ಆ್ಯಪ್ನಗರ

ಹೈಟೆಕ್‌ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ

ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಿ ಹೈಟೆಕ್‌ ಶೌಚಾಲಯ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಶಾಸಕ ನಿಸರ್ಗ ಎಲ್‌.ಎನ್‌. ನಾರಾಯಣಸ್ವಾಮಿ ಹೇಳಿದರು.

Vijaya Karnataka 17 Nov 2018, 4:07 pm
ದೇವನಹಳ್ಳಿ: ಪಟ್ಟಣದ ಸ್ವಚ್ಛತೆಗೆ ಆದ್ಯತೆ ನೀಡಿ ಹೈಟೆಕ್‌ ಶೌಚಾಲಯ ನಿರ್ಮಾಣಕ್ಕೆ ಅನುಕೂಲ ಮಾಡಿಕೊಡಲಾಗಿದೆ ಎಂದು ಶಾಸಕ ನಿಸರ್ಗ ಎಲ್‌.ಎನ್‌. ನಾರಾಯಣಸ್ವಾಮಿ ಹೇಳಿದರು.
Vijaya Karnataka Web mla lay foundation stone to high tech toilet
ಹೈಟೆಕ್‌ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ


ಪಟ್ಟಣದ ಹಳೇ ಬಸ್‌ ನಿಲ್ದಾಣದ ಸಮೀಪದ ಇರುವ 19ನೇ ವಾರ್ಡಿನ ಪುರಸಭಾ ವ್ಯಾಪ್ತಿಯ ರಾಜಕಾಲುವೆಯ ಪಕ್ಕದ ಜಾಗದಲ್ಲಿ ಪಾವತಿಸಿ ಬಳಸುವ ಹೈಟೆಕ್‌ ಶೌಚಾಲಯ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು. ಬಯಲು ಶೌಚದಿಂದಾಗಿ ಪಟ್ಟಣದ ಸೌಂದರ್ಯಕ್ಕೆ ಧಕ್ಕೆಯಾಗುವುದಲ್ಲದೇ ಅಸ್ವಚ್ಛತೆಯಿಂದ ರೋಗ ರುಜಿನಗಳು ಹರಡುತ್ತವೆ. ದಿನನಿತ್ಯ ಸಾವಿರಾರು ಪ್ರಯಾಣಿಕರು, ನಾಗರಿಕರು ಹಳೇ ಬಸ್‌ ನಿಲ್ದಾಣಕ್ಕೆ ಬೇರೆ ಬೇರೆ ಊರುಗಳಿಂದ ಬಸ್ಸುಗಳಿಗಾಗಿ ಬರುತ್ತಾರೆ. ಇಲ್ಲಿ ಒಂದು ವ್ಯವಸ್ಥಿತವಾದ ಶೌಚಾಲಯ ಇದ್ದರೆ ಅನುಕೂಲವಾಗುತ್ತದೆ. ಚಿಕ್ಕಬಳ್ಳಾಪುರದ ವಿಶ್ವಮಾನವ ಸೇವಾ ಸಂಘ ವತಿಯಿಂದ ಪುರಸಭೆಗೆ ಶೌಚಾಲಯ ನಿರ್ಮಿಸಿಕೊಡಲು ಮನವಿ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಂಡು ಸುಸಜ್ಜಿತ ಶೌಚಾಲಯ ನಿರ್ಮಾಣ ಮಾಡಲಾಗುತ್ತಿದೆ. ಇದರ ಸದುಪಯೋಗವನ್ನು ಸಾರ್ವಜನಿಕರು ಬಳಸಿಕೊಳ್ಳುವಂತೆ ಆಗಬೇಕು ಎಂದು ಹೇಳಿದರು.

19ನೇ ವಾರ್ಡಿನ ಪುರಸಭೆ ಸದಸ್ಯ ಲಕ್ಷ್ಮೀ ವೆಂಕಟೇಶ್‌ ಮಾತನಾಡಿದರು.

ಇದೇ ಸಂದರ್ಭದಲ್ಲಿ ಪುರಸಭಾ ಸ್ಥಾಯಿ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ, ಮುಖ್ಯಾಧಿಕಾರಿ ಹನುಮಂತೇಗೌಡ, ಉಪಾಧ್ಯಕ್ಷೆ ಆಶಾರಾಣಿ, ಸದಸ್ಯರಾದ ಬೇಕರಿ ಮಂಜುನಾಥ್‌, ನರಸಿಂಹಮೂರ್ತಿ, ನಾರಾಯಣಸ್ವಾಮಿ, ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ವಕೀಲ ಸುನೀಲ್‌, ಮುಂತಾದವರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ