ಆ್ಯಪ್ನಗರ

ವಿದ್ಯುತ್‌ ಅಪಘಾತಕ್ಕೆ ಯುವಕ ಬಲಿ

ವೆಲ್ಡಿಂಗ್ ಕೆಲಸ ಮಾಡುವ ವೇಳೆ ವಿದ್ಯುತ್‌ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟಿದ್ದಾನೆ.

Vijaya Karnataka Web 2 Jun 2018, 6:43 pm
ಕೋಡಿಗೇನಹಳ್ಳಿ: ವೆಲ್ಡಿಂಗ್ ಕೆಲಸ ಮಾಡುವ ವೇಳೆ ವಿದ್ಯುತ್‌ ಸ್ಪರ್ಶಿಸಿ ಯುವಕನೋರ್ವ ಮೃತಪಟ್ಟಿದ್ದಾನೆ.
Vijaya Karnataka Web current


ದೊಡ್ಡಬಳ್ಳಾಪುರದ ನೆರಳಗಟ್ಟ ಗ್ರಾಮದಲ್ಲಿನ ಲಕ್ಷ್ಮಿ ನಾರಾಯಣ ಪಿಳ್ಳೆ (27) ಮೃತ ದುರ್ಧೈವಿ.

ದೊಡ್ಡಮಾಲೂರು ಗ್ರಾಮ ವಿಕೆ ಫ್ಲವರ್ ಗ್ರೀನ್ ಹೌಸ್ ನಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಲಕ್ಷ್ಮೀ ನಾರಾಯಣ, ಅಚಾನಕ್‌ ಆಗಿ ವಿದ್ಯುತ್‌ ತಂತಿ ಮುಟ್ಟಿದ್ದಾನೆ. ಇದನ್ನು ಗಮನಿಸಿದ ಜೊತೆಗಾರರು ಕೂಡಲೇ ಸ್ವಿಚ್‌ ಆಫ್‌ ಮಾಡಿದ್ದಾರೆ. ತೀವ್ರ ಅಸ್ವಸ್ಥಗೊಂಡಿದ್ದಲಕ್ಷ್ಮೀ ನಾರಾಯಣ ಅವರನ್ನು ಕೋಡಿಗೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ