ಆ್ಯಪ್ನಗರ

ಖಾಸಗಿ ಬಸ್ - ಆಟೋ ಡಿಕ್ಕಿ, ನಾಲ್ವರ ಸಾವು

ಬೆಳಗ್ಗೆ 10-40 ರ ಸಮಯದಲ್ಲಿ ಈ ಅವಘಡ ನಡೆದಿದ್ದು ಮೃತರನ್ನು ಹೊಸಕೋಟೆ ತಾಲೂಕು, ಸೂಲಿಬೆಲೆ ಬಳಿಯ ಗಿಡ್ಡಪ್ಪನಹಳ್ಳಿಯವರು ಎನ್ನಲಾಗಿದೆ.

Vijaya Karnataka Web 17 Jun 2019, 1:34 pm
ಬೆಂಗಳೂರು ಗ್ರಾಮಾಂತರ: ಆಧಾರ್ ಕಾರ್ಡ್ ನೋಂದಣಿಗೆಂದು ತೆರಳುತ್ತಿದ್ದ ವೇಳೆ ಆಟೋ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ
Vijaya Karnataka Web Accident 123.

ದೇವನಹಳ್ಳಿ ತಾಲ್ಲೂಕು ವಿಶ್ವನಾಥಪುರ ಬಳಿ ನಡೆದಿದೆ.

ಬೆಳಗ್ಗೆ 10-40 ರ ಸಮಯದಲ್ಲಿ ಈ ಅವಘಡ ನಡೆದಿದ್ದು ಮೃತರನ್ನು ಹೊಸಕೋಟೆ ತಾಲೂಕು, ಸೂಲಿಬೆಲೆ ಬಳಿಯ ಗಿಡ್ಡಪ್ಪನಹಳ್ಳಿಯವರು ಎನ್ನಲಾಗಿದೆ.

ಜಿಲ್ಲಾಡಳಿತ ಭವನದಲ್ಲಿ ಆಧಾರ್ ಕಾರ್ಡ್ ನೋಂದಣಿ ಮಾಡಿಸಲು ಸೂಲಿಬೆಲೆಯಿಂದ ಹದಿನಾಲ್ಕು ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಗಾಯಗೊಂಡ ಮೂವರಿಗೆ ದೇವನಹಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಬ್ಬರು ಮಕ್ಕಳನ್ನು ಬೆಂಗಳೂರಿನ ನಿಮಾನ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಅಪಘಾತದ ವಿಷಯ ತಿಳಿದ ತಕ್ಷಣ ಮೃತರ ಕುಟುಂಬಸ್ಥರು ಅವರ ಸಂಬಂಧಿಕರು ಆಸ್ಪತ್ರೆಗೆ ಧಾವಿಸಿದ್ದಾರೆ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಸ್ಥಳಕ್ಕೆ ಡಿವೈಎಸ್ಪಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ