ಆ್ಯಪ್ನಗರ

ಬೈಕ್‌-ಕ್ಯಾಂಟರ್‌ ಮುಖಾಮುಖಿ ಡಿಕ್ಕಿ: ಮೂವರ ಸಾವು

ತಾಲೂಕಿನ ಸೌಖ್ಯ ರಸ್ತೆಯಲ್ಲಿ ಬೈಕ್‌ ಹಾಗೂ ಕ್ಯಾಂಟರ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟಿದ್ದಾರೆ.

Vijaya Karnataka 25 Oct 2018, 3:25 pm
ಹೊಸಕೋಟೆ: ತಾಲೂಕಿನ ಸೌಖ್ಯ ರಸ್ತೆಯಲ್ಲಿ ಬೈಕ್‌ ಹಾಗೂ ಕ್ಯಾಂಟರ್‌ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮವಾಗಿ ಮೂವರು ಮೃತಪಟ್ಟಿದ್ದಾರೆ.
Vijaya Karnataka Web three dead in bike canter accident
ಬೈಕ್‌-ಕ್ಯಾಂಟರ್‌ ಮುಖಾಮುಖಿ ಡಿಕ್ಕಿ: ಮೂವರ ಸಾವು


ಹರಿಯಾಣದ ಫರೀದಾಬಾದ್‌ನ ಲಕ್ಕಿ (26), ಜಾರ್ಖಂಡ್‌ನ ಸಿಂಗಭೂಮ್‌ನ ಶತ್ರುಜ್ಞ (30), ಬಿಹಾರದ ಬಸಂತ್‌ಪುರದ ಸುಧೀರ್‌ಕುಮಾರ್‌ (24) ಮೃತರು.

ಮೃತರು ಸೌಖ್ಯ ರಸ್ತೆಯಲ್ಲಿರುವ ಮೈಂತ್ರಾ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು ಮಂಗಳವಾರ ರಾತ್ರಿ ಪಾಳಿ ಮುಗಿಸಿಕೊಂಡು ನಾಲ್ವರು ಒಂದೇ ಬೈಕಿನಲ್ಲಿ ತಿರುಮಲಶೆಟ್ಟಿಹಳ್ಳಿಯಲ್ಲಿನ ಮನೆಗೆ ಹಿಂದಿರುಗುತ್ತಿದ್ದರು. ಎದುರುಗಡೆಯಿಂದ ಕ್ಯಾಂಟರ್‌ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸಹ ಸ್ಥಳದಲ್ಲಿಯೇ ಮೃತಪಟ್ಟಿದ್ದು ಮತ್ತೊಬ್ಬ ವ್ಯಕ್ತಿ ಶಿವಂ ಸಿಂಗ್‌ (21) ತೀವ್ರವಾಗಿ ಗಾಯಗೊಂಡಿದ್ದು ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ಯಾಂಟರ್‌ ಚಾಲಕ ವಾಹನವನ್ನು ಸ್ಥಳದಲ್ಲಿಯೇ ಬಿಟ್ಟು ಪರಾರಿಯಾಗಿದ್ದು ಮೈಂತ್ರಾ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್‌ ಕಪಿಲ್‌ ನೀಡಿರುವ ದೂರಿನನ್ವಯ ತಿರುಮಲಶೆಟ್ಟಿಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ