ಆ್ಯಪ್ನಗರ

ಶಿಕ್ಷಕಿಗೆ ಪೆಟ್ರೋಲ್‌ ಸುರಿದಿದ್ದ ಪತಿ ಧರ್ಮಸ್ಥಳದಲ್ಲಿ ಆತ್ಮಹತ್ಯೆ

ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದಿದ್ದ ಆರೋಪಿ ರೇಣುಕಾರಾಧ್ಯ ಧರ್ಮಸ್ಥಳದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿಕ ಸುದ್ದಿಲೋಕ 18 Aug 2017, 2:20 pm
ಮಾಗಡಿ: ಶಿಕ್ಷಕಿಯ ಮೇಲೆ ಪೆಟ್ರೋಲ್ ಸುರಿದಿದ್ದ ಆರೋಪಿ ರೇಣುಕಾರಾಧ್ಯ ಧರ್ಮಸ್ಥಳದ ಬಳಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Vijaya Karnataka Web magadi man suicide in dharmasthala
ಶಿಕ್ಷಕಿಗೆ ಪೆಟ್ರೋಲ್‌ ಸುರಿದಿದ್ದ ಪತಿ ಧರ್ಮಸ್ಥಳದಲ್ಲಿ ಆತ್ಮಹತ್ಯೆ


ಮಾಗಡಿ ತಾಲೂಕಿನ ಮಾಡಬಾಳ್ ಹೋಬಳಿಯ ಶಂಭಯ್ಯನ ಪಾಳ್ಯದ ಸರಕಾರಿ ಶಾಲೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುನಂದಾ ಅವರ ಮೇಲೆ ಪತಿ ರೇಣುಕಾರಾಧ್ಯ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದರು.

ಶಿಕ್ಷಕಿಗೆ ಮಾಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊದಲ ಪತಿಯಿಂದ ಪರಿತ್ಯಕ್ತಳಾಗಿದ್ದ ಶಿಕ್ಷಕಿ ಸುನಂದಮ್ಮ ಐದು ವರ್ಷದಿಂದ ಬಾರ್ ಮಾಲೀಕ ರೇಣುಕಾರಾಧ್ಯರೊಂದಿಗೆ ಸಂಪರ್ಕದಲ್ಲಿದ್ದು ಮರುಮದುವೆಯೂ ಆಗಿದ್ದರೆಂದು ಹೇಳಲಾಗುತ್ತಿದೆ.

ರೇಣುಕಾರಾಧ್ಯ ಮೊದಲ ಪತ್ನಿಯಿಂದ ಪರಿತ್ಯಕ್ತರಾಗಿದ್ದರು. ಕಳೆದ ಹದಿನೈದು ದಿನಗಳಿಂದ ಭಿನ್ನಾಭಿಪ್ರಾಯಗಳು ತಾರಕಕ್ಕೇರಿ ಆ.16ರಂದು ಶಾಲೆ ಬಳಿ ಬಂದ ರೇಣುಕಾರಾಧ್ಯ ಕೊಠಡಿಯಲ್ಲಿದ್ದ ಇಬ್ಬರು ವಿದ್ಯಾರ್ಥಿಗಳನ್ನು ಹೊರಕಳುಹಿಸಿ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ