ಆ್ಯಪ್ನಗರ

ಆಸ್ವತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಐಸಿಯು ಬೆಡ್ ಸಿಗದೆ ಮಹಿಳೆ ಸಾವು

ಕೆಲವು ಆಸ್ಪತ್ರೆಗಳು ಬೆಡ್ ಖಾಲಿಯಿಲ್ಲ ಎಂದರೆ, ಮತ್ತೆ ಕೆಲವು ಆಸ್ಪತ್ರೆಗಳು ಕೋವಿಡ್ ರಿಪೋರ್ಟ್ ಬಂದರೆ ಮಾತ್ರ ಚಿಕಿತ್ಸೆ ಕೊಡುವುದಾಗಿ ಹೇಳಿದ್ದವು. ಹೀಗಾಗಿ ಯಾವುದೇ ಆಸ್ಪತ್ರೆಯಲ್ಲಿ ಐಸಿಯು ಬೆಡ್‌ ಸಿಗದೆ ಶುಕ್ರವಾರ ಬೆಳಿಗ್ಗೆ ಹೊಸಕೋಟೆಯ ಸಮೇತನಹಳ್ಳಿಯ ಮಹಿಳೆ ಅಸುನೀಗಿದ್ದಾರೆ.

Vijaya Karnataka 3 Jul 2020, 4:34 pm
ಬೆಂಗಳೂರು ಗ್ರಾಮಾಂತರ: ಆಸ್ವತ್ರೆಯಲ್ಲಿ ತುರ್ತು ಚಿಕಿತ್ಸೆಗೆ ಐಸಿಯು ಬೆಡ್ ಸಿಗದೆ ಮಹಿಳೆಯೊಬ್ಬರು ಸಾವನ್ನಪ್ಪಿದ ಅಮಾನವೀಯ ಘಟನೆ ಹೊಸಕೋಟೆಯ ಸಮೇತನಹಳ್ಳಿಯಲ್ಲಿ ನಡೆದಿದೆ.
Vijaya Karnataka Web Ambulence


ಸಮೇತನಹಳ್ಳಿಯ ಮಹಿಳೆ ರಾಣಿ (45) ಕಳೆದ ಬುಧವಾರ ಮನೆಗೆ ಹೋಗುತ್ತಿದ್ದಾಗ ತಲೆ ತಿರುಗಿ ಕೆಳಗೆ ಬಿದ್ದಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲು ಕುಟುಂಬ ಸದಸ್ಯರು ಸತತ 4 ಗಂಟೆಗಳ ಕಾಲ ಆಸ್ವತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರೂ ಚಿಕಿತ್ಸೆಗೆ ದಾಖಲಿಸಿಕೊಂಡಿರಲಿಲ್ಲ.

ಕೊನೆಗೆ ಸಿಲಿಕಾನ್ ಸಿಟಿ ಆಸ್ವತ್ರೆಗೆ ದಾಖಲಿಸಲಾಗಿತ್ತು. ಆದರೆ ಈ ವೇಳೆ ಚಿಕಿತ್ಸೆ ನೀಡಿದ ವೈದ್ಯರು ಮೆದುಳಿಗೆ ಪೆಟ್ಟಾಗಿದ್ದು ಬೇರೆ ಆಸ್ವತ್ರೆಯ ಐಸಿಯುಗೆ ದಾಖಲಿಸುವಂತೆ ಸೂಚಿಸಿದ್ದರು.

ಹೀಗಾಗಿ ಕಳೆದ ರಾತ್ರಿಯಿಂದ ಐಸಿಯು ಬೆಡ್‌ಗಾಗಿ ಹಲವು ಆಸ್ವತ್ರೆಗಳಿಗೆ ಕುಟುಂಬಸ್ಥರು ಕರೆ ಮಾಡಿದ್ದರು. ಈ‌ ವೇಳೆ ಕೆಲವು ಆಸ್ಪತ್ರೆಗಳು ಬೆಡ್ ಖಾಲಿಯಿಲ್ಲ ಎಂದರೆ, ಮತ್ತೆ ಕೆಲವು ಆಸ್ಪತ್ರೆಗಳು ಕೋವಿಡ್ ರಿಪೋರ್ಟ್ ಬಂದರೆ ಮಾತ್ರ ಚಿಕಿತ್ಸೆ ಕೊಡುವುದಾಗಿ ಹೇಳಿದ್ದವು.

ಹೀಗಾಗಿ ಕಳೆದ ಎರಡು ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮಹಿಳೆ, ಶುಕ್ರವಾರ ಮುಂಜಾನೆ ಪ್ರಾಣ ಬಿಟ್ಟಿದ್ದಾರೆ. ಆಸ್ವತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಿಸಿಕೊಳ್ಳದ ಹಿನ್ನೆಲೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ