ಆ್ಯಪ್ನಗರ

ಮಕ್ಕಳ ಬೆಳವಣಿಗೆಗೆ ಮಾರ್ಗದರ್ಶನ ಅಗತ್ಯ

ಮಕ್ಕಳು ದೇವರ ಸ್ವರೂಪ. ಮಕ್ಕಳಿಗೆ ಯಾವುದು ಸರಿ, ಯಾವುದು ತಪ್ಪು ಕಲ್ಪನೆಯಿರುವುದಿಲ್ಲ. ಅವರಿಗೆ ಸರಿಯಾದ ಮಾರ್ಗದರ್ಶನ ಮಾಡುವುದು ಕುಟುಂಬ ಹಾಗೂ ಸಮಾಜದಲ್ಲಿನ ಎಲ್ಲರ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುನಿರಾಜು ಎಂ. ಹೇಳಿದರು.

ವಿಕ ಸುದ್ದಿಲೋಕ 26 Mar 2016, 4:27 pm
ಬೀದರ್: ಮಕ್ಕಳು ದೇವರ ಸ್ವರೂಪ. ಮಕ್ಕಳಿಗೆ ಯಾವುದು ಸರಿ, ಯಾವುದು ತಪ್ಪು ಕಲ್ಪನೆಯಿರುವುದಿಲ್ಲ. ಅವರಿಗೆ ಸರಿಯಾದ ಮಾರ್ಗದರ್ಶನ ಮಾಡುವುದು ಕುಟುಂಬ ಹಾಗೂ ಸಮಾಜದಲ್ಲಿನ ಎಲ್ಲರ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಮುನಿರಾಜು ಎಂ. ಹೇಳಿದರು.
Vijaya Karnataka Web
ಮಕ್ಕಳ ಬೆಳವಣಿಗೆಗೆ ಮಾರ್ಗದರ್ಶನ ಅಗತ್ಯ


ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲೂಕು ಮಕ್ಕಳ ರಕ್ಷಣಾ ಸಮಿತಿ, ತಾಲೂಕು ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಬೀದರ್ ತಾಲೂಕಿನ ಸ್ತ್ರೀ ಶಕ್ತಿ ಒಕ್ಕೂಟದ ಪ್ರತಿನಿಧಿಗಳಿಗೆ ಮಕ್ಕಳ ಸಂರಕ್ಷಣೆ ಕುರಿತು ನಡೆದ ಒಂದು ದಿನದ ಸಂವೇದನಾಶೀಲ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇಂದು ಹೆಣ್ಣು ಮಕ್ಕಳ ಮೇಲೆ ನಾನಾ ರೀತಿಯ ಅಮಾನವೀಯ ಕೃತ್ಯಗಳು ಜರುಗುತ್ತಿವೆ. ಇದು ತುಂಬಾ ವಿಷಾದನೀಯ ಎಂದ ಮುನಿರಾಜು, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ನಿಲ್ಲಲಿ ಎಂದು ಸ್ತ್ರೀ ಶಕ್ತಿ ಗುಂಪಿನ ಪ್ರತಿನಿಧಿಗಳಿಗೆ ಹಾಗೂ ಸದಸ್ಯರಿಗೆ ತಿಳಿಸಿದರು.

ಬೀದರ್ ತಾಲೂಕು ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ನಿರ್ಮಲಾ ಉದ್ಘಾಟಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪಿ.ಎಸ್.ಇಟಕಂಪಳ್ಳಿ ಮಾತನಾಡಿ, ಮಕ್ಕಳ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ಮಕ್ಕಳ ಪಾಲಕರ, ಗುರುಗಳ ಹಾಗೂ ಸಮಾಜದಲ್ಲಿರುವ ಪ್ರತಿಯೊಬ್ಬರ ಹೊಣೆಗಾರಿಕೆಯಿದೆ ಎಂದು ಹೇಳಿದರು.

ಬಾಲ ನ್ಯಾಯ ಮಂಡಳಿಯ ಸದಸ್ಯೆ ಕವಿತಾ ಹುಷಾರೆ ಮಾತನಾಡಿದರು.

ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿಯ ಸದಸ್ಯೆ ವೇದಮಣಿ ಮುಪ್ಪಾಲೆ ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಸಂಜಯಕುಮಾರ ಡಾಕುಳಗಿ, ಸೂರ್ಯಕಾಂತ ಮೊರೆ, ಸುಧಾಕರ ಎಲ್ಲಾನೋರ, ಚಿನ್ನಮ್ಮ ಹಾಗೂ ಸ್ತ್ರೀ ಶಕ್ತಿ ಗುಂಪಿನ ನೂರಾರು ಪ್ರತಿನಿಧಿಗಳು ಉಪಸ್ಥಿತರಿದ್ದರು. ಗೌರಿಶಂಕರ ಪರತಾಪೂರೆ ನಿರೂಪಿಸಿದರು. ಪ್ರಶಾಂತ ಬಿರಾದಾರ ಸ್ವಾಗತಿಸಿದರು. ಸಂತೋಷ ಖಾನಾಪೂರೆ ವಂದಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ