ಆ್ಯಪ್ನಗರ

ಸಮ್ಮಿಶ್ರ ಸರಕಾರದಲ್ಲಿ ಕೆಲಸಗಳು ಆಗುತ್ತಿಲ್ಲ, ಅನುದಾನ ಸಿಗುತ್ತಿಲ್ಲ: ಸಿಎಂ ವಿರುದ್ಧ ವಸತಿ ಸಚಿವ ಅಸಮಾಧಾನ

ಸಮ್ಮಿಶ್ರ ಸರಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ. ನಮ್ಮ ವೇಗಕ್ಕೆ ಯಾವುದೇ ಸಹಕಾರ ದೊರೆಯುತ್ತಿಲ್ಲ. ಇಲ್ಲಿ ನಮಗೆ ಅಡೆತಡೆಗಳಿವೆ. ಇದನ್ನು ಸರಿಪಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

Vijaya Karnataka Web 8 May 2019, 7:24 pm
ಬೆಂಗಳೂರು: ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್‌ ಶಾಸಕರು, ಸಚಿವರ ಆಕ್ರೋಶ ಹೆಚ್ಚಾಗಿದೆ. ಈಗ ವಸತಿ ಸಚಿವ ಎಂಟಿಬಿ ನಾಗರಾಜ್‌ ಸರದಿ.
Vijaya Karnataka Web ಎಂಟಿಬಿ ನಾಗರಾಜ್‌
ಎಂಟಿಬಿ ನಾಗರಾಜ್‌


ಹೊಸಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂಟಿಬಿ ನಾಗರಾಜ್ ಸಮ್ಮಿಶ್ರ ಸರಕಾರ ವಿರುದ್ಧ ಕಿಡಿಕಾರಿದರು.

ಮುಖ್ಯಮಂತ್ರಿ ಮೈತ್ರಿ ಧರ್ಮ ಪಾಲನೆ ಮಾಡಬೇಕು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಬೇಕು ಎಂದು ಆಗ್ರಹಿಸಿದರು.

ಮೈತ್ರಿ ಸರಕಾರದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ. ಸಿದ್ದರಾಮಯ್ಯ ಸರಕಾರ ಇದ್ದಾಗ ಅಭಿವೃದ್ಧಿ ಕಾರ್ಯ ವೇಗವಾಗಿ ನಡೆಯುತ್ತಿತ್ತು. ಆದರೆ ಈಗ ಕುಂಠಿತಗೊಂಡಿದೆ. ಸಚಿವನಾದರೂ ಸಂಪೂರ್ಣ ಅಧಿಕಾರ ಇಲ್ಲದಂತಾಗಿದೆ ಎಂದು ಎಂಟಿಬಿ ನಾಗರಾಜ್‌ ಅಸಮಾಧಾನ ಹೊರ ಹಾಕಿದರು.

ಸಮ್ಮಿಶ್ರ ಸರಕಾರದಲ್ಲಿ ಎಲ್ಲವೂ ಸರಿಯಾಗಿಲ್ಲ. ನಮ್ಮ ವೇಗಕ್ಕೆ ಯಾವುದೇ ಸಹಕಾರ ದೊರೆಯುತ್ತಿಲ್ಲ. ಇಲ್ಲಿ ನಮಗೆ ಅಡೆತಡೆಗಳಿವೆ. ಇದನ್ನು ಸರಿಪಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವರು ತಿಳಿಸಿದರು.

ಶಾಸಕನಾಗಿ ಹಲವಾರು ಯೋಜನೆಗಳನ್ನು ಕ್ಷಿಪ್ಷ ಗತಿಯಲ್ಲಿ ಮಾಡಿಸಿದ್ದೇ. ಆಗ ಸಿದ್ದರಾಮಯ್ಯ ಸರಕಾರ ಇತ್ತು. ಈಗ ಸಚಿವನಾಗಿದ್ದೇನೆ ಆದರೂ ಯಾವುದೇ ಕೆಲಸಗಳನ್ನು ಸುಗಮವಾಗಿ ಆಗುತ್ತಿಲ್ಲ. ಇದಕ್ಕೆ ಸರಕಾರದಲ್ಲಿ ಹಲವು ತೊಂದರೆಗಳಿವೆ. ಇದನ್ನು ಕುಮಾರಸ್ವಾಮಿಯೇ ಸರಿಪಡಿಸಬೇಕು ಎಂದರು.

ಕುಮಾರಸ್ವಾಮಿ ಐದು ವರ್ಷ ಮುಖ್ಯಮಂತ್ರಿ ಆಗಿರಲಿ. ಆದರೆ ಎಲ್ಲರಿಗೂ ಅನುದಾನ ಸಮಾನವಾಗಿ ಹಂಚಿಕೆಯಾಗಬೇಕು. ಆಗ ನಮಗೂ ಕ್ಷೇತ್ರದಲ್ಲಿ ಕೆಲಸ ಕಾರ್ಯ ಮಾಡಲು ಸಹಕಾರಿಯಾಗುತ್ತದ ಎಂದು ಸಚಿವ ಎಂಟಿಬಿ ನಾಗರಾಜ್‌ ಆಗ್ರಹಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ