ಆ್ಯಪ್ನಗರ

ವಾಲ್ಮೀಕಿ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ

ರಾಷ್ಟ್ರದ ಮಹಾ ತತ್ತ್ವಜ್ಞಾನಿಯೆಂದೇ ಖ್ಯಾತಿ ಗಳಿಸಿರುವ ಮಹರ್ಷಿ ವಾಲ್ಮೀಕಿಯವರ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾದುದಾಗಿವೆ ಎಂದು ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ ಹೇಳಿದರು.

Vijaya Karnataka 25 Oct 2018, 3:08 pm
ಹೊಸಕೋಟೆ: ರಾಷ್ಟ್ರದ ಮಹಾ ತತ್ತ್ವಜ್ಞಾನಿಯೆಂದೇ ಖ್ಯಾತಿ ಗಳಿಸಿರುವ ಮಹರ್ಷಿ ವಾಲ್ಮೀಕಿಯವರ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾದುದಾಗಿವೆ ಎಂದು ಮಾಜಿ ಸಚಿವ ಬಿ.ಎನ್‌.ಬಚ್ಚೇಗೌಡ ಹೇಳಿದರು.
Vijaya Karnataka Web valmiki messages are eternal
ವಾಲ್ಮೀಕಿ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತ


ಅವರು ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಎಸ್‌ಟಿ ಮೋರ್ಚಾ ವತಿಯಿಂದ ಏರ್ಪಡಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ರಾಷ್ಟ್ರದ ಐತಿಹಾಸಿಕ ಪರಂಪರೆಯ ಬಗ್ಗೆ ಜನಸಾಮಾನ್ಯರಲ್ಲಿ ಗೌರವ ಮೂಡಿಸುವಲ್ಲಿ ವಾಲ್ಮೀಕಿಯವರ ರಾಮಾಯಣ ಸಹಕಾರಿಯಾಗಿದೆ. ಇಂತಹ ಮಹಾನ್‌ ವ್ಯಕ್ತಿಯನ್ನು ಗೌರವಿಸಬೇಕಾದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದ್ದು ಸಮುದಾಯದವರ ಆರ್ಥಿಕ, ಸಾಮಾಜಿಕ ಬೆಳವಣಿಗೆಯೊಂದಿಗೆ ರಾಜಕೀಯವಾಗಿಯೂ ಸೂಕ್ತ ಪ್ರಾತಿನಿಧ್ಯ ನೀಡಬೇಕಾದ್ದು ಅತ್ಯವಶ್ಯವಾಗಿದೆ ಎಂದರು.

ರಾಜ್ಯ ವಾಲ್ಮೀಕಿ ಮಹಾಸಭಾದ ಖಜಾಂಚಿ ಬಸವಯ್ಯ ಮಾತನಾಡಿ ಕೇಂದ್ರ ಸರಕಾರ ಪರಿಶಿಷ್ಟ ಪಂಗಡಕ್ಕೆ ಒಳಪಟ್ಟಿರುವ ನಾಯಕ ಸಮುದಾಯಕ್ಕೆ ಶೇ. 7.5ರಷ್ಟು ಇರುವ ಮೀಸಲನ್ನು ರಾಜ್ಯದಲ್ಲಿ ಮಾತ್ರ ಶೇ.3ರಷ್ಟು ನಿಗದಿಪಡಿಸಿರುವ ಕಾರಣ ಬಹಳಷ್ಟು ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗದೆ ವಂಚಿತರಾಗುತ್ತಿದ್ದಾರೆ. ಇದರೊಂದಿಗೆ ಕೆಲವು ಜನಪ್ರತಿನಿಧಿಗಳ ಒತ್ತಡ, ಅಧಿಕಾರಿಗಳ ಕುತಂತ್ರದಿಂದಾಗಿ ಕೆಲವು ಹಿಂದುಳಿದ ವರ್ಗಗಳನ್ನು ಸಹ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುತ್ತಿರುವುದು ಸಮಸ್ಯೆಯನ್ನು ಮತ್ತಷ್ಟು ವೃದ್ಧಿಸಿದೆ. ಸೌಲಭ್ಯಗಳನ್ನು ಪಡೆಯಲು ಸುಳ್ಳು ಜಾತಿ ಪತ್ರಗಳನ್ನು ಪಡೆಯುತ್ತಿರುವುದು ಸಹ ನಿರಂತರವಾಗಿ ನಡೆಯುತ್ತಿದೆ. ಪ್ರತಿ ಜಿಲ್ಲೆ, ತಾಲೂಕು ಕೇಂದ್ರಗಳಲ್ಲಿ ವಾಲ್ಮೀಕಿ ಭವನ ನಿರ್ಮಿಸುವ ಬಗ್ಗೆ ಸರಕಾರ ಘೋಷಣೆ ಮಾಡಿದಾಗ್ಯೂ ಸಹ ಇದುವರೆವಿಗೂ ಅನುಷ್ಠಾನಗೊಂಡಿಲ್ಲ. ಜನಾಂಗಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹಕ್ಕುಗಳನ್ನು ಪಡೆಯಲು ಹೋರಾಟ ನಡೆಸಬೇಕಾದ್ದು ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ತಾಲೂಕು ಅಧ್ಯಕ್ಷ ಸಿ.ಮಂಜುನಾಥ್‌, ವಾಲ್ಮೀಕಿ ಸಮುದಾಯದ ಮುಖಂಡ ದೇವರಾಜ್‌ ಮಾತನಾಡಿದರು.

ಟಿಎಪಿಸಿಎಂಎಸ್‌ ಅಧ್ಯಕ್ಷ ಟಿ.ಸೊಣ್ಣಪ್ಪ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಬಿ.ಎಂ.ನಾರಾಯಣಸ್ವಾಮಿ, ರೇಷ್ಮೆ ಬೆಳೆಗಾರರ ಸಂಘದ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ನಿರ್ದೇಶಕ ಅಶ್ವಥ್‌, ಬಿಜೆಪಿ ಎಸ್‌ಟಿ ಮೋರ್ಚಾದ ತಾಲೂಕು ಅಧ್ಯಕ್ಷ ಚಿಕ್ಕಪ್ಪಯ್ಯ ಇನ್ನಿತರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ