ಆ್ಯಪ್ನಗರ

ಎಸ್ಪಿ ರವಿ ಡಿ. ಚನ್ನಣ್ಣವರ್‌ ನಂದಗುಡಿಗೆ ಠಾಣೆಗೆ ಭೇಟಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ರವಿ ಡಿ. ಚನ್ನಣ್ಣವರ್‌ ನಂದಗುಡಿ ಪೊಲೀಸ್‌ ಠಾಣೆಗೆ ಮೊದಲ ಬಾರಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.

Vijaya Karnataka 14 Aug 2019, 5:00 am
ನಂದಗುಡಿ : ಬೆಂಗಳೂರು ಗ್ರಾಮಾಂತರ ಜಿಲ್ಲಾ ನೂತನ ಎಸ್ಪಿಯಾಗಿ ಅಧಿಕಾರ ಸ್ವೀಕರಿಸಿದ ರವಿ ಡಿ. ಚನ್ನಣ್ಣವರ್‌ ನಂದಗುಡಿ ಪೊಲೀಸ್‌ ಠಾಣೆಗೆ ಮೊದಲ ಬಾರಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು.
Vijaya Karnataka Web sp ravi d channannavar visit to nandagudy station
ಎಸ್ಪಿ ರವಿ ಡಿ. ಚನ್ನಣ್ಣವರ್‌ ನಂದಗುಡಿಗೆ ಠಾಣೆಗೆ ಭೇಟಿ


ನಂದಗುಡಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಅಪರಾಧ ಪ್ರಕರಣಗಳ ಬಗ್ಗೆ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು. ಕಾನೂನು ಸುವ್ಯವಸ್ಥೆ ಕಾಪಾಡಿ ಅಪರಾಧಿ ಚಟುವಟಿಕೆಗೆ ಕಡಿವಾಣ ಹಾಕಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಪೊಲೀಸರಿಗೆ ಅರಿವು ಮೂಡಿಸಿದರು.

ಠಾಣಾ ವ್ಯಾಪ್ತಿಗೆ ಒಳಪಡುವ ಬೈಲನರಸಾಪುರ ಹಾಗೂ ಶಿವನಾಪುರ ಸುತ್ತ ಮುತ್ತಲ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ನಾಗರೀಕರೊಂದಿಗೆ ಕುಂದು ಕೊರತೆಗಳನ್ನು ಆಲಿಸಿದರು.

ಇದೇ ಸಂದರ್ಭದಲ್ಲಿ ಪೊಲೀಸ್‌ ಉಪಾಧೀಕ್ಷ ಕ ಎನ್‌.ಬಿ. ಸಕ್ರಿ, ವೃತ್ತ ನಿರೀಕ್ಷ ಕ ಎಸ್‌.ಆರ್‌. ಮಂಜುನಾಥ್‌, ಪಿಎಸ್‌ಐ ಲಕ್ಷ್ಮೀನಾರಾಯಣ್‌ ಹಾಗೂ ಪೊಲೀಸ್‌ ಸಿಬ್ಬಂದಿ ವರ್ಗದವರು ಪೊಲೀಸ್‌ ಗೌರವ ವಂದನೆ ಸಲ್ಲಿಸಿ ಸ್ವಾಗತಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ