ಆ್ಯಪ್ನಗರ

ಅಂಬರೀಷ್‌, ಜಾಫರ್‌ ಷರೀಫ್‌ ಅವರಿಗೆ ಕಾಂಗ್ರೆಸ್‌ ಕಚೇರಿಯಲ್ಲಿ ಶ್ರದ್ಧಾಂಜಲಿ

ಭಾನುವಾರ ನಮ್ಮನ್ನಗಲಿದ ಕೇಂದ್ರದ ಮಾಜಿ ಸಚಿವ ಜಾಫರ್‌ ಷರೀಫ್‌ ಅವರು ರೈಲ್ವೆ ಸಚಿವರಾಗಿದ್ದಾಗ ಮಾಡಿದ ಅಭಿವೃದ್ಧಿಗಳು ಸ್ಮರಣೀಯ. ಇಡೀ ದೇಶದಲ್ಲಿ ಬ್ರಾಡ್‌ಗೇಜ್‌ಗೆ ಪರಿವರ್ತನೆ ಮಾಡಿದ್ದು ರೈಲ್ವೆ ಇಲಾಖೆಯಲ್ಲಿ ಗಮನಾರ್ಹ ಸಾಧನೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.

Vijaya Karnataka 27 Nov 2018, 3:11 pm
ದೊಡ್ಡಬಳ್ಳಾಪುರ: ಭಾನುವಾರ ನಮ್ಮನ್ನಗಲಿದ ಕೇಂದ್ರದ ಮಾಜಿ ಸಚಿವ ಜಾಫರ್‌ ಷರೀಫ್‌ ಅವರು ರೈಲ್ವೆ ಸಚಿವರಾಗಿದ್ದಾಗ ಮಾಡಿದ ಅಭಿವೃದ್ಧಿಗಳು ಸ್ಮರಣೀಯ. ಇಡೀ ದೇಶದಲ್ಲಿ ಬ್ರಾಡ್‌ಗೇಜ್‌ಗೆ ಪರಿವರ್ತನೆ ಮಾಡಿದ್ದು ರೈಲ್ವೆ ಇಲಾಖೆಯಲ್ಲಿ ಗಮನಾರ್ಹ ಸಾಧನೆ ಎಂದು ಶಾಸಕ ಟಿ.ವೆಂಕಟರಮಣಯ್ಯ ತಿಳಿಸಿದರು.
Vijaya Karnataka Web tribute to ambareesh jafar sharif in congress office
ಅಂಬರೀಷ್‌, ಜಾಫರ್‌ ಷರೀಫ್‌ ಅವರಿಗೆ ಕಾಂಗ್ರೆಸ್‌ ಕಚೇರಿಯಲ್ಲಿ ಶ್ರದ್ಧಾಂಜಲಿ


ಅವರು ಮಾಜಿ ಸಚಿವ, ಚಿತ್ರನಟ ಡಾ.ಅಂಬರೀಷ್‌ ಹಾಗೂ ಕೇಂದ್ರದ ಮಾಜಿ ಸಚಿವ ಜಾಫರ್‌ ಷರೀಫ್‌ ಅವರಿಗೆ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಮೃತರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.

ಇಂದಿರಾ ಗಾಂಧಿ ಅವರಿಗೆ ನಿಕಟವರ್ತಿಯಾಗಿದ್ದ ಷರೀಫ್‌ ಅವರು ಕೇಂದ್ರದ ಸಚಿವರಾಗಿದ್ದಾಗ ಕರ್ನಾಟಕದ ಸಮಸ್ಯೆಗಳ ಬಗ್ಗೆ ದನಿ ಎತ್ತುತ್ತಿದ್ದರು. ಈ ಇಬ್ಬರೂ ನಾಯಕರು ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿದ್ದು, ಪಕ್ಷ ಕ್ಕೂ ಹಾಗೂ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದರು.

ಅಂಬರೀಷ್‌ ಅವರು ಕನ್ನಡದ ಪ್ರತಿಭಾನ್ವಿತ ನಟನಾಗಿದ್ದು, ಕನ್ನಡ ಚಿತ್ರರಂಗ ಹಾಗೂ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಅಸ್ತಿತ್ವ ಹೊಂದಿದ್ದರು. ಸ್ನೇಹಜೀವಿಯಾಗಿದ್ದ ಅವರು ಎಲ್ಲರನ್ನೂ ಆತ್ಮೀಯತೆಯಿಂದ ಮಾತನಾಡಿಸುತ್ತಿದ್ದರು. ನಟನೆಗಾಗಿ ಹಲವಾರು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದ ಅವರದ್ದು ಬಹುಮುಖ ಪ್ರತಿಭೆಯಾಗಿತ್ತು. ಕನ್ನಡ ಚಿತ್ರರಂಗದಲ್ಲಿ ಯಾವುದೇ ಸಮಸ್ಯೆಗಳು ಬಂದರೂ ಅದನ್ನು ಬಗೆಹರಿಸುವಲ್ಲಿ ಅಂಬರೀಷ್‌ ಅವರ ಪಾತ್ರ ಗಣನೀಯ ಎಂದರು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಶ್ರೀವತ್ಸ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್‌, ಬ್ಲಾಕ್‌ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ತಿಪ್ಪೂರು ಎಂ.ಬೈರೇಗೌಡ, ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಕೆ.ಜಿ.ಅಶೋಕ್‌, ಪ್ರಧಾನ ಕಾರ್ಯದರ್ಶಿ ಯೋಗ ನಟರಾಜ್‌, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರೇವತಿ ಅನಂತರಾಮ್‌, ಕಸಬಾ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವೆಂಕಟೇಶ್‌, ಎಸ್ಸಿ ನಗರ ಘಟಕದ ಅಧ್ಯಕ್ಷ ಬಿ.ಮುನಿರಾಜು, ನಗರಸಭೆ ನಾಮಿನಿ ಸದಸ್ಯ ಅಂಜನಮೂರ್ತಿ, ಯುವ ಕಾಂಗ್ರೆಸ್‌ ತಾಲೂಕು ಅಧ್ಯಕ್ಷ ರಾಜೇಶ್‌,ಯೋಗ ನಟರಾಜ್‌, ಕಾಂಗ್ರೆಸ್‌ ಹಿರಿಯ ಮುಖಂಡರಾದ ತಿ.ರಂಗರಾಜು, ಜವಾಜಿ ಸೀತಾರಾಂ, ಅಲ್ಪಸಂಖ್ಯಾತರ ಘಟಕದ ಬಷೀರ್‌, ಹಿಂದುಳಿದ ವರ್ಗದ ನಗರ ಘಟಕದ ಅಧ್ಯಕ್ಷ ಪು.ಮಹೇಶ್‌ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ