ಆ್ಯಪ್ನಗರ

ಗ್ರಾಮಸಭೆಗೆ ಅಧಿಕಾರಿಗಳ ಗೈರುಹಾಜರಿ

ಸೋಂಪುರ ಹೋಬಳಿಯ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಕೃಷಿ ಅಧಿಕಾರಿ ಸುಶೀಲಮ್ಮ ಅವರ ಅಧ್ಯಕ್ಷ ತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಹಾಜರಿರಬೇಕಾದ ಅಧಿಕಾರಿಗಳ ಗೈರುಹಾಜರಿ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡುವಂತೆ ಗ್ರಾಮಸ್ಥರು ಒತ್ತಾಯಿಸಿದ ಘಟನೆ ನಡೆಯಿತು.

Vijaya Karnataka 21 Dec 2018, 5:00 am
ದಾಬಸಪೇಟೆ: ಸೋಂಪುರ ಹೋಬಳಿಯ ಹೊನ್ನೇನಹಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಕೃಷಿ ಅಧಿಕಾರಿ ಸುಶೀಲಮ್ಮ ಅವರ ಅಧ್ಯಕ್ಷ ತೆಯಲ್ಲಿ ನಡೆದ ಗ್ರಾಮಸಭೆಯಲ್ಲಿ ಹಾಜರಿರಬೇಕಾದ ಅಧಿಕಾರಿಗಳ ಗೈರುಹಾಜರಿ ಹಿನ್ನೆಲೆಯಲ್ಲಿ ಸಭೆಯನ್ನು ಮುಂದೂಡುವಂತೆ ಗ್ರಾಮಸ್ಥರು ಒತ್ತಾಯಿಸಿದ ಘಟನೆ ನಡೆಯಿತು.
Vijaya Karnataka Web officers absent at grama sabhe
ಗ್ರಾಮಸಭೆಗೆ ಅಧಿಕಾರಿಗಳ ಗೈರುಹಾಜರಿ


ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಲ್ಲಿ ಗ್ರಾಪಂ ಮಟ್ಟದಲ್ಲಿ ನಡೆಸುವ ಗ್ರಾಮಸಭೆಯೂ ಒಂದು ಈ ಸಭೆಯ ಮೂಲಕ ಸ್ಥಳೀಯ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಸಾರ್ವಜನಿಕವಾಗಿ ಚರ್ಚಿಸಿ ಎಲ್ಲರ ಗಮನಕ್ಕೆ ತರುವ ಮೂಲಕ ಸೂಕ್ತ ಪರಿಹಾರ ನೀಡಲೆಂದು ನಡೆಸುವ ಗ್ರಾಮಸಭೆಗಳು ಕಾಟಾಚಾರದ ಸಭೆಗಳಾಗಿ ಮಾರ್ಪಾಟ್ಟಾಗುತ್ತಿವೆ. ಇದರಿಂದ ಯಾವುದೇ ಪ್ರಯೋಜನ ಇಲ್ಲ. ಬದಲಿಗೆ ಸರಕಾರ ಹಣ ಪೋಲಾಗುತ್ತಿದೆ ಎಂದು ಜನ ದೂರುತ್ತಿದ್ದಾರೆ.

ಸಂವಿಧಾನ ಬದ್ಧವಾಗಿ ಗ್ರಾಮ ಪಂಚಾಯಿತಿಗೆ ಸಂಪೂರ್ಣ ಅಧಿಕಾರವನ್ನು ನೀಡಿದೆ. ಆದರೆ ಇಂದು ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯವೋ ಇಲ್ಲ ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯವೋ ಅಥವಾ ಜನರ ನಿರಾಸಕ್ತಿಯೋ ಏನೋ ಗ್ರಾಪಂ ಮಟ್ಟದಲ್ಲಿ ನಡೆಸುವ ಬಹುತೇಕ ಗ್ರಾಮಸಭೆಗಳು ಕಾಟಾಚಾರದ ಸಭೆಗಳಾಗುತ್ತಿವೆ. ಈ ಬಗ್ಗೆ ನಿರ್ದಿಷ್ಟವಾದ ಕ್ರಮ ಜರುಗಿಸುವ ಉಸ್ತುವಾರಿ ಅಧಿಕಾರಿಗಳಲ್ಲಿಯೂ ಬೇಜವಾಬ್ದಾರಿ ಎದ್ದು ಕಾಣುತ್ತಿದೆ ಎಂದು ಗ್ರಾಮದ ಲಿಂಗರಾಜು ಬೇಸರ ವ್ಯಕ್ತಪಡಿಸಿದರು.

ಗ್ರಾಮದಲ್ಲಿ ಮುಖ್ಯವಾಗಿ ರಸ್ತೆ ಸಮಸ್ಯೆ ಇದ್ದು ಕಾಂಕ್ರೀಟ್‌ ರಸ್ತೆ ನಿರ್ಮಿಸಿ ಜನರಿಗೆ ಅನುಕೂಲ ಮಾಡಿಕೊಡಲಾಗುವುದು. ಕುಡಿಯುವ ನೀರಿಗೆ ಆದ್ಯತೆ, ಬೀದಿ ದೀಪ ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡುವುದಾಗಿ ಅಧಿಕಾರಿಗಳು ಭರವಸೆ ನೀಡಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷ ತಿಮ್ಮಯ್ಯ ಮಾತನಾಡಿ, ಕುಡಿಯುವ ನೀರು, ರಸ್ತೆ, ಚರಂಡಿ ಅವ್ಯವಸ್ಥೆ, ಸೊಳ್ಳೆ, ನೊಣಗಳ ಕಾಟ, ಶಾಲೆ ಮತ್ತು ಅಂಗನವಾಡಿ ಕೇಂದ್ರಗಳ ಕಟ್ಟಡಗಳ ಸಮಸ್ಯೆಗಳು, ವಿದ್ಯುತ್‌ ಸಮಸ್ಯೆಗಳ ನಿವಾರಣೆ ಸಭೆಯಲ್ಲಿ ಚರ್ಚಿಸಿ ಶೀಘ್ರವಾಗಿ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಗ್ರಾಮಸಭೆಯಲ್ಲಿ ನೋಡಲ್‌ ಅಧಿಕಾರಿ ಸುಶೀಲಮ್ಮ, ಉಪಾಧ್ಯಕ್ಷ ನಾರಾಯಣ್‌, ಗ್ರಾಪಂ ಅಭಿವೃದ್ಧಿ ಅಧಿಕಾರಿ ಮಂಜುನಾಥ್‌, ಕಾರ್ಯದರ್ಶಿ ಹನುಮಂತರಾಜು, ಗ್ರಾಪಂ ಸದಸ್ಯರು ಭಾಗವಹಿಸಿದ್ದರು.

ಸಭೆಯಲ್ಲಿ ರೇಷ್ಮೆ, ಕೃಷಿ, ಮೀನುಗಾರಿಕೆ, ತೋಟಗಾರಿಕೆ, ಬೆಸ್ಕಾಂ, ಕಂದಾಯ, ಪಶುಸಂಗೋಪನೆ ಇಲಾಖೆಯ ಅಧಿಕಾರಿಗಳು ಮಾತ್ರ ಇಲಾಖೆಯಲ್ಲಿ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು. ಇನ್ನುಳಿದ 19 ಇಲಾಖೆಯ ಅಧಿಕಾರಿಗಳು ಗೈರುಹಾಜರಾಗಿದ್ದರು.

ಸಭೆಯಲ್ಲಿ ಗ್ರಾಮ ಅಧ್ಯಕ್ಷ ರು ಸದಸ್ಯರು ಮತ್ತು ಕೆಲವು ಮಂದಿ ಗ್ರಾಮಸ್ಥರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ