ಆ್ಯಪ್ನಗರ

ವಿಮಾನಯಾನ ಜ.26ರಿಂದ ಆರಂಭ

ನಗರದ ಚಿದ್ರಿ ಬಳಿಯಲ್ಲಿನ ವಿಮಾನ ನಿಲ್ದಾಣದ ಟರ್ಮಿನಲ್‌ ಕಟ್ಟಡವನ್ನು ಜಿಲ್ಲಾಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್‌ ಹಾಗೂ ಸಂಸದ ಭಗವಂತ ಖೂಬಾ ಸೋಮವಾರ ವೀಕ್ಷಣೆ ನಡೆಸಿದರು.

Vijaya Karnataka 18 Dec 2019, 9:47 pm
ಬೀದರ್‌:ನಗರದ ಚಿದ್ರಿ ಬಳಿಯಲ್ಲಿನ ವಿಮಾನ ನಿಲ್ದಾಣದ ಟರ್ಮಿನಲ್‌ ಕಟ್ಟಡವನ್ನು ಜಿಲ್ಲಾಉಸ್ತುವಾರಿ ಸಚಿವ ಪ್ರಭು ಬಿ.ಚವ್ಹಾಣ್‌ ಹಾಗೂ ಸಂಸದ ಭಗವಂತ ಖೂಬಾ ಸೋಮವಾರ ವೀಕ್ಷಣೆ ನಡೆಸಿದರು.
Vijaya Karnataka Web airline starting from jan 26
ವಿಮಾನಯಾನ ಜ.26ರಿಂದ ಆರಂಭ


ಇದೇ ವೇಳೆ ಸಚಿವರು, ಭಾರತೀಯ ವಿಮಾನ ನಿಲ್ದಾಣದ ಪ್ರಾಧಿಕಾರ ಅಧಿಕಾರಿಗಳು, ಕೆಎಸ್‌ಐಐಡಿಸಿ ತಜ್ಞರ ತಂಡ ಮತ್ತು ಎಂಜಿಆರ್‌ ಕಂಪೆನಿಯ ಅಧಿಕಾರಿಗಳಿಂದ ವಿಮಾನ ನಿಲ್ದಾಣದ ಪ್ರಗತಿಯ ಮಾಹಿತಿ ಪಡೆದರು. ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸ್ಥಳದಲ್ಲಿದ್ದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮತ್ತು ಇನ್ನಿತರ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಬಳಿಕ ಮಾತನಾಡಿದ ಸಚಿವರು, ಬೀದರ್‌ನಿಂದ ವಿಮಾನಯಾನ ಸೇವೆಯು 2020ರ ಜನವರಿ 26ರಂದು ಆರಂಭವಾಗಲಿದೆ. ಸದ್ಯ ಬೀದರ್‌- ಬೆಂಗಳೂರಿಗೆ ಸಂಚಾರ ಆರಂಭವಾಗಲಿದೆ. ಇಲ್ಲಿಂದ ವಿಮಾನಯಾನ ಸೇವೆ ಬೇಗ ಆರಂಭವಾಗಬೇಕು ಎಂಬುದು ಜಿಲ್ಲೆಯ ಸರ್ವಜನರ ಆಶಯವಾಗಿತ್ತು. ಹತ್ತಾರು ವರ್ಷಗಳಿಂದ ಇದಕ್ಕೆ ಪ್ರಯತ್ನ ನಡೆದಿತ್ತು ಎಂದು ತಿಳಿಸಿದರು.

ಸಂಸದ ಭಗವಂತ ಖೂಬಾ ಮಾತನಾಡಿ, ವಿಮಾನಯಾನ ಆರಂಭಕ್ಕೆ ಸಂಬಂಧಿಸಿದ ಕಾರ್ಯವು ಯುದ್ಧೋಪಾದಿಯಲ್ಲಿಆರಂಭವಾಗಿದೆ. ಈ ಕಾರ್ಯಕ್ಕೆ ವೇಗ ಹೆಚ್ಚಿಸುವ ಸಂಬಂಧ ಇಂದು ಜಿಲ್ಲಾಉಸ್ತುವಾರಿ ಸಚಿವರೊಂದಿಗೆ ವೀಕ್ಷಣೆ ನಡೆಸಲಾಗುತ್ತಿದೆ. ಆಯಾ ಇಲಾಖೆಗಳು ಕಾರ್ಯಪ್ರವೃತ್ತವಾಗಿವೆ. ಜ. 26ಕ್ಕೆ ವಿಮಾನಯಾನ ಸೇವೆ ಆರಂಭವಾಗಿ 10 ವರ್ಷಗಳ ಬಹುದಿನದ ಕನಸು ನನಸಾಗಲಿದೆ. ಮುಖ್ಯಮಂತ್ರಿಗಳಾದ ಬಿ.ಎಸ್‌.ಯಡಿಯೂರಪ್ಪ ಅವರು ಇದನ್ನು ಪ್ರಾರಂಭ ಮಾಡಿದ್ದರು. ಅಂತೆಯೇ ಅವರಿಂದಲೇ ಆರಂಭವಾಗುತ್ತಿರುವುದು ಸುದೈವ ಎಂದರು.

ಜಿಲ್ಲಾಧಿಕಾರಿ ಡಾ.ಹೆಚ್‌.ಆರ್‌. ಮಹಾದೇವ, ಜಿಪಂ ಸಿಇಒ ಗ್ಯಾನೇಂದ್ರಕುಮಾರ ಗಂಗವಾರ, ಜಿಲ್ಲಾಪೊಲೀಸ್‌ ವರಿಷ್ಠಾಧಿಕಾರಿ ಟಿ. ಶ್ರೀಧರ್‌, ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಲೋಕೋಪಯೋಗಿ ಇಲಾಖೆಯ ಅಭಿಯಂತರರಾದ ಪ್ರಶಾಂತ ಜಾದವ್‌ ಹಾಗೂ ಇತರರು ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ