, 11:19 am
ಬೆಂಗಳೂರು: ಹೊಸಕೋಟೆ ಕಾಂಗ್ರೆಸ್‌ ಅಭ್ಯರ್ಥಿ ಎಂ.ಟಿ.ಬಿ ನಾಗರಾಜ್‌ ಅವರ ಆಪ್ತರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಬರಿಗೈಯಲ್ಲಿ ಹಿಂದಿರುಗಿದ್ದಾರೆ.
Vijaya Karnataka Web it


ಚುನಾವಣೆಯ ಹಿನ್ನೆಲೆಯಲ್ಲಿ ಅಭ್ಯರ್ಥಿ ನಾಗರಾಜ್‌ ಆಪ್ತರ ಮನೆಯಲ್ಲಿ ಹಣ ಇಟ್ಟಿರುವ ಕುರಿತು ಮಾಹಿತಿ ಪಡೆದಿದ್ದ ಅಧಿಕಾರಿಗಳು, ಬೆಳಂಬೆಳಗ್ಗೆ ಕೆ.ಆರ್‌. ರಸ್ತೆಯಲ್ಲಿನ ನಗರಸಭೆ ಅಧ್ಯಕ್ಷ ಹೇಮಂತ್ ಕುಮಾರ್‌, ಗುತ್ತಿಗೆದಾರ ಅತ್ತಿವಟ್ಟ ಕೇಶವ ಮೂರ್ತಿ ಅವರ ಮನೆಗಳಿಗೆ ದಾಳಿ ನಡೆಸಿದರು. ಆದರೆ ಎರಡೂ ಮನೆಗಳಲ್ಲಿ ಯಾವುದೇ ದಾಖಲೆ, ಹಣ ಸಿಗದೆ ಇದ್ದುದರಿಂದ ಅಧಿಕಾರಿಗಳು ಬರಿಗೈಯಲ್ಲಿ ವಾಪಾಸಾಗಿದ್ದಾರೆ. ಏಕಾಏಕಿ ದಾಳಿ ನಡೆಸಿದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

2 ದಿನಗಳ ಹಿಂದೆ ಕಲಬುರಗಿಯಲ್ಲಿ ನರೇಂದ್ರ ಮೋದಿ ಅವರ ಬಹಿರಂಗ ಸಮಾವೇಶದ ಮುನ್ನ ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾವ್‌ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮ ಆಸ್ತಿ ಗಳಿಕೆ ಸಂಬಂಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ