ಆ್ಯಪ್ನಗರ

ಮಹಿಳೆಯರು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಬೇಕು: ಸಿಇಒ ಲತಾ

ಗ್ರಾಮೀಣ ಭಾಗದಲ್ಲಿರುವ ಮಹಿಳೆಯರು, ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಮಾಡಲು ಅಗತ್ಯವಾಗಿರುವ ತರಬೇತಿಗಳನ್ನು ಕೆನರಾ ಬ್ಯಾಂಕ್‌ ತರಬೇತಿ ಸಂಸ್ಥೆ ಮೂಲಕ ನೀಡುತ್ತಿದ್ದು, ಆರ್ಥಿಕವಾಗಿ ಸಬಲತೆಯನ್ನು ಸಾಧಿಸುವ ಮೂಲಕ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಪಂ ಸಿಇಒ ಆರ್‌.ಲತಾ ಹೇಳಿದರು.

Vijaya Karnataka 9 Mar 2019, 5:00 am
ಸೂಲಿಬೆಲೆ : ಗ್ರಾಮೀಣ ಭಾಗದಲ್ಲಿರುವ ಮಹಿಳೆಯರು, ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗ ಮಾಡಲು ಅಗತ್ಯವಾಗಿರುವ ತರಬೇತಿಗಳನ್ನು ಕೆನರಾ ಬ್ಯಾಂಕ್‌ ತರಬೇತಿ ಸಂಸ್ಥೆ ಮೂಲಕ ನೀಡುತ್ತಿದ್ದು, ಆರ್ಥಿಕವಾಗಿ ಸಬಲತೆಯನ್ನು ಸಾಧಿಸುವ ಮೂಲಕ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಜಿಪಂ ಸಿಇಒ ಆರ್‌.ಲತಾ ಹೇಳಿದರು.
Vijaya Karnataka Web women should build self reliance life ceo lata
ಮಹಿಳೆಯರು ಸ್ವಾವಲಂಬನೆಯ ಬದುಕು ಕಟ್ಟಿಕೊಳ್ಳಬೇಕು: ಸಿಇಒ ಲತಾ


ಸೂಲಿಬೆಲೆ ಹೋಬಳಿ ಸೊಣ್ಣಳೀಪುರ ಗ್ರಾಮದಲ್ಲಿರುವ ಕೆನರಾ ಬ್ಯಾಂಕ್‌ ಟ್ರೈನಿಂಗ್‌ ಇನ್ಸಿಟ್ಯೂಟ್‌ ಫಾರ್‌ ಮೈಕ್ರೋ ಫೈನಾನ್ಸ್‌ ಸಂಸ್ಥೆ ವತಿಯಿಂದ ಶುಕ್ರವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆ ಎಲ್ಲ ಕ್ಷೇತ್ರಗಳಲ್ಲಿ ತನ್ನ ಸಾಮರ್ಥ್ಯ‌ವನ್ನು ತೋರಿಸುವಷ್ಟರ ಮಟ್ಟಿಗೆ ಬೆಳೆದಿದ್ದಾಳೆ. ನಾಲ್ಕು ಗೋಡೆಗಳ ಮಧ್ಯೆ ಜೀವನ ಸಾಗಿಸುತ್ತಿದ್ದ ಮಹಿಳೆಯರಿಗೆ ಈಗ ಹಲವಾರು ರೀತಿಯ ಅವಕಾಶಗಳು ಸಿಗುತ್ತಿದ್ದು, ಇದನ್ನು ಸಮರ್ಥವಾಗಿ ಬಳಕೆ ಮಾಡಿಕೊಂಡು ಜೀವನ ಮಟ್ಟವನ್ನು ಹೆಚ್ಚಿಸಿಕೊಳ್ಳಬೇಕು. ಬೆಳೆಯುತ್ತಿರುವ ತಂತ್ರಜ್ಞಾನಕ್ಕೆ ತಕ್ಕಂತೆ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕಾದ ಅನಿವಾರ‍್ಯತೆ ಎದುರಾಗಿದೆ ಎಂದು ಕರೆ ಕೊಟ್ಟರು.

ಗ್ರಾಮೀಣ ಮಹಿಳೆಯರಿಗೆ ಆಸಕ್ತಿಗೆ ಅನುಗುಣವಾಗಿ ಮಾಡುವಂತ ಕೆಲಸಗಳ ಬಗ್ಗೆ ತರಬೇತಿಯನ್ನು ನೀಡಿ ಅರ್ಹತೆಗೆ ಅನುಗುಣವಾಗಿ ಬ್ಯಾಂಕ್‌ ಗಳ ಮೂಲಕ ಸಾಲ ಸೌಲಭ್ಯವನ್ನು ಕಲ್ಪಿಸಲಾಗುತ್ತದೆ. ಸಾಧಿಸುವ ಛಲವನ್ನು ಪ್ರತಿಯೊಬ್ಬ ಮಹಿಳೆ ರೂಡಿಸಿಕೊಳ್ಳಬೇಕು. ಸಾಧನೆಗೆ ಯಾವುದೇ ಅಡ್ಡಿಯಲ್ಲ ಎಂಬುದನ್ನು ಅರಿತುಕೊಂಡು ಗುರಿಯತ್ತ ದಾಪುಗಾಲು ಹಾಕಬೇಕು. ಸರಕಾರದಿಂದ ಮಹಿಳೆಯರಿಗೆ ಸಿಗುವ ಎಲ್ಲ ರೀತಿಯ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಪ್ರಗತಿಯನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ಜಿಪಂ ಯೋಜನಾ ನಿರ್ದೇಶಕ ಕೆ.ಶಿವರುದ್ರಪ್ಪ, ಲೀಡ್‌ ಬ್ಯಾಂಕ್‌ ಮ್ಯಾನೇಜರ್‌ ಯಶವಂತ, ಹೊಸಕೋಟೆ ಕೆನರಾ ಬ್ಯಾಂಕ್‌ ಚೀಪ್‌ ಮ್ಯಾನೇಜರ್‌ ಕೆ.ಆರ್‌ ಶೈಲಾಜ, ಕೆನರಾ ಬ್ಯಾಂಕ್‌ ತರಬೇತಿ ಸಂಸ್ಥೆ ನಿರ್ದೇಶಕ ಸಿ.ರಾಧಾಕೃಷ್ಣ, ಉಪನ್ಯಾಸಕ ನಾರಾಯಣಸ್ವಾಮಿ, ಕೃಷ್ಣಮೂರ್ತಿ, ಸುಗುಣ, ನಾಗೇಶ್‌ ಹಾಜರಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ