ಆ್ಯಪ್ನಗರ

ಲೋಕಾಯುಕ್ತರಿಂದ ರಾಜಕಾಲುವೆ ಒತ್ತುವರಿ ತೆರವು ಪರಿಶೀಲನೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾನಾ ತಾಲೂಕುಗಳ ರಾಜಕಾಲುವೆ ಒತ್ತುವರಿ ತೆರವು ಕಾರಾರ‍ಯಚರಣೆ ಹಾಗೂ ಸ್ಥಿತಿಗತಿಗಳ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥಶೆಟ್ಟಿ ಪರಿಶೀಲನೆ ನಡೆಸಿದರು.

Vijaya Karnataka 23 Nov 2018, 3:13 pm
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾನಾ ತಾಲೂಕುಗಳ ರಾಜಕಾಲುವೆ ಒತ್ತುವರಿ ತೆರವು ಕಾರಾರ‍ಯಚರಣೆ ಹಾಗೂ ಸ್ಥಿತಿಗತಿಗಳ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥಶೆಟ್ಟಿ ಪರಿಶೀಲನೆ ನಡೆಸಿದರು.
Vijaya Karnataka Web lokayukta inspects raja kaluve encroachment
ಲೋಕಾಯುಕ್ತರಿಂದ ರಾಜಕಾಲುವೆ ಒತ್ತುವರಿ ತೆರವು ಪರಿಶೀಲನೆ


ರಾಜಕಾಲುವೆ ತೆರವು ಪ್ರಕರಣದ ಕುರಿತಂತೆ ಮಾಹಿತಿ ಪಡೆಯಲು ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿದ್ದ ಅವರು ವಿಳಂಬಕ್ಕೆ ಕಾರಣ ಕೇಳಿದಾಗ ಸಾರ್ವಜನಿಕರ ನೆರವಿನಿಂದ ಕೆರೆ ಹೂಳೆತ್ತಿರುವ ಕುರಿತ ಮಾಹಿತಿ ಪಡೆದು ಕೂಡಲೇ ಸ್ಥಳ ಪರಿಶೀಲನೆ ನಡೆಸಲು ಮುಂದಾದರು. ಸ್ಥಳೀಯರ ನೆರವಿನಿಂದ ನಡೆಸಲಾಗುತ್ತಿರುವ ಮುತ್ತೂರು ಕೆರೆ ಅಭಿವೃದ್ಧಿ ಕುರಿತಂತೆ ಪರಿಶೀಲನೆ ನಡೆಸಿದ ಅವರು, ಕೆರೆಗಳ ಅಭಿವೃದ್ಧಿಗೆ ಸ್ಥಳೀಯರು ಜಿಲ್ಲಾಡಳಿತಕ್ಕೆ ನೆರವು ನೀಡಿದ್ದು ಪ್ರಶಂಸನೀಯ ಹಾಗೂ ಉತ್ತಮ ಬೆಳವಣಿಗೆಯಾಗಿದೆ. ಪರಿಸರ ರಕ್ಷ ಣೆ ಹಾಗೂ ಅಂತರ್ಜಲ ಹೆಚ್ಚಿಸಲು ಕೆರೆಗಳ ಅಭಿವೃದ್ಧಿ ಮಹತ್ವದ್ದಾಗಿದೆ. ಸರಕಾರಿ ಯೋಜನೆಗೂ ಹೆಚ್ಚಿನದಾಗಿ ಸಾರ್ವಜನಿಕರ ನೆರವಿನೊಂದಿಗೆ ನಡೆಸುತ್ತಿರುವ ಕೆರೆಗಳ ಅಭಿವೃದ್ಧಿ ಮಾದರಿಯಾಗಲಿದೆ ಎಂದರು.

ಜಿಲ್ಲೆಯ ದೇವನಹಳ್ಳಿ, ಕನ್ನಮಂಗಲ, ಕಾರೇಹಳ್ಳಿ, ದೊಡ್ಡಬಳ್ಳಾಪುರದ ಮುತ್ತೂರು ಹಾಗೂ ನೆಲಮಂಗಲ ತಾಲೂಕಿನ ಟಿ.ಬೇಗೂರು ಕೆರಗಳ ಹೂಳೆತ್ತುವಿಕೆ ಹಾಗೂ ಅಭಿವೃದ್ಧಿ ಕುರಿತು ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಬೆಂಗ್ರಾ ಜಿಲ್ಲಾಧಿಕಾರಿ ಕರೀಗೌಡ, ದೊಡ್ಡಬಳ್ಳಾಪುರ ಶಾಸಕ ಟಿ.ವೆಂಕಟರಮಣಯ್ಯ, ಉಪವಿಭಾಗಾಧಿಕಾರಿ ಸಿ.ಮಂಜುನಾಥ್‌, ತಹಸೀಲ್ದಾರ್‌ ಬಿ.ಎ.ಮೋಹನ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ