ಆ್ಯಪ್ನಗರ

ಶಿವಗಂಗೆ ಬೆಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆ

ಶಿವಗಂಗೆ ಬೆಟ್ಟದ ಮೇಲಿಂದ ವ್ಯಕ್ತಿಯೊಬ್ಬ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಿಜಾಪುರ ಮೂಲದ ಸುಪ್ರಿತ್‌ಕುಮಾರ್‌ ಬಿರಾದಾರ್‌ (35) ಎಂದು ಗುರುತಿಸಲಾಗಿದೆ.

Vijaya Karnataka 26 Mar 2019, 5:00 am
ದಾಬಸಪೇಟೆ: ಶಿವಗಂಗೆ ಬೆಟ್ಟದ ಮೇಲಿಂದ ವ್ಯಕ್ತಿಯೊಬ್ಬ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಬಿಜಾಪುರ ಮೂಲದ ಸುಪ್ರಿತ್‌ಕುಮಾರ್‌ ಬಿರಾದಾರ್‌ (35) ಎಂದು ಗುರುತಿಸಲಾಗಿದೆ.
Vijaya Karnataka Web shivagange fell from the top of the hill and committed suicide
ಶಿವಗಂಗೆ ಬೆಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆ


ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದ ಈತನಿಗೆ ಮದುವೆಯಾಗಿದ್ದು ಬೆಂಗಳೂರಿನ ಜೆಪಿ ನಗರದಲ್ಲಿ ಪತ್ನಿ ಹಾಗೂ ಮಗುವಿನ ಜತೆ ವಾಸಿಸುತ್ತಿದ್ದನು ಎಂದು ತಿಳಿದು ಬಂದಿದೆ.

ಕುಟುಂಬ ಕಲಹದಿಂದ ಬೇಸತ್ತಿದ್ದ ಹಾಗೂ ಸಾಲ ತೀರಿಸಲಾಗದೆ ಬೆಟ್ಟದ ಮೇಲಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಈತನು ಬೆಂಗಳೂರಿನಿಂದ ದ್ವಿಚಕ್ರ ವಾಹನದಲ್ಲಿ ಶಿವಗಂಗೆಯ ಬೆಟ್ಟಕ್ಕೆ ಬಂದು ಬೆಟ್ಟದ ಬುಡದಲ್ಲಿ ತನ್ನ ದ್ವಿಚಕ್ರ ವಾಹನವನ್ನು ನಿಲ್ಲಿಸಿದ್ದಾನೆ. ಮಾರ್ಚ್‌ 24ರ ರಾತ್ರಿ ಅಥವಾ ಮಾರ್ಚ್‌ 25ರ ಬೆಳಗಿನ ಜಾವ ಶಿವಗಂಗೆ ಬೆಟ್ಟ ಹತ್ತಿರಬಹುದೆಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆ 9 ಗಂಟೆಗೆ ಬೆಟ್ಟಕ್ಕೆ ವ್ಯಾಪಾರ ಮಾಡಲು ಹೋದ ವ್ಯಾಪಾರಸ್ಥರು ಹಾಗೂ ಪ್ರವಾಸಿಗರು ಬೆಟ್ಟದ ಕಂಬಿಯ ಪಕ್ಕ ಶವ ಬಿದ್ದಿರುವುದನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ದಾಬಸಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ದಾಬಸಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ಘಟನೆಗೆ ಸಂಬಂದಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಮುಂದಾಗಿದ್ದಾರೆ.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ