ನಂದಗುಡಿ: ಸಮಾಜದ ಎಲ್ಲ ವರ್ಗಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಿ, ದೂರದೃಷ್ಟಿಯ ಯೋಜನೆಗಳನ್ನು ಸಿದ್ಧಪಡಿಸಿ ಅನುಷ್ಠಾನಗೊಳಿಸುವ ಏಕæೖಕ ಪಕ್ಷ ವಾಗಿದ್ದು, ಕಾಂಗ್ರೆಸ್ ಪಕ್ಷ ಕ್ಕೆ ತನ್ನದೇ ಆದ ಇತಿಹಾಸವಿದೆ. ಕಾರ್ಯಕರ್ತರು ಸಂಘಟಿತರಾಗಿ ಪಕ್ಷ ವನ್ನು ಬಲಪಡಿಸಬೇಕೆಂದು ನಂದಗುಡಿ ಕ್ಷೇತ್ರದ ಜಿಪಂ ಸದಸ್ಯ ಸಿ.ನಾಗರಾಜ್ ತಿಳಿಸಿದರು.
ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದಲ್ಲಿ ಶನಿವಾರ ನಡೆದ ಬೈಲನರಸಾಪುರ ಹಾಗೂ ಹೆತ್ತಕ್ಕಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಶಕ್ತಿ ಕಾಂಗ್ರೆಸ್ ಕಾರ್ಯಕರ್ತನ ಧ್ವನಿ ಅಭಿಯಾನ ಪೂರ್ವ ಸಿದ್ಧತಾ ಸಭೆ ಉದ್ದೇಶಿಸಿ ಅಧಿವರು ಮಾತನಾಡಿದರು.
ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯಗಳು ಮತ್ತು ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲಾಗುತ್ತದೆ. ಸಾರ್ವತ್ರಿಕ ಚುನಾವಣೆ ವೇಳೆಯಲ್ಲಿ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ಕಾಂಗ್ರೆಸ್ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದೆ. ಕಾಂಗ್ರೆಸ್ ಸರಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಿಸಲು ಪ್ರತಿಯೊಂದು ಮತಗಟ್ಟೆವಾರು ಸಮಿತಿಗಳನ್ನು ರಚಿಸಿ, ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿ ಜನಪರ ಯೋಜನೆಗಳನ್ನು ಸಾಮಾನ್ಯ ಜನರಿಗೆ ನೀಡಿದೆ. ಬಹುತೇಕ ಪ್ರಮುಖ ವಾಗ್ದಾನವನ್ನು ಈಡೇರಿಸಲಾಗಿದೆ ಎಂದರು.
2019ರ ಲೋಕಸಭೆ ಚುನಾವಣೆಗೆ ರಾಹುಲ್ ನೇರಧಿದೇತ್ವದಲ್ಲಿ ಕಾಂಗ್ರೆಸ್ ಪಕ್ಷ ವನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಧ್ವನಿಯಾಗಿ ಪಕ್ಷ ದ ಸಾಧನೆ, ಸಿದ್ಧಾಂತ ಒಪ್ಪಿ, ಸ್ವಯಂ ಪ್ರೇರಿತರಾಗಿ ಪಕ್ಷ ಕ್ಕೆ ಸೇರ್ಪಡೆಯಾಗಿ ಕಾರ್ಯಕರ್ತರಿಗೆ ಶಕ್ತಿಯಾಗಿ ಶಿಸ್ತನ್ನು ಮೈಗೂಡಿಸಿಕೊಂಡು ಪಕ್ಷ ದ ಗೆಲುವಿಗೆ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಹೊಸಕೋಟೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ರವೀಂದ್ರ, ನಂದಗುಡಿ ಹೋಬಳಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ ರಾಜಣ್ಣ, ಗ್ರಾಪಂ ಅಧ್ಯಕ್ಷೆ ಕವಿತ ರಮೇಶ್, ಭಾಗ್ಯಮ್ಮ ಶ್ರೀನಿವಾಸ್, ಮುನಿರಾಜ ಮಾರಸಂಡ್ರಹಳ್ಳಿ, ಡಿ.ಮಂಜುನಾಥ್, ಮುಖಂಡರಾದ ಹೆಡಕನಹಳ್ಳಿ ಮುನಿಆಂಜಿನಪ್ಪ, ನೆಲವಾಗಿಲು ದೇವರಾಜ್, ಮಹಮ್ಮದ್ ಅಸೀಫ್, ರೆಹಮಾನ್ ಖಾನ್, ಸಾದೀಪ್ ಅಹಮ್ಮದ್, ಮುನೀರ್, ಲಿಂಗಾಪುರ ಮಂಜುನಾಥ್, ಓಬಳಹಳ್ಳಿ ರಾಜಪ್ಪ, ಡೇರಿ ರಾಮೇಗೌಡ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.
ನಂದಗುಡಿ ಹೋಬಳಿಯ ಬೈಲನರಸಾಪುರ ಗ್ರಾಮದಲ್ಲಿ ಶನಿವಾರ ನಡೆದ ಬೈಲನರಸಾಪುರ ಹಾಗೂ ಹೆತ್ತಕ್ಕಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಶಕ್ತಿ ಕಾಂಗ್ರೆಸ್ ಕಾರ್ಯಕರ್ತನ ಧ್ವನಿ ಅಭಿಯಾನ ಪೂರ್ವ ಸಿದ್ಧತಾ ಸಭೆ ಉದ್ದೇಶಿಸಿ ಅಧಿವರು ಮಾತನಾಡಿದರು.
ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗೂ ಸರಕಾರದ ಸೌಲಭ್ಯಗಳು ಮತ್ತು ಯೋಜನೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಲಾಗುತ್ತದೆ. ಸಾರ್ವತ್ರಿಕ ಚುನಾವಣೆ ವೇಳೆಯಲ್ಲಿ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ಕಾಂಗ್ರೆಸ್ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದೆ. ಕಾಂಗ್ರೆಸ್ ಸರಕಾರದ ಯೋಜನೆಗಳು ಜನ ಸಾಮಾನ್ಯರಿಗೆ ತಲುಪಿಸಲು ಪ್ರತಿಯೊಂದು ಮತಗಟ್ಟೆವಾರು ಸಮಿತಿಗಳನ್ನು ರಚಿಸಿ, ಸಮಿತಿಯ ಪದಾಧಿಕಾರಿಗಳು ಮತ್ತು ಸದಸ್ಯರು ಒಗ್ಗಟ್ಟಿನಿಂದ ಕಾರ್ಯ ನಿರ್ವಹಿಸಿ ಜನಪರ ಯೋಜನೆಗಳನ್ನು ಸಾಮಾನ್ಯ ಜನರಿಗೆ ನೀಡಿದೆ. ಬಹುತೇಕ ಪ್ರಮುಖ ವಾಗ್ದಾನವನ್ನು ಈಡೇರಿಸಲಾಗಿದೆ ಎಂದರು.
2019ರ ಲೋಕಸಭೆ ಚುನಾವಣೆಗೆ ರಾಹುಲ್ ನೇರಧಿದೇತ್ವದಲ್ಲಿ ಕಾಂಗ್ರೆಸ್ ಪಕ್ಷ ವನ್ನು ಇನ್ನಷ್ಟು ಬಲಪಡಿಸುವ ಸಲುವಾಗಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಧ್ವನಿಯಾಗಿ ಪಕ್ಷ ದ ಸಾಧನೆ, ಸಿದ್ಧಾಂತ ಒಪ್ಪಿ, ಸ್ವಯಂ ಪ್ರೇರಿತರಾಗಿ ಪಕ್ಷ ಕ್ಕೆ ಸೇರ್ಪಡೆಯಾಗಿ ಕಾರ್ಯಕರ್ತರಿಗೆ ಶಕ್ತಿಯಾಗಿ ಶಿಸ್ತನ್ನು ಮೈಗೂಡಿಸಿಕೊಂಡು ಪಕ್ಷ ದ ಗೆಲುವಿಗೆ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಹೊಸಕೋಟೆ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ರವೀಂದ್ರ, ನಂದಗುಡಿ ಹೋಬಳಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಂ ರಾಜಣ್ಣ, ಗ್ರಾಪಂ ಅಧ್ಯಕ್ಷೆ ಕವಿತ ರಮೇಶ್, ಭಾಗ್ಯಮ್ಮ ಶ್ರೀನಿವಾಸ್, ಮುನಿರಾಜ ಮಾರಸಂಡ್ರಹಳ್ಳಿ, ಡಿ.ಮಂಜುನಾಥ್, ಮುಖಂಡರಾದ ಹೆಡಕನಹಳ್ಳಿ ಮುನಿಆಂಜಿನಪ್ಪ, ನೆಲವಾಗಿಲು ದೇವರಾಜ್, ಮಹಮ್ಮದ್ ಅಸೀಫ್, ರೆಹಮಾನ್ ಖಾನ್, ಸಾದೀಪ್ ಅಹಮ್ಮದ್, ಮುನೀರ್, ಲಿಂಗಾಪುರ ಮಂಜುನಾಥ್, ಓಬಳಹಳ್ಳಿ ರಾಜಪ್ಪ, ಡೇರಿ ರಾಮೇಗೌಡ ಹಾಗೂ ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.