ಆ್ಯಪ್ನಗರ

ಮಗನ ಅಂತರ್‌ಜಾತಿ ವಿವಾಹಕ್ಕೆ ಗ್ರಾಮಸ್ಥರಿಂದ ವಿರೋಧ: ತಂದೆ ಆತ್ಮಹತ್ಯೆ ಯತ್ನ

ಗ್ರಾಮಸ್ಥರ ವಿರೋದಧಿಂದ ಮೇಲೆ ಬೇಸರಗೊಂಡ ಕೃಷ್ಣಪ್ಪ ಸಾವಿಗೆ ಪ್ರಯತ್ನಿಸಿದ್ದಾರೆ.

Vijaya Karnataka Web 30 Aug 2019, 3:24 pm
ನೆಲಮಂಗಲ: ಮಗನ ಅಂತರ್‌ಜಾತಿ ವಿವಾಹಕ್ಕೆ ಗ್ರಾಮದಲ್ಲಿ ವಿರೋಧ ವ್ಯಕ್ತವಾದ್ದರಿಂದ ನೊಂದ ತಂದೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತಾಲೂಕಿನ ಆನಂದ ನಗರದಲ್ಲಿ ನಡೆದಿದೆ.
Vijaya Karnataka Web Poison


ಕೃಷ್ಣಪ್ಪ (53) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ.

ಕೃಷ್ಣಪ್ಪ ಅವರ ಮಗ ಶಿವಕುಮಾರ ಎನ್ನುವವರು ಕಿರಣ ಎಂಬ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದರು. ಅವರದು ಅಂತರ್ ಜಾತಿ ವಿವಾಹವಾಗಿದ್ದರಿಂದ ಗ್ರಾಮದಲ್ಲಿ ವಿರೋಧ ವ್ಯಕ್ತವಾಗಿತ್ತು. ಇದರಿಂದ ನೊಂದ ಡೆತ್ ನೋಟ್ ಬರೆದು ವಿಷ ಸೇವಿಸಿದ್ದಾರೆ.

ತೀವ್ರ ಅಸ್ವಸ್ಥಗೊಂಡಿರುವ ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ