ದಾಬಸಪೇಟೆ: ಶಿವಗಂಗೆ ಗ್ರಾಮ ಪಂಚಾಯಿತಿ ವತಿಯಿಂದ ನಡೆದ ಮೊದಲ ಸುತ್ತಿನ ಗ್ರಾಮಸಭೆಯಲ್ಲಿ ಉಪಸ್ಥಿತರಿರಬೇಕಾದ ಇಲಾಖೆಯ ಅಧಿಕಾರಿಗಳ ಗೈರುಹಾಜರಿಯಿಂದ ಬೇಸತ್ತ ಜನ ತಮ್ಮ ಆಕ್ರೋಶ ವ್ಯಕ್ತಪಡಿಸಿ ಸಭೆಯನ್ನು ಮುಂದೂಡುವಂತೆ ಒತ್ತಾಯಿಸಿದರು.
ಸರಕಾರದ ಯೋಜನೆಗಳನ್ನು ತಿಳಿಸುವ ಮತ್ತು ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಸುವ ಜನಸಂಪರ್ಕ ಗ್ರಾಮಸಭೆಗಳು ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂದು ಕಾಟಾಚಾರದ ಸಭೆಗಳಾಗಿ ಮಾರ್ಪಟ್ಟಿವೆ ಎಂದು ಬಹುತೇಕ ಗ್ರಾಮಗಳ ಬೆರಳೆಣಿಕೆಯ ಜನ ದೂರಿದರು.
ಸಭೆ ನಡೆಸುವ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಮಾಡಿ ಸಭೆಗೆ ಹೆಚ್ಚಿನ ಜನರನ್ನು ಸೇರಿಸಲು ಪ್ರಚಾರ ಮಾಡಬೇಕು. ಆದರೆ ಇಂದು ಯಾವುದೇ ಸಭೆಗೂ ಜನರಿಗೆ ಮಾಹಿತಿ ನೀಡುತ್ತಿಲ್ಲ. ಕಾರಣ ತಿಳಿಯದಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಸಭೆಗೆ ಹೆಚ್ಚಿನ ಜನ ಬಾರದೇ ಇದ್ದರೆ ಮಧ್ಯವರ್ತಿಗಳಿಗೆ ಅವಕಾಶ ನೀಡಿದಂತಾಗುತ್ತದೆ. ಇದು ತಪ್ಪಿಸಲು ಸೂಕ್ತ ಕ್ರಮ ತೆಗೆದುಕೊಂಡು ನಡೆಸುವ ಗ್ರಾಮಸಭೆಗಳ ಅರ್ಥವಾತ್ತಾಗಲು ಮಾರ್ಗಸೂಚನೆ ಬೇಕೇ ಬೇಕು. ಸಭೆಯಲ್ಲಿ ಕನಿಷ್ಠ ಮೂನ್ನೂರು ಜನವಾದರೂ ಸೇರಬೇಕು ಮತ್ತು ಪ್ರತಿ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಇಲ್ಲದೇಹೋದ ಪಕ್ಷ ದಲ್ಲಿ ಸಭೆಯನ್ನು ನಡೆಸಬಾರದು. ಗೈರುಹಾಜರಾದ ಅಧಿಕಾರಿಗಳಿಗೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಿವಗಂಗೆ ಪಂಚಾಯಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳ ಜನಕ್ಕೆ ಮಾಹಿತಿ ನೀಡಿಲ್ಲ. ಆದರೆ ಸಭೆಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಾಲಾ ಶಿಕ್ಷ ಕರನ್ನು ಕರೆಸಿ ಸಭೆ ಮಾಡುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದು ಜನರ ಪ್ರಶ್ನೆ.
ಜನರ ಒತ್ತಾಯಕ್ಕೆ ಮಣಿದ ನೋಡಲ್ ಅಧಿಕಾರಿ ಸುಶೀಲಮ್ಮ ಈ ಸಭೆಯಲ್ಲಾಗಿರುವ ನೂನ್ಯತೆಗಳನ್ನು ಮುಂದಿನ ಸಭೆಯಲ್ಲಿ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಮತ್ತು ಸಭೆಗೆ ಬಾರದೇ ಇರುವ ಅಧಿಕಾರಿಗಳ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುತ್ತೇನೆ. ಸದ್ಯ ಈ ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಡಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಸಭೆ ನಡೆಯಿತು.
ಇಲಾಖಾವಾರು ಜನರಿಗೆ ಸಿಗುವ ಮಾಹಿತಿಗಳನ್ನು ತಿಳಿಸಿ ಈ ಸೌಲಭ್ಯಗಳನ್ನು ಪಡೆಯುವ ಅರ್ಹ ಫಲಾನುಭವಿಗಳು ಸಂಬಂಧಿಸಿದ ಇಲಾಖೆಯಿಂದ ಸವಲತ್ತುಗಳನ್ನು ಪಡೆಯಬಹುದು ಎಂದು ತಿಳಿಸಲಾಯಿತು.
ಸಭೆಯಲ್ಲಿ ರಸ್ತೆಗಳ ದುರಸ್ತಿ, ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಯಿತು.
ಸರಕಾರದ ಯೋಜನೆಗಳನ್ನು ತಿಳಿಸುವ ಮತ್ತು ಸವಲತ್ತುಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಡೆಸುವ ಜನಸಂಪರ್ಕ ಗ್ರಾಮಸಭೆಗಳು ಸಂಬಂಧಿಸಿದ ಅಧಿಕಾರಿಗಳ ನಿರ್ಲಕ್ಷ್ಯದಿಂದ ಇಂದು ಕಾಟಾಚಾರದ ಸಭೆಗಳಾಗಿ ಮಾರ್ಪಟ್ಟಿವೆ ಎಂದು ಬಹುತೇಕ ಗ್ರಾಮಗಳ ಬೆರಳೆಣಿಕೆಯ ಜನ ದೂರಿದರು.
ಸಭೆ ನಡೆಸುವ ಬಗ್ಗೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಮಾಡಿ ಸಭೆಗೆ ಹೆಚ್ಚಿನ ಜನರನ್ನು ಸೇರಿಸಲು ಪ್ರಚಾರ ಮಾಡಬೇಕು. ಆದರೆ ಇಂದು ಯಾವುದೇ ಸಭೆಗೂ ಜನರಿಗೆ ಮಾಹಿತಿ ನೀಡುತ್ತಿಲ್ಲ. ಕಾರಣ ತಿಳಿಯದಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ಸಭೆಗೆ ಹೆಚ್ಚಿನ ಜನ ಬಾರದೇ ಇದ್ದರೆ ಮಧ್ಯವರ್ತಿಗಳಿಗೆ ಅವಕಾಶ ನೀಡಿದಂತಾಗುತ್ತದೆ. ಇದು ತಪ್ಪಿಸಲು ಸೂಕ್ತ ಕ್ರಮ ತೆಗೆದುಕೊಂಡು ನಡೆಸುವ ಗ್ರಾಮಸಭೆಗಳ ಅರ್ಥವಾತ್ತಾಗಲು ಮಾರ್ಗಸೂಚನೆ ಬೇಕೇ ಬೇಕು. ಸಭೆಯಲ್ಲಿ ಕನಿಷ್ಠ ಮೂನ್ನೂರು ಜನವಾದರೂ ಸೇರಬೇಕು ಮತ್ತು ಪ್ರತಿ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕು. ಇಲ್ಲದೇಹೋದ ಪಕ್ಷ ದಲ್ಲಿ ಸಭೆಯನ್ನು ನಡೆಸಬಾರದು. ಗೈರುಹಾಜರಾದ ಅಧಿಕಾರಿಗಳಿಗೆ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.
ಶಿವಗಂಗೆ ಪಂಚಾಯಿತಿಯ ವ್ಯಾಪ್ತಿಗೆ ಬರುವ ಗ್ರಾಮಗಳ ಜನಕ್ಕೆ ಮಾಹಿತಿ ನೀಡಿಲ್ಲ. ಆದರೆ ಸಭೆಗೆ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಶಾಲಾ ಶಿಕ್ಷ ಕರನ್ನು ಕರೆಸಿ ಸಭೆ ಮಾಡುತ್ತಿದ್ದಾರೆ. ಇದು ಎಷ್ಟರ ಮಟ್ಟಿಗೆ ಸರಿ ಎಂಬುದು ಜನರ ಪ್ರಶ್ನೆ.
ಜನರ ಒತ್ತಾಯಕ್ಕೆ ಮಣಿದ ನೋಡಲ್ ಅಧಿಕಾರಿ ಸುಶೀಲಮ್ಮ ಈ ಸಭೆಯಲ್ಲಾಗಿರುವ ನೂನ್ಯತೆಗಳನ್ನು ಮುಂದಿನ ಸಭೆಯಲ್ಲಿ ಮರುಕಳಿಸದಂತೆ ನೋಡಿಕೊಳ್ಳಲಾಗುವುದು ಮತ್ತು ಸಭೆಗೆ ಬಾರದೇ ಇರುವ ಅಧಿಕಾರಿಗಳ ಬಗ್ಗೆ ಮೇಲಧಿಕಾರಿಗಳಿಗೆ ಮಾಹಿತಿ ನೀಡುತ್ತೇನೆ. ಸದ್ಯ ಈ ಕಾರ್ಯಕ್ರಮ ನಡೆಸಲು ಅನುವು ಮಾಡಿಕೊಡಿ ಎಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಸಭೆ ನಡೆಯಿತು.
ಇಲಾಖಾವಾರು ಜನರಿಗೆ ಸಿಗುವ ಮಾಹಿತಿಗಳನ್ನು ತಿಳಿಸಿ ಈ ಸೌಲಭ್ಯಗಳನ್ನು ಪಡೆಯುವ ಅರ್ಹ ಫಲಾನುಭವಿಗಳು ಸಂಬಂಧಿಸಿದ ಇಲಾಖೆಯಿಂದ ಸವಲತ್ತುಗಳನ್ನು ಪಡೆಯಬಹುದು ಎಂದು ತಿಳಿಸಲಾಯಿತು.
ಸಭೆಯಲ್ಲಿ ರಸ್ತೆಗಳ ದುರಸ್ತಿ, ಕುಡಿಯುವ ನೀರು, ಬೀದಿದೀಪ, ಸ್ವಚ್ಛತೆ ಬಗ್ಗೆ ಹೆಚ್ಚಿನ ಮಾಹಿತಿ ನೀಡಲಾಯಿತು.