ಆ್ಯಪ್ನಗರ

ಜೇನು ದಾಳಿ: ವ್ಯಕ್ತಿ ಮೃತ, 20ಕ್ಕೂ ಹೆಚ್ಚು ಮಂದಿ ಗಾಯ

ಜೇನುಹುಳು ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಟ್ಟಣಕ್ಕೆ ಸಮೀಪದ ತಮಿಳುನಾಡಿನ ಕೆಂಪಟ್ಟಿಯಲ್ಲಿ ಬುಧವಾರ ನಡೆದಿದೆ.

Vijaya Karnataka 15 Dec 2018, 5:00 am
ಆನೇಕಲ್‌: ಜೇನುಹುಳು ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಪಟ್ಟಣಕ್ಕೆ ಸಮೀಪದ ತಮಿಳುನಾಡಿನ ಕೆಂಪಟ್ಟಿಯಲ್ಲಿ ಬುಧವಾರ ನಡೆದಿದೆ.
Vijaya Karnataka Web man dies in bee attack
ಜೇನು ದಾಳಿ: ವ್ಯಕ್ತಿ ಮೃತ, 20ಕ್ಕೂ ಹೆಚ್ಚು ಮಂದಿ ಗಾಯ


ಮೃತಪಟ್ಟವರನ್ನು ಕೆಂಪಟ್ಟಿಯ ರಾಜಪ್ಪ (45) ಎಂದು ಗುರುತಿಸಲಾಗಿದೆ. ಇದೇ ಗ್ರಾಮದ ಮಧು, ನವೀನ, ಪ್ರಕಾಶ್‌, ನಾಗರಾಜು ಎಂಬುವವರು ತೀವ್ರವಾಗಿ ಗಾಯಗೊಂಡಿದ್ದು ತೀವ್ರ ನಿಗಾ ಘಟಕದಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಕೆಂಪಟ್ಟಿಯ ರಾಮಕ್ಕ (100) ಎಂಬ ವೃದ್ಧರು ಬುಧವಾರ ಮೃತಪಟ್ಟಿದ್ದರು. ಶವ ಸಂಸ್ಕಾರಕ್ಕಾಗಿ ಕೊಂಡೊಯ್ಯುತ್ತಿದ್ದಾಗ ಸಮೀಪದ ಆಲದ ಮರದಲ್ಲಿನ ಜೇನುಹುಳುಗಳು ದಾಳಿ ನಡೆಸಿದ್ದರಿಂದ ಶವವನ್ನು ಅಲ್ಲಿಯೇ ಬಿಟ್ಟು ಜನರು ಓಡಿಹೋಗಿದ್ದಾರೆ. ಈ ಸಂದರ್ಭದಲ್ಲಿ ಜೇನುಹುಳುಗಳ ದಾಳಿಗೆ ಸಿಲುಕಿದ ರಾಜಪ್ಪ ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ