ಆ್ಯಪ್ನಗರ

ಗಡವಂತಿಯಲ್ಲಿ ರೈತ ಆತ್ಮಹತ್ಯೆ

ಸಾಲದ ಬಾಧೆ ತಾಳದೆ ತಾಲೂಕಿನ ಗಡವಂತಿ ಗ್ರಾಮದಲ್ಲಿ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ವಿಕ ಸುದ್ದಿಲೋಕ 12 Mar 2016, 5:14 pm
ಹುಮನಾಬಾದ್: ಸಾಲದ ಬಾಧೆ ತಾಳದೆ ತಾಲೂಕಿನ ಗಡವಂತಿ ಗ್ರಾಮದಲ್ಲಿ ರೈತನೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
Vijaya Karnataka Web armer suicides
ಗಡವಂತಿಯಲ್ಲಿ ರೈತ ಆತ್ಮಹತ್ಯೆ


ಮಾಣಿಕಪ್ಪ ರಾಜಣ್ಣ ಗಂಗಸಿರಿ(55) ಮೃತಪಟ್ಟಿದ್ದು, ಪತ್ನಿ , ಒಬ್ಬ ಪುತ್ರಿ,ಇಬ್ಬರು ಪುತ್ರರನ್ನು ಅಗಲಿದ್ದಾರೆ.

ಈತ ಮೂರು ಎಕರೆ ಭೂಮಿ ಹೊಂದಿದ್ದು, ಪಟ್ಟಣದ ಎಸ್‌ಬಿಐ ಶಾಖೆಯಲ್ಲಿ 1.30 ಲಕ್ಷ ರೂ.,ಪ್ರಗತಿ ಕಷ್ಣಾ ಬ್ಯಾಂಕ್‌ನಲ್ಲಿ ಒಂದು ಲಕ್ಷ ರೂ. ಮತ್ತು ಖಾಸಗಿ ಸಾಲ ಇತ್ತು ಎನ್ನಲಾಗಿದೆ. ಎಂದಿನಂತೆ ಗುರುವಾರ ಮಧ್ಯಾಹ್ನ ಹೊಲಕ್ಕೆ ಹೋಗಿದ್ದ ಮಾಣಿಕಪ್ಪ ಮರಳಿ ಬಂದಿಲ್ಲ. ಶುಕ್ರವಾರ ಹೊಲಕ್ಕೆ ಹೋಗಿ ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಈ ಕುರಿತು ಹುಮನಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ