ಹೊಸಕೋಟೆ: ಸರಕಾರಿ ಶಾಲೆಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಸಂಸ್ಥೆ ಆದ್ಯತೆ ನೀಡುತ್ತಿದೆ ಎಂದು ಬೆಂಗಳೂರು ಇಂದಿರಾನಗರ ರೋಟರಿ ಸಂಸ್ಥೆಯ ಅಧ್ಯಕ್ಷ ಜಗದೀಶ್ ಹೇಳಿದರು.
ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಉತ್ತಮ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳೆದ 3 ವರ್ಷಗಳಿಂದ ಸಂಸ್ಥೆಯು ಶಾಲೆಗೆ ಸುಸಜ್ಜಿತವಾದ ಶೌಚಾಲಯ ನಿರ್ಮಿಸಿಕೊಟ್ಟಿದ್ದು ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಹ ಕಲ್ಪಿಸಿದ್ದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅನುವಾಗುವಂತೆ ಕೈತೊಳೆಯಲು ಅಗತ್ಯವಾದ ಸಾಮಗ್ರಿಗಳನ್ನು ನೀಡಲಾಗಿದೆ ಎಂದರು.
ಶಾಲೆಯನ್ನು ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿಯಷ್ಟೇ ಅಲ್ಲದೆ ಸೌಲಭ್ಯಗಳನ್ನು ಒಳಗೊಂಡಿರುವ ಶಾಲೆಗಳಲ್ಲಿ ಮಾದರಿಯನ್ನಾಗಿಸುವಲ್ಲಿ ಯಶಸ್ವಿಯಾಗಿದ್ದು ರಾಜ್ಯದಲ್ಲಿಯೇ ಅತ್ಯುತ್ತಮ ಶಾಲೆಯನ್ನಾಗಿಸಲು ಗುರಿ ಹೊಂದಲಾಗಿದೆ. ಸಂಸ್ಥೆಯು ಒದಗಿಸಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇದರಿಂದಾಗಿ ತೀವ್ರ ಸ್ಪರ್ಧೆಯ ನಡುವೆಯೂ ಶಾಲೆಯ ದಾಖಲಾತಿಯಲ್ಲೂ ಸಹ ಏರಿಕೆಯಾಗುತ್ತಿರುವುದೇ ಶಾಲೆಯ ಬಗ್ಗೆ ಸಮುದಾಯದಲ್ಲಿರುವ ಅಭಿಪ್ರಾಯಕ್ಕೆ ನಿದರ್ಶನವಾಗಿದೆ ಎಂದರು.
ನಿರ್ದೇಶಕ ಶ್ಯಾಮ್ ಅಗರವಾಲ್ ಮಾತನಾಡಿ, ರೋಟರಿ ಸಂಸ್ಥೆಯೊಂದಿಗೆ ಕೆಲವು ಖಾಸಗಿ ಕಾರ್ಖಾನೆಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ, ದಾನಿಗಳ ಸಹಕಾರದೊಂದಿಗೆ ಶಾಲೆಯಲ್ಲಿ ಇ-ಶಿಕ್ಷಣ ವ್ಯವಸ್ಥೆ ಮಾಡಲಾಗಿದ್ದು ಶೀಘ್ರದಲ್ಲಿಯೇ 20 ಕಂಪ್ಯೂಟರ್ಗಳನ್ನು ಒಳಗೊಂಡ ಪ್ರಯೋಗಾಲಯವನ್ನು ಸ್ಥಾಪಿಸಲು ಯೋಜಿಸಲಾಗಿದೆ. ನಾನಾ ಕೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಇದಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದರು.
ರೋಟರಿ ಸಂಸ್ಥೆಯ ನಿರ್ದೇಶಕರಾದ ಆರ್.ವಿ.ಸುಬ್ರಹ್ಮಣ್ಯಂ, ಒ.ಪಿ.ಖನ್ನಾ, ಅಮರನಾಥ್ ಟಂಡನ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಎಚ್.ವಿ.ರಾಮಚಂದ್ರ, ದೈಹಿಕ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಕೆ.ಜಿ.ರಾಘವನ್ ಇನ್ನಿತರರು ಭಾಗವಹಿಸಿದ್ದರು.
ಪ್ರಶಸ್ತಿ ವಿಜೇತರು: ಗಂಗಾ, ಮಾನಸ, ಭಾರ್ಗವಿ (ಉತ್ತಮ ವಿದ್ಯಾರ್ಥಿ), ಕೀರ್ತಿ (ಉತ್ತಮ ತಂಡ ನಾಯಕಿ), ಶಿಲ್ಪಿಡೇ, ಲಾವಣ್ಯ (ಕ್ರೀಡೆ), ಲಕ್ಷ್ಮೇಶ್ರೀಗೌರಿ (ಸಾಂಸ್ಕೃತಿಕ), ಎ.ಅನಂತಪದ್ಮಪ್ರಿಯ, ನಾಗರತ್ನ (ಉತ್ತಮ ಶಿಕ್ಷಕಿಯರು).
ಪಟ್ಟಣದ ಸರಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಉತ್ತಮ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಳೆದ 3 ವರ್ಷಗಳಿಂದ ಸಂಸ್ಥೆಯು ಶಾಲೆಗೆ ಸುಸಜ್ಜಿತವಾದ ಶೌಚಾಲಯ ನಿರ್ಮಿಸಿಕೊಟ್ಟಿದ್ದು ವಿಜ್ಞಾನ ಪ್ರಯೋಗಾಲಯ, ಗ್ರಂಥಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಸಹ ಕಲ್ಪಿಸಿದ್ದು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಅನುವಾಗುವಂತೆ ಕೈತೊಳೆಯಲು ಅಗತ್ಯವಾದ ಸಾಮಗ್ರಿಗಳನ್ನು ನೀಡಲಾಗಿದೆ ಎಂದರು.
ಶಾಲೆಯನ್ನು ಜಿಲ್ಲೆಯಲ್ಲಿಯೇ ಶೈಕ್ಷಣಿಕವಾಗಿಯಷ್ಟೇ ಅಲ್ಲದೆ ಸೌಲಭ್ಯಗಳನ್ನು ಒಳಗೊಂಡಿರುವ ಶಾಲೆಗಳಲ್ಲಿ ಮಾದರಿಯನ್ನಾಗಿಸುವಲ್ಲಿ ಯಶಸ್ವಿಯಾಗಿದ್ದು ರಾಜ್ಯದಲ್ಲಿಯೇ ಅತ್ಯುತ್ತಮ ಶಾಲೆಯನ್ನಾಗಿಸಲು ಗುರಿ ಹೊಂದಲಾಗಿದೆ. ಸಂಸ್ಥೆಯು ಒದಗಿಸಿರುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಶೈಕ್ಷಣಿಕ, ಕ್ರೀಡೆ, ಸಾಂಸ್ಕೃತಿಕ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಇದರಿಂದಾಗಿ ತೀವ್ರ ಸ್ಪರ್ಧೆಯ ನಡುವೆಯೂ ಶಾಲೆಯ ದಾಖಲಾತಿಯಲ್ಲೂ ಸಹ ಏರಿಕೆಯಾಗುತ್ತಿರುವುದೇ ಶಾಲೆಯ ಬಗ್ಗೆ ಸಮುದಾಯದಲ್ಲಿರುವ ಅಭಿಪ್ರಾಯಕ್ಕೆ ನಿದರ್ಶನವಾಗಿದೆ ಎಂದರು.
ನಿರ್ದೇಶಕ ಶ್ಯಾಮ್ ಅಗರವಾಲ್ ಮಾತನಾಡಿ, ರೋಟರಿ ಸಂಸ್ಥೆಯೊಂದಿಗೆ ಕೆಲವು ಖಾಸಗಿ ಕಾರ್ಖಾನೆಗಳ ಸಾಮಾಜಿಕ ಹೊಣೆಗಾರಿಕೆ ಯೋಜನೆಯಡಿ, ದಾನಿಗಳ ಸಹಕಾರದೊಂದಿಗೆ ಶಾಲೆಯಲ್ಲಿ ಇ-ಶಿಕ್ಷಣ ವ್ಯವಸ್ಥೆ ಮಾಡಲಾಗಿದ್ದು ಶೀಘ್ರದಲ್ಲಿಯೇ 20 ಕಂಪ್ಯೂಟರ್ಗಳನ್ನು ಒಳಗೊಂಡ ಪ್ರಯೋಗಾಲಯವನ್ನು ಸ್ಥಾಪಿಸಲು ಯೋಜಿಸಲಾಗಿದೆ. ನಾನಾ ಕೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು ಹಾಗೂ ಇದಕ್ಕಾಗಿ ಶ್ರಮಿಸುತ್ತಿರುವ ಶಿಕ್ಷಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ ಎಂದರು.
ರೋಟರಿ ಸಂಸ್ಥೆಯ ನಿರ್ದೇಶಕರಾದ ಆರ್.ವಿ.ಸುಬ್ರಹ್ಮಣ್ಯಂ, ಒ.ಪಿ.ಖನ್ನಾ, ಅಮರನಾಥ್ ಟಂಡನ್, ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಎಚ್.ವಿ.ರಾಮಚಂದ್ರ, ದೈಹಿಕ ಶಿಕ್ಷಣ ಸಂಪನ್ಮೂಲ ವ್ಯಕ್ತಿ ಕೆ.ಜಿ.ರಾಘವನ್ ಇನ್ನಿತರರು ಭಾಗವಹಿಸಿದ್ದರು.
ಪ್ರಶಸ್ತಿ ವಿಜೇತರು: ಗಂಗಾ, ಮಾನಸ, ಭಾರ್ಗವಿ (ಉತ್ತಮ ವಿದ್ಯಾರ್ಥಿ), ಕೀರ್ತಿ (ಉತ್ತಮ ತಂಡ ನಾಯಕಿ), ಶಿಲ್ಪಿಡೇ, ಲಾವಣ್ಯ (ಕ್ರೀಡೆ), ಲಕ್ಷ್ಮೇಶ್ರೀಗೌರಿ (ಸಾಂಸ್ಕೃತಿಕ), ಎ.ಅನಂತಪದ್ಮಪ್ರಿಯ, ನಾಗರತ್ನ (ಉತ್ತಮ ಶಿಕ್ಷಕಿಯರು).