ಆ್ಯಪ್ನಗರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 8 ಡೆಂಗ್ಯೂ ಪ್ರಕರಣ ಪತ್ತೆ: ಗ್ರಾಮೀಣ ಭಾಗದಲ್ಲಿ ಪ್ರಚಾರ ಚುರುಕು

ಜಿಲ್ಲೆಯಲ್ಲಿ ಪ್ರಸ್ತುತ ಎಂಟು ಡೆಂಗ್ಯೂ ಪ್ರಕರಣಗಳು ದಾಖಲಾಗುವ ಮೂಲಕ ಸಾರ್ವಜನಿಕರು ಭೀತಿಗೆ ಒಳಗಾಗಿದ್ದಾರೆ. ಒಂದೆಡೆ ಕೊರೊನಾ ಮತ್ತೊಂದೆಡೆ ಡೆಂಗ್ಯೂ ಹಿನ್ನೆಲೆಯಲ್ಲಿ ಮೈ ಬಿಸಿಯಾಗುತ್ತಿದ್ದಂತೆ ಜನರಲ್ಲಿ ಜ್ವರದ ಭೀತಿ ಆವರಿಸುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ಜಿಲ್ಲಾಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಡೆಂಗ್ಯೂ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

Vijaya Karnataka Web 4 Sep 2020, 1:40 pm
ಬೆಂಗಳೂರು ಗ್ರಾಮಾಂತರ: ಕೊರೊನಾ ಕಾಲಿಟ್ಟ ದಿನದಿಂದಲೂ ಅನ್ಯ ಕಾಯಿಲೆಗಳ ಬಗ್ಗೆ ಜನ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ ಇದೀಗ ಕೊರೊನಾ ಪ್ರಕರಣಗಳ ಸಂಖ್ಯೆ ಜೊತೆಗೆ ಡೆಂಗ್ಯೂ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಜನ ಭಯಭೀತಗೊಂಡಿದ್ದಾರೆ.
Vijaya Karnataka Web ಸಾಂದರ್ಭಿಕ ಚಿತ್ರ


ಕಳೆದ ಸಾಲಿಗೆ ಹೋಲಿಸಿದ್ದರೆ ಈ ವರ್ಷ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕ್ಷೀಣಿಸಿದೆ. ಆದರೂ ಡಿಸೆಂಬರ್‌ವೇಳೆಗೆ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 2019-20ನೇ ಸಾಲಿನಲ್ಲಿ 32 ಪ್ರಕರಣಗಳು ಕಂಡು ಬಂದಿದ್ದವು. ಆದರೆ ಈ ವರ್ಷ ಆಗಸ್ಟ್‌ ಅಂತ್ಯದ ವೇಳೆಗೆ ಎಂಟು ಪ್ರಕರಣಗಳು ಕಂಡುಬಂದಿವೆ. ಸಮಾಧಾನಕರ ಸಂಗತಿಯೆಂದರೆ ಕಳೆದ ಸಾಲಿನಂತೆ ಈ ವರ್ಷ ಇದುವರೆಗೂ ಡೆಂಗ್ಯೂನಿಂದ ಯಾವುದೇ ಸಾವು ಸಂಭವಿಸಿಲ್ಲ.

ಮಳೆಯ ಜತೆಗೆ ಜ್ವರ ಭೀತಿ: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಮಳೆ ಸುರಿಯಲಾಭಿಸಿದ್ದು, ಸಾಂಕ್ರಾಮಿಕ ರೋಗಗಳು ಹೆಚ್ಚಳವಾಗುವ ಆತಂಕ ಸೃಷ್ಟಿಯಾಗಿದೆ. ಕೊರೊನಾ ಜೊತೆಗ ಡೆಂಘೆ, ಚಿಕೂನ್‌ ಗುನ್ಯಾ ಜ್ವರ ಭೀತಿ ಕಾಲಿಡಲಾರಂಭಿಸಿದ್ದು ಇದರ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಸಕಲ ರೀತಿಯಲ್ಲಿ ಸನ್ನದ್ಧವಾಗಿದ್ದು ಹಳ್ಳಿಗಳಲ್ಲಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕೊರೊನಾ ಮಧ್ಯೆ ಡೆಂಗೆ ಡಂಗುರ: ಸದ್ದಿಲ್ಲದೆ ಶುರುವಾಗಿದೆ ಅಪಾಯದ ಕರೆಗಂಟೆ

ಡೆಂಗ್ಯೂ ನಿಯಂತ್ರಣಕ್ಕೆ ಕ್ರಮ
ಎಂಟು ಪ್ರಕರಣಗಳು ದಾಖಲಾಗುತ್ತಿದ್ದಂತೆ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮಕೈಗೊಳ್ಳುವ ಕುರಿತಂತೆ ಜಿಲ್ಲಾಆರೋಗ್ಯಾಧಿಕಾರಿ ಡಾ. ಮಂಜುಳಾದೇವಿ ನೇತೃತ್ವದಲ್ಲಿ ಸಭೆ ನಡೆಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಕೊರೊನಾ ಕರ್ತವ್ಯದಲ್ಲಿ ನಿರತರಾಗಿರುವುದರಿಂದ ಗ್ರಾಮೀಣ ಭಾಗದ ಜನತೆಯಲ್ಲಿ ಅರಿವು ಮೂಡಿಸಲು ಆಶಾ ಕಾರ್ಯಕರ್ತರು ಹಾಗೂ ಗ್ರಾಪಂ ಮಟ್ಟದ ಸಿಬ್ಬಂದಿಗಳನ್ನು ಬಳಕೆ ಮಾಡಿಕೊಳ್ಳಲು ಚಿಂತನೆ ನಡೆಸಲಾಗಿದೆ.

ಸಿಬ್ಬಂದಿ ಮನೆಮನೆಗೆ ತೆರಳಿ ನೀರು ನಿಲ್ಲದಂತೆ ಎಚ್ಚರವಹಿಸುವಂತೆ ಹಾಗೂ ತೊಟ್ಟಿಗಳಲ್ಲಿ ಸಂಗ್ರಹಣೆ ಮಾಡುವ ನೀರನ್ನು ಎರಡು ದಿನಕ್ಕೊಮ್ಮೆ ಬದಲಾಯಿಸುವಂತೆ ಜನರಿಗೆ ತಿಳಿ ಹೇಳಬೇಕೆಂದು ಸೂಚಿಸಲಾಗಿದೆ.

ಜಾಗೃತಿ ಮೂಡಿಸುವ ಕಾರ್ಯ
ಪ್ರತಿ ಹಳ್ಳಿಗಳು, ಪಟ್ಟಣ ಪ್ರದೇಶದಲ್ಲಿ ಡೆಂಗ್ಯೂ ಕುರಿತು ಆಟೋಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆರಂಭವಾಗಿದೆ. ಮಾತ್ರವಲ್ಲದೆ ಕರಪತ್ರ ಹಂಚಿಕೆ, ಮನೆ ಮನೆಗೆ ತೆರಳಿ ಅರಿವು ಮೂಡಿಸುವ ಕಾರ್ಯ ನಡೆಯುತ್ತಿದೆ.
ಪ್ಲೇಟ್ಲೆಟ್‪‌ಗಳ ಸಂಖ್ಯೆ ಕಡಿಮೆಯಾಗಿದ್ದರೆ, ಈ ಆಹಾರಗಳನ್ನು ಸೇವಿಸಿ

ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದರೂ ಸಾರ್ವಜನಿಕರು ಆತಂಕ ಪಡಬಾರದು. ಶುಚಿತ್ವ ಕಾಪಾಡಿಕೊಳ್ಳಬೇಕು, ಮನೆ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಜ್ವರ, ಕೆಮ್ಮು ಲಕ್ಷಣ ಕಂಡು ಬಂದ ಕೂಡಲೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಳ್ಳಬೇಕು.
ಡಾ. ಮಂಜುಳಾದೇವಿ, ಜಿಲ್ಲಾಆರೋಗ್ಯಾಧಿಕಾರಿ

ಜಿಲ್ಲೆಯಲ್ಲಿ ಎಂಟು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಕಳೆದ ವರ್ಷ 32 ಪ್ರಕರಣಗಳು ಕಂಡು ಬಂದಿದ್ದವು. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಕೊರೊನಾ ನಡುವೆಯೂ ಡೆಂಗ್ಯೂ ಕುರಿತು ಹಳ್ಳಿಗಳಲ್ಲಿ ಪ್ರಚಾರ ನಡೆಸುವ ಮೂಲಕ ಅರಿವು ಮೂಡಿಸಲಾಗುತ್ತಿದೆ.
ಡಾ. ಧರ್ಮೇಂದ್ರ, ಜಿಲ್ಲಾ ಮಲೇರಿಯಾ ಅಧಿಕಾರಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ