ಆ್ಯಪ್ನಗರ

ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ, ರೈತರು, ವರ್ತಕರಲ್ಲಿ ಪ್ರಮಾಣ ಮಾಡಿಸಿದ ಎಸ್‌.ಟಿ ಸೋಮಶೇಖರ್

ಕೊರೊನಾ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಿ ಎಂದು ರೈತರು, ವರ್ತಕರಲ್ಲಿ ಸಚಿವ ಎಸ್‌ಟಿ ಸೋಮಶೇಖರ್ ಪ್ರಮಾಣ ಮಾಡಿಸಿದರು. ಬುಧವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಎಸ್.ಟಿ. ಸೋಮಶೇಖರ್ ಅವರು ಭೇಟಿ ನೀಡಿ ಪರಿಶೀಲಿಸಿದರು.

Vijaya Karnataka Web 8 Apr 2020, 10:43 am
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಕೃಷಿ ಉತ್ಪನ್ನ ಮಾರುಕಟ್ಟೆಗೆ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಬುಧವಾರ ಮುಂಜಾನೆ ಭೇಟಿ ನೀಡಿ ಪರಿಶೀಲಿಸಿದರು.ಈ ವೇಳೆ ರೈತರು, ವರ್ತಕರು ಹಾಗೂ ಅಧಿಕಾರಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವಂತೆ ಪ್ರಮಾಣ ಮಾಡಿಸಿದರು.ಅಲ್ಲದೆ ಕೆಲವು ತುರ್ತು ಕ್ರಮಗಳನ್ನು ತಕ್ಷಣದಿಂದಲೇ ಕೈಗೊಳ್ಳುವಂತೆ ಎಪಿಎಂಸಿ ಅಧಿಕಾರಿಗಳಿಗೆ ಸೂಚಿಸಿದರು.
Vijaya Karnataka Web st somashekar


ಎಪಿಎಂಸಿ ಆವರಣದಲ್ಲಿ ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಆವರಣದಲ್ಲಿ ಪ್ರತಿದಿನ ಫಾಗಿಂಗ್ ವ್ಯವಸ್ಥೆಯನ್ನು ಮಾಡಬೇಕು. ಶುದ್ಧ ಕುಡಿಯುವ ನೀರಿಗೆ ಆದ್ಯತೆ ಕೊಡಬೇಕು. ಕೊರೊನಾ ವೈರಸ್ ಸಾಂಕ್ರಾಮಿಕ ರೋಗವಾದ್ದರಿಂದ ಜಾಗೃತಿಯ ಅಗತ್ಯವಿದ್ದು, ಧ್ವನಿವರ್ಧಕಗಳ ಮೂಲಕ ರೈತರಿಗೆ ಜಾಗೃತಿ ಮೂಡಿಸುವಂತೆ ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊರೊನಾ ಎಫೆಕ್ಟ್‌: ಸಾಮಾಜಿಕ ಸಾಮರಸ್ಯ ಕಾಪಾಡೋ ಬಿಎಸ್‌ವೈ ಮನವಿಗೆ ಪರಂ ಸ್ವಾಗತ

ಮುಂಜಾಗರೂಕತಾ ಕ್ರಮವಾಗಿ ಎಲ್ಲ 162 ಎಪಿಎಂಸಿ ವತಿಯಿಂದ ಉಚಿತ ಸ್ಯಾನಿಟೇಸೇಶನ್ ಹಾಗೂ ಮಾಸ್ಕ್ ಗಳನ್ನು ವಿತರಣೆ ಮಾಡಬೇಕು. ಈ ಕ್ಷಣದಿಂದಲೇ ಇದು ಜಾರಿಗೆ ಬರಬೇಕು ಎಂದು ಸಚಿವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ರೈತರು, ಎಪಿಎಂಸಿ ವರ್ತಕರ ಜೊತೆ ಸಮಾಲೋಚನೆ ನಡೆಸಿದ ಸಚಿವರು, ಅವರ ಅಹವಾಲುಗಳನ್ನು ಆಲಿಸಿದರು. ಕೆಲವು ತುರ್ತು ಕೆಲಸಗಳನ್ನು ತಕ್ಷಣವೇ ಅನುಷ್ಠಾನಕ್ಕೆ ತಂದು ಅನುಕೂಲ ಮಾಡಿಕೊಡುವಂತೆ ಎಪಿಎಂಸಿ ಅಧಿಕಾರಿಗಳಿಗೆ ಸ್ಥಳದಲ್ಲೇ ಸಚಿವರು ಸೂಚನೆ ನೀಡಿದರು.

ಬೆಂಗಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಹೂವಿನ ಮಾರ್ಕೆಟ್


ಕೊರೊನಾ ಲಾಕ್‌ಡೌನ್‌ ಪರಿಣಾಮ ಹೂವಿನ ಮಾರುಕಟ್ಟೆ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಬೆಂಗಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಹೂವಿನ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದರು. ಅಲ್ಲದೆ, ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸರ್ಕಾರ ಮತ್ತು ಮುಖ್ಯಮಂತ್ರಿಗಳು ಸದಾ ಸಿದ್ಧ ಎಂದು ಸಚಿವರು ಭರವಸೆ ನೀಡಿದರು.

ಕೋಮು ಪ್ರಶ್ನೆ ಬೇಡ: ತಬ್ಲಿಘಿ ಸಭೆಯಲ್ಲಿ ಭಾಗವಹಿಸಿದವರ ಮಾಹಿತಿಯೇ ಕೊಡದ ಮಮತಾ!

ಯಾರೂ ಸಹ ಹಸಿವಿನಿಂದ ಇರಬಾರದು ಎಂಬುದು ಸರ್ಕಾರದ ಉದ್ದೇಶವಾಗಿದ್ದು , ಮಾನ್ಯ ಮುಖ್ಯಮಂತ್ರಿಗಳು ಈ ಬಗ್ಗೆ ಸಚಿವರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಪ್ರತಿ ಜಿಲ್ಲೆಗಳಿಗೆ 20ರಿಂದ 25 ಸಾವಿರ ಆಹಾರ ಕಿಟ್ ಗಳನ್ನು ಕೂಲಿಕಾರ್ಮಿಕರಿಗೆ ಒದಗಿಸಲು ಮುಖ್ಯಮಂತ್ರಿಗಳು ಮತ್ತು ಕಾರ್ಮಿಕ ಸಚಿವರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ ಎಂದು ಸಚಿವರು ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ