ಆ್ಯಪ್ನಗರ

ಹಲಸಿನ ಹಣ್ಣು ಕೀಳಲು ಹೋಗಿ ಸಾವು

ದಾಬಸ್‌ಪೇಟೆ:ಹಲಸಿನ ಮರದಲ್ಲಿ ಹಣ್ಣು ಕೀಳಲು ಹೋಗಿದ್ದ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ರಾಯರಪಾಳ್ಯದ ಗ್ರಾಮದ ಸಿದ್ದಗಂಗಯ್ಯ (46) ಮೃತ.

Vijaya Karnataka 29 Jun 2019, 4:06 pm
ದಾಬಸ್‌ಪೇಟೆ:ಹಲಸಿನ ಮರದಲ್ಲಿ ಹಣ್ಣು ಕೀಳಲು ಹೋಗಿದ್ದ ವ್ಯಕ್ತಿಯೊಬ್ಬ ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ನಡೆದಿದೆ. ರಾಯರಪಾಳ್ಯದ ಗ್ರಾಮದ ಸಿದ್ದಗಂಗಯ್ಯ (46) ಮೃತ.
Vijaya Karnataka Web the fruit of the jackfruit goes to ripen and die
ಹಲಸಿನ ಹಣ್ಣು ಕೀಳಲು ಹೋಗಿ ಸಾವು


ತನ್ನ ಜಮೀನಿನಲ್ಲಿದ್ದ ಹಲಸಿನ ಮರ ಹತ್ತುವಾಗ ಆಯತಪ್ಪಿ ಜಾರಿ ಬಿದ್ದಿದ್ದಾನೆ. ಪರಿಣಾಮ ಎಡಭುಜ ಹಾಗೂ ಎದೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದೆ. ಗಾಯಗೊಂಡ ವ್ಯಕ್ತಿಯನ್ನು ಸ್ಥಳಿಯ ದಾಬಸ್‌ಪೇಟೆ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ. ಅಲ್ಲಿ ಆತನಿಗೆ ಪ್ರಥಮಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನೆಲಮಂಗಲ ಸರಕಾರಿ ಆಸ್ಪತ್ರೆಗೆ ದಾಖಲಿಸಲು ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಈತ ಸಿದ್ದರಬೆಟ್ಟದಲ್ಲಿ ಚಿಲ್ಲರೆ ಅಂಗಡಿ ಹಾಗೂ ರಾಷ್ಟ್ರೀಯ ಹೆದ್ದಾರಿ-4 ರಸ್ತೆ ಪಕ್ಕ ಹಲಸಿನ ಹಣ್ಣು ಇಟ್ಟುಕೊಂಡು ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎನ್ನಲಾಗಿದ್ದು. ವ್ಯಾಪಾರ ಮಾಡಲು ಹಲಸಿನ ಹಣ್ಣನ್ನು ಕೀಳಲು ಹೋಗಿದ್ದ. ಈತನಿಗೆ ಹೆಂಡತಿ ಹಾಗೂ ಇಬ್ಬರು ಗಂಡು ಮಕ್ಕಳಿದ್ದಾರೆ. ಮೃತ ವ್ಯಕ್ತಿಯ ಶವವನ್ನು ನೆಲಮಂಗಲ ಸರಕಾರಿಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಬಂದಿಕರಿಗೆ ಹಸ್ತಾಂತರಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ