ಆ್ಯಪ್ನಗರ

ಮುಂದಿನ ಚುನಾವಣೆಗೆ ಪಕ್ಷ ಸಂಘಟಿಸಿ: ಕೃಷ್ಣಭೈರೇಗೌಡ

ಮುಂದಿನ ಚುನಾವಣೆಗೆ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಬ್ಯಾಟರಾಯನಪುರ ಶಾಸಕ ಕೃಷ್ಣಭೈರೇಗೌಡ ಹೇಳಿದ್ದಾರೆ. ಗ್ರಾಪಂ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳನ್ನು ಅಭಿನಂದಿಸಿ ಈ ಮಾತುಗಳನ್ನು ಆಡಿದ್ದಾರೆ.

Vijaya Karnataka Web 11 Jan 2021, 4:05 pm
ದೇವನಹಳ್ಳಿ: ಕುಂದಾಣ ಗ್ರಾಪಂ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡಿರುವುದು ಅಭಿನಂದನಾರ್ಹ. ಮುಂದಿನ ಚುನಾವಣೆಗೆ ಪಕ್ಷವನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದು ಬ್ಯಾಟರಾಯನಪುರ ಶಾಸಕ ಹಾಗೂ ಮಾಜಿ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
Vijaya Karnataka Web Krishna Byre Gowda


ಬೆಂಗಳೂರಿನ ಕೊಡಿಗೇಹಳ್ಳಿ ನಿವಾಸದಲ್ಲಿ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಪಂ ನೂತನ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳನ್ನು ಅಭಿನಂದಿಸಿ, ಅವರು ಮಾತನಾಡಿದರು. ಕುಂದಾಣ ಹೋಬಳಿ ಭಾಗದಲ್ಲಿ ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ದ್ಯಾವರಹಳ್ಳಿ ವಿ ಶಾಂತ ಕುಮಾರ್‌ ಶ್ರಮಿಸಿದ್ದಾರೆ. ಇದೇ ರೀತಿ ತಾಲೂಕಿನಲ್ಲಿ ಶ್ರಮವಹಿಸಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಹೆಚ್ಚಿನ ಸಹಕಾರ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ತಾಪಂ, ಜಿಪಂ ಮತ್ತು ವಿಧಾನಸಭಾ ಚುನಾವಣೆ ಗಳಲ್ಲೂ ಕಾಂಗ್ರೆಸ್‌ ಪಕ್ಷದ ಭಾವುಟ ಹಾರಿಸಲು ಎಲ್ಲರೂ ಒಮ್ಮತದಿಂದ ಶ್ರಮಿಸಬೇಕು. ಗೆದ್ದಿರುವ ಅಭ್ಯರ್ಥಿಗಳು ಆಯಾ ಕ್ಷೇತ್ರಗಳಲ್ಲಿ ಜನರೊಂದಿಗೆ ಬೆರೆತು ಹೆಚ್ಚೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಿ, ಮೆಚ್ಚುಗೆಗೆ ಪಾತ್ರರಾಗಬೇಕು ಎಂದು ಸಲಹೆ ಮಾಡಿದರು.

ಬ್ಲಾಕ್‌ ಕಾಂಗ್ರೆಸ್‌ ಉಪಾಧ್ಯಕ್ಷ ವಿ. ಶಾಂತ ಕುಮಾರ್‌ ಮಾತನಾಡಿ, ಗ್ರಾಪಂ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಿರುವುದು ಹೆಚ್ಚು ಸಂತಸ ತಂದಿದೆ. ಕುಂದಾಣ ಗ್ರಾಪಂಯಲ್ಲಿ 9 ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳು ಗೆದ್ದಿದ್ದಾರೆ. ಮುಂದಿನ ಚುನಾವಣೆಗಳಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳ ಶ್ರಮ ವಹಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಶಾಸಕ ಕೃಷ್ಣಭೈರೇ ಗೌಡ ಸಮ್ಮುಖದಲ್ಲಿ ಕುಂದಾಣ ಗ್ರಾಪಂ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿಗಳಾದ ನಾರಾಯಣಸ್ವಾಮಿ, ಕೆ.ವಿ. ಸ್ವಾಮಿ, ವಿಜಯ, ಬಿ.ವಿ. ಸ್ವಾಮಿ, ಡಿ.ಆರ್‌. ಮಾಲಾ, ದೇವ ರಾಜ್‌, ರಘು, ಮುನಿಯಪ್ಪ, ವೀಣಾ ರಾಣಿ ನಾವೀನ್‌, ನೇತ್ರ ನಾಗೇಶ್‌, ಪ್ರವೀಣ್‌ ಕುಮಾರ್‌ ಅವರನ್ನು ಅಭಿನಂದಿಸಲಾಯಿತು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಹೆಚ್ಚಿದ ಹಕ್ಕಿ ಜ್ವರ ಭೀತಿ: ಕುಕ್ಕುಟೋದ್ಯಮಕ್ಕೆ ಬಂತು ಕುತ್ತು!

ಈ ವೇಳೆ ಕೆಪಿಸಿಸಿ ರಾಜ್ಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಸಿ. ಜಗನ್ನಾಥ್‌, ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಸಿ. ಮಂಜುನಾಥ್‌, ಬ್ಲಾಕ್‌ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ಸಿ. ಪ್ರಸನ್ನಕುಮಾರ್‌, ಚಿಕ್ಕ ಬಳ್ಳಾಪುರ ಲೋಕಸಭಾ ಕ್ಷೇತ್ರ ಯುವ ಅಧ್ಯಕ್ಷ ಮಾರುತಿ, ಎಸ್‌.ಕೆ. ಆನಂದ್‌, ಡಿ.ಎಂ. ದೇವ ರಾಜ್‌, ಮುಖಂಡರಾದ ಛಲಪತಿ, ಸುಬ್ರ ಮಣಿ, ಮುನಿಚೌಡಪ್ಪ, ಚಂದ್ರು, ಕಾಂಗ್ರೆಸ್‌ ಮುಖಂಡರು, ಕಾರ್ಯಕರ್ತರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ